ವೈರಸ್ ವಿರುದ್ಧದ ಹೋರಾಟಕ್ಕೆ ಸ್ವಚ್ಛ ಭಾರತ ಅಭಿಯಾನ ನೆರವು: ಮೋದಿ
ನವದೆಹಲಿ, ಜನವರಿ 22: ಕೊರೊನಾ ವೈರಸ್ ವಿರುದ್ಧದ ಭಾರತದ ಹೋರಾಟವು ಮೇಕ್ ಇನ್ ಇಂಡಿಯಾ ಯೋಜನೆ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.
ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿನ ಲಸಿಕೆ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಸ್ಯೆಯು ಉಲ್ಬಣವಾಗುವವರೆಗೂ ಕಾಯದೆ, ಭಾರತವು ತಕ್ಷಣದ ಹಾಗೂ ಪೂರ್ವಭಾವಿ ನಿರ್ಧಾರಗಳನ್ನು ತೆಗೆದುಕೊಂಡಿತ್ತು ಎಂದರು.
ಸ್ವಚ್ಛಭಾರತ ಅಭಿಯಾನವನ್ನು ಕೊಂಡಾಡಿದ ಮೋದಿ, ವೈರಸ್ ವಿರುದ್ಧದ ಹೋರಾಟಕ್ಕೆ ಸ್ವಚ್ಚತೆ ಸಹಾಯ ಮಾಡಿತು ಎಂದರು. 'ಮೇಡ್ ಇಂಡಿಯಾ ಪರಿಹಾರಗಳೊಂದಿಗೆ ನಾವು ಲಸಿಕೆ ಹರಡುವುದನ್ನು ನಿಯಂತ್ರಿಸಿದೆವು ಮತ್ತು ನಮ್ಮ ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಿದೆವು' ಎಂದು ತಿಳಿಸಿದರು.

'ಮಾಸ್ಕ್ಗಳು ಮತ್ತು ಸ್ಯಾನಿಟೈಸರ್ನ ಸಾಮೂಹಿಕ ಉತ್ಪಾದನೆಯಿಂದ ಹಿಡಿದು ಕೊರೊನಾ ವೈರಸ್ ಲಸಿಕೆಯ ಅಭಿವೃದ್ಧಿಯವರೆಗೆ ದೇಶ ಬೆಳೆದಿದೆ. ಈ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶದ ಜನತೆ ಹಗಲು ರಾತ್ರಿ ಹೋರಾಡಿದ್ದಾರೆ' ಎಂದು ಮೋದಿ ಹೇಳಿದರು.
ಆತ್ಮನಿರ್ಭರ ಭಾರತ ಯೋಜನೆಯು ದೇಶದ ದೈನಂದಿನ ಜೀವನದ ಭಾಗವಾಗಿದೆ. ಅದರ ಹುರುಪು ಕ್ರಿಕೆಟ್ನಿಂದ ಕೋವಿಡ್ ನಿರ್ವಹಣೆಯವರೆಗೂ ಹರಡಿದೆ. ಇಂದಿನ ಭಾರತ ಸಮಸ್ಯೆಗಳನ್ನು ಪರಿಹರಿಸಲು ಪ್ರಯೋಗಗಳ ಮೇಲೆ ಕೆಲಸ ಮಾಡಲು ಹಿಂಜರಿಯುತ್ತಿಲ್ಲ. ಜಗತ್ತಿನ ಅತಿ ದೊಡ್ಡ ಶೌಚಾಲಯ ಕಟ್ಟಡ, ಮನೆ ಒದಗಿಸುವುದು, ಶುದ್ಧ ಕುಡಿಯುವ ನೀರು ಮತ್ತು ಲಸಿಕೆ ಕಾರ್ಯಕ್ರಮಗಳು ನಡೆಯುತ್ತಿದೆ ಎಂದು ಮೋದಿ ತಿಳಿಸಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications