Suvendu Adhikari: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ - ಅಮಿತ್ ಶಾ ಮಹತ್ವದ ಘೋಷಣೆ ಏನದು ?

Suvendu Adhikari: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರನ್ನು ಬಿಜೆಪಿ ಅಧಿಕೃತವಾಗಿ ಆಯ್ಕೆ ಮಾಡಿದೆ. ಶನಿವಾರ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ದಾಖಲಿಸಿದೆ. ಈ ಗೆಲುವಿನ ನಂತರ ಮುಖ್ಯಮಂತ್ರಿ ರೇಸ್‌ನಲ್ಲಿ ಬಿಜೆಪಿಯ ಹಲವು ನಾಯಕರು ಇದ್ದರು. ಸುವೇಂದು ಅಧಿಕಾರಿ ಅವರ ಹೆಸರು ಮುಂಚೂಣಿಯಲ್ಲಿತ್ತು.

Suvendu Adhikari

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಈ ಬಾರಿ ಅಭೂತಪೂರ್ವ ಗೆಲುವು ದಾಖಲಿಸಿದೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಿದ ನಂತರ ಈ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ತೆಗೆದುಕೊಂಡಿದೆ.

ಮುಖ್ಯಮಂತ್ರಿ ಆಯ್ಕೆ ನಿರ್ಧಾರದ ಬಗ್ಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಿರ್ಣಾಯಕ ಸಭೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಕೋಲ್ಕತ್ತಾಗೆ ಬಂದಿದ್ದರು. ಪಶ್ಚಿಮ ಬಂಗಾಳದಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಪಕ್ಷದ ನಾಯಕರಾದ ಸುವೇಂದು ಅಧಿಕಾರಿ, ಅಗ್ನಿಮಿತ್ರ ಪಾಲ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ರೇಸ್‌ನಲ್ಲಿದ್ದರು.

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್ ರವಿ ಅವರು ಮೇ 7ರ ಗುರುವಾರ ರಾಜ್ಯ ಶಾಸಕಾಂಗ ಸಭೆಯನ್ನು ವಿಸರ್ಜಿಸಿದ್ದರು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಭರ್ಜರಿ ಗೆಲುವು ಮತ್ತು ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ ನಂತರ ವಿಧಾನಸಭೆ ವಿಸರ್ಜನೆ ಮಾಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಒಟ್ಟು ವಿಧಾನಸಭಾ 294 ಕ್ಷೇತ್ರಗಳಲ್ಲಿ 207 ಸ್ಥಾನಗಳ ಅದ್ಭುತ ಬಹುಮತದೊಂದಿಗೆ ಬಿಜೆಪಿ ಗೆದಿದೆ. ತೃಣಮೂಲ ಕಾಂಗ್ರೆಸ್ 80 ಸ್ಥಾನಗಳನ್ನು ಮಾತ್ರ ಗಳಿಸಲು ಸಾಧ್ಯವಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸುತ್ತಿರುವುದು ಇದೇ ಮೊದಲು. ಈ ಫಲಿತಾಂಶಗಳು ನರೇಂದ್ರ ಮೋದಿಯವರನ್ನು ಜವಾಹರಲಾಲ್ ನೆಹರು ನಂತರ ಪಶ್ಚಿಮ ಬಂಗಾಳವನ್ನು ಗೆದ್ದ ಮೊದಲ ಹಾಲಿ ಪ್ರಧಾನಿ ಎನ್ನುವ ಹೆಗ್ಗಳಿಕೆಯನ್ನೂ ಕೊಟ್ಟಿದೆ.

ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಧಿಕ್ಕರಿಸಿ, ಮಮತಾ ಬ್ಯಾನರ್ಜಿ ರಾಜಭವನಕ್ಕೆ ಹೋಗಿ ರಾಜೀನಾಮೆ ನೀಡಲು ನಿರಾಕರಿಸಿದ್ದರು. ನಾನು ಚುನಾವಣೆಯಲ್ಲಿ ಸೋತಿಲ್ಲ ಎಂದು ಮಮತಾ ಬ್ಯಾನರ್ಜಿ ಅವರು ವಾದ ಮಂಡಿಸಿದ್ದರು. ಚುನಾವಣಾ ಆಯೋಗದ ಪ್ರಕಾರ, ಮಮತಾ ಬ್ಯಾನರ್ಜಿ ಅವರು ಭವಾನಿಪುರದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ 15,00 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು.

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರನ್ನು ಸಹ ವೀಕ್ಷಕರನ್ನಾಗಿ ನೇಮಕ ಮಾಡಲಾಗಿತ್ತು.

ಪಂಚರಾಜ್ಯ ಫಲಿತಾಂಶ: ವಿಜಯ್-ಬಿಜೆಪಿ ಬಲವರ್ಧನೆ, ರಾಜಕಾರಣದ ಹೊಸ ದಿಕ್ಕಿನಲ್ಲಿ ಕರ್ನಾಟಕ, ದಕ್ಷಿಣ ಭಾರತಕ್ಕೆ ಹತ್ತಾರು ಸವಾಲು
ಪಂಚರಾಜ್ಯ ಫಲಿತಾಂಶ: ವಿಜಯ್-ಬಿಜೆಪಿ ಬಲವರ್ಧನೆ, ರಾಜಕಾರಣದ ಹೊಸ ದಿಕ್ಕಿನಲ್ಲಿ ಕರ್ನಾಟಕ, ದಕ್ಷಿಣ ಭಾರತಕ್ಕೆ ಹತ್ತಾರು ಸವಾಲು

ಪಶ್ಚಿಮ ಬಂಗಾಳದಲ್ಲಿ ಉದ್ವಿಗ್ನತೆ

ಪಶ್ಚಿಮ ಬಂಗಾಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ ಬಿಜೆಪಿ ನಾಯಕ ಮತ್ತು ಮುಖ್ಯಮಂತ್ರಿ ಆಕಾಂಕ್ಷಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಬುಧವಾರ ತಡರಾತ್ರಿ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಗ್ರಾಮದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.

ರಥ್ ಅವರ ಮೃತದೇಹವನ್ನು ಗುರುವಾರ ಪುರ್ಬಾ ಮೇದಿನಿಪುರ ಜಿಲ್ಲೆಯ ಅವರ ಹುಟ್ಟೂರಿಗೆ ತರಲಾಗಿತ್ತು. ಅವರ ತಲೆ, ಎದೆ ಮತ್ತು ಹೊಟ್ಟೆಗೆ ಗುಂಡೇಟಿನಿಂದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+