ಸ್ವಚ್ಛ ಭಾರತದ ರಾಯಭಾರಿ ಈ ಮಗು: ಮುದ್ದಾದ ವಿಡಿಯೋ ನೋಡಿದ್ದೀರಾ?
Recommended Video
ನವದೆಹಲಿ, ಜೂನ್ 3: ಮೊದಲ ಅವಧಿಯಲ್ಲಿ ಅಧಿಕಾರಕ್ಕೆ ಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಜಾರಿಗೆ ತಂದ ಅತಿ ಮಹತ್ವದ ಯೋಜನೆಗಳಲ್ಲಿ ಸ್ವಚ್ಛ ಭಾರತ ಅಭಿಯಾನವೂ ಒಂದು. ಮನೆ ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬ ಮಹಾತ್ಮಾ ಗಾಂಧಿ ಅವರ ಕನಸಿನ ಹೆಸರಿನಲ್ಲಿ ಬಿಜೆಪಿ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆ ದೇಶದೆಲ್ಲೆಡೆ ಸಂಚಲನ ಮೂಡಿಸಿತ್ತು.
ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಅನೇಕ ಮಹತ್ವದ ಕಾರ್ಯಕ್ರಮಗಳು ಜಾರಿಯಾಗಿವೆ. ಸಂಘಟನೆಗಳು, ಸಂಘ ಸಂಸ್ಥೆಗಳು, ವ್ಯಕ್ತಿಗಳು ವೈಯಕ್ತಿಕವಾಗಿ ಸ್ವಯಂಪ್ರೇರಣೆಯಿಂದ ಅನೇಕ ಕಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಹಾಗೆಯೇ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಮಾಡಿದ್ದಾರೆ.
ಆದರೆ, ಜನರಲ್ಲಿ ಸ್ವಚ್ಛತೆ ಬಗ್ಗೆ ಅಲ್ಪಮಟ್ಟಿನ ತಿಳಿವಳಿಕೆ ಹೆಚ್ಚಾಗಿದೆ ಎಂದರೂ ಸಂಪೂರ್ಣವಾಗಿ ಜಾಗೃತಿ ಮೂಡುವುದು ಇನ್ನೂ ಸಾಧ್ಯವಾಗಿಲ್ಲ. ಸ್ವಚ್ಛ ಮಾಡುವವರು ಹರಸಾಹಸ ಪಡುತ್ತಿದ್ದರೆ, ಕೊಳಕು ಮಾಡುವವರು ಸ್ವಚ್ಛತೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಯುವಜನರು ತಂಡೋಪತಂಡವಾಗಿ ನದಿ, ರಸ್ತೆ, ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದರೂ ಜನರ ಮನಸ್ಥಿತಿ ಬದಲಾಗಿಲ್ಲ.
ಹಾಗೆಂದು, ಆಶಾವಾದ ಕಡಿಮೆ ಆಗುವುದಿಲ್ಲ. ಅದಕ್ಕೊಂದು ಉದಾಹರಣೆ ಇಲ್ಲಿದೆ. ಪುಟಾಣಿಯೊಬ್ಬ ಬಳಸಿ ಬಿಸಾಡಿರುವ ಕಾಗದದ ಲೋಟಗಳನ್ನು ಕಸದ ಡಬ್ಬಿಗೆ ಹಾಕುವ ಮುದ್ದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ನೂರಾರು ಮಂದಿ ಹಂಚಿಕೊಂಡು ಮಗುವಿನ ಬುದ್ಧಿಮತ್ತೆಯನ್ನು ಕೊಂಡಾಡುತ್ತಿದ್ದಾರೆ.

ಸ್ವಚ್ಛ ಭಾರತದ ರಾಯಭಾರಿ
ಪುಟ್ಟ ಮಗು ಒಂದೊಂದೇ ಲೋಟವನ್ನು ಎತ್ತಿ ತನಗಿಂತಲೂ ಎತ್ತರವಿರುವ ಕಸದ ಡಬ್ಬಿಗೆ ಕಷ್ಟಪಟ್ಟು ಹಾಕುತ್ತದೆ. ಆ ಮಗು ಆಟವಾಡುವುದಕ್ಕೆ ಹಾಗೆ ಮಾಡುತ್ತಿರುವುದಲ್ಲ ಎನ್ನುವುದು ವಿಡಿಯೋ ನೋಡಿದಾಗ ಸ್ಪಷ್ಟವಾಗುತ್ತದೆ. ಅದರ ಅಮ್ಮ ಸಾಕು ಬಾ ಎಂದು ಪಕ್ಕಕ್ಕೆ ಎಳೆದುಕೊಂಡರೂ ಅವರ ತೆಕ್ಕೆಯಿಂದ ಬಿಡಿಸಿಕೊಂಡು ಹೋಗಿ ಆ ಮಗು ಮತ್ತೆ ಕಸವನ್ನು ಹೆಕ್ಕಿ ಡಬ್ಬಿಗೆ ಹಾಕುವ ಕಾರ್ಯದಲ್ಲಿ ಮಗ್ನವಾಗುತ್ತದೆ. ಈ ಚೆಂದದ ವಿಡಿಯೋಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
|
ಸ್ವಚ್ಛ ಭಾರತದ ಸ್ವಯಂಸೇವಕ
ಈ ವಿಡಿಯೋವನ್ನು ಹಂಚಿಕೊಂಡಿರುವ ಕ್ರೀಡಾಪಟು, ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ, ಮಗುವಿನ ಕಾರ್ಯವನ್ನು ಹೊಗಳಿದ್ದಾರೆ. 'ಹೃದಯಸ್ಪರ್ಶಿ! ನಿಮ್ಮ ಮಕ್ಕಳೂ ಸೇರಿದಂತೆ ಒಂದು ಯೋಜನೆ ಇಡೀ ದೇಶದ ಮೇಲೆ ಪ್ರಭಾವ ಬೀರಬಹುದು! ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಸ್ವಚ್ಛ ಭಾರತ ಅಭಿಯಾನದ ಪುಟಾಣಿ ಸ್ವಯಂಸೇವಕನನ್ನು ನೋಡಿ' ಎಂದು ಅವರು ಟ್ವೀಟ್ ಮಾಡಿದ್ದಾರೆ.
| Array |
ಇದು ನಮ್ಮ ಭರವಸೆ
ಈ ವಿಡಿಯೋ ನಮಗೆ ಭರವಸೆಯನ್ನು ನೀಡುತ್ತದೆ. ಉತ್ತಮ ಭವಿಷ್ಯಕ್ಕಾಗಿ ಭರವಸೆ ಎಂದು ಈಶ್ವರ್ ಶೆಟ್ಟಿ ಎಂಬುವವರು ವಿಡಿಯೋವನ್ನು ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.
|
ಸ್ವಚ್ಛ ಭಾರತದ ಉತ್ಸಾಹ
ಎಷ್ಟು ಮುದ್ದಾಗಿದೆ. ಭಾರತದ ಸಕಾರಾತ್ಮಕ ಹೋರಾಟಗಾರ. ಆತನಿಗೆ ಇನ್ನೂ ಮಾತನಾಡಲು ಬರುವುದಿಲ್ಲ. ಆದರೆ, ಸ್ವಚ್ಛ ಭಾರತವನ್ನು ಸೃಷ್ಟಿಸುವುದರಲ್ಲಿ ಆತನ ಉತ್ಸಾಹವನ್ನು ನೋಡಿ ಎಂದು ಇಂಡಿಯಾ ಪಾಸಿಟಿವ್ ಮೂವ್ಮೆಂಟ್ ಎಂಬ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
|
ರಾಯಭಾರಿ ಮಾಡಿ
ಈ ಮಗುವನ್ನು ಸ್ವಚ್ಛ ಭಾರತ ಚಳವಳಿಯ ರಾಯಭಾರಿಯನ್ನಾಗಿ ಮಾಡಿ ಎಂದು ಪ್ರಾಣೇಶ್ ರಂಗನ್ ಎಂಬುವವರು ವಿಡಿಯೋ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications