'ಕೈಲಾಸ' ದೇಶಕ್ಕೆ ತೆರಳುವವರಿಗೆ ವಿಶೇಷ ಸೌಲಭ್ಯದ ಕೊಡುಗೆ ಘೋಷಿಸಿದ ಸ್ವಾಮಿ ನಿತ್ಯಾನಂದ, ಏನದು? ತಿಳಿಯಿರಿ
ಭಾರತದಿಂದ ನಾಪತ್ತೆಯಾದ ಹೊಸ ದೇಶ 'ಕೈಲಾಸ' ಸ್ಥಾಪಿಸಿರುವ ಸ್ವಾಮಿ ನಿತ್ಯಾನಂದ, ಇದೀಗ ಆದೇಶದ ಇ-ಪೌರತ್ವ ಮತ್ತು ಇ-ವೀಸಾಗೆ ನಿತ್ಯಾನಂದ ಅರ್ಜಿ ಆಹ್ವಾನಿಸಿದ್ದಾನೆ.
ನವದೆಹಲಿ, ಮಾರ್ಚ್ 05: ದೇಶದಲ್ಲಿ ಲೈಂಗಿಕ ದೌರ್ಜನ್ಯ ಸೇರಿದಂತೆ ಹತ್ತಾರು ಆರೋಪ ಎದುರಿಸುತ್ತಿದ್ದ ಬೆಂಗಳೂರಿನ ಬಿಡದಿಯ ಸ್ವಯಂಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಪರಾರಿಯಾಗಿದ್ದ. ಬಳಿಕ 'ಕೈಲಾಸ ದೇಶ' ಸ್ಥಾಪಿಸಿದ್ದ. ಇದೀಗ ಆದೇಶದ ಇ-ಪೌರತ್ವ ಮತ್ತು ಇ-ವೀಸಾಗೆ ನಿತ್ಯಾನಂದ ಅರ್ಜಿ ಆಹ್ವಾನಿಸಿದ್ದಾನೆ.
ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ನಿತ್ಯಾನಂದ ತನ್ನ ಕೈಲಾಸ ದೇಶಕ್ಕೆ ಆಗಮಿಸುವವರಿಗೆ ಪೌರತ್ವ, ವೀಸಾ ನೀಡುವುದರ ಜೊತೆಗೆ ಒಂದಷ್ಟು ವಿಶೇಷ ಸವಲತ್ತು ನೀಡುವುದಾಗಿ ಉಲ್ಲೇಖಿಸಿದ್ದಾನೆ. ಭಾರತದಿಂದ ನಾಫತ್ತೆಯಾಗಿ ನಿಗೂಢ ಸ್ಥಳದಲ್ಲಿದ್ದ ಎನ್ನುವಷ್ಟರಲ್ಲಿ ಈಕ್ವೆಡಾರ್ ಬಳಿ ಕೈಲಾಸ್ ದೇಶ ಸ್ಥಾಪಿಸಿಕೊಂಡಿದ್ದಾನೆ. ಅಲ್ಲದೇ ಸ್ವಂತ ವೆಬ್ಸೈಟ್ ಹೊಂದಿರುವ ಆತ (kailasa.org/e-citizen) ಅದರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾನೆ ಎಂದು ವರದಿ ಯಾಗಿದೆ.

ನಿತ್ಯಾನಂದ ತಿಳಿಸಿರುವ ಸವಲತ್ತುಗಳು ಯಾವವು?
'ಕೈಲಾಸ ದೇಶ'ದ ಇ-ಪೌರತ್ವ ಪಡೆದವರಿಗೆ ನಿತ್ಯಾನಂದ ವಿಶೇಷ ಸೌಲಭ್ಯ ಕಲ್ಪಿಸುವುದಾಗಿ ವೆಬ್ಸೈಟ್ನಲ್ಲಿ ಹೇಳಿಕೊಂಡಿದ್ದಾನೆ. ಅದರ ವಿವರಗಳು ಹೀಗಿವೆ. ಕೈಲಾಸಕ್ಕೆ ಹೋಗಬಯಸುವ ಹೊಸ ಪ್ರಜೆಗಳಿಗೆ ವಿಶೇಷ ಹೋಮ ಮತ್ತು ಅಧ್ಯಾತ್ಮಿಕ ಸೇವೆ, ಸಂಸ್ಕೃತ ಮಂತ್ರಗಳ ಕಲಿಕಾ ಸೌಲಭ್ಯ ನಿತ್ಯಾನಂದನ ವಿಶೇಷ ದರ್ಶನ, ಆಶೀರ್ವಾದ, ಆಧ್ಯಾತ್ಮಿಕ ಮನೋಭಾವ ಬೆಳೆಸಿಕೊಳ್ಳಲು ಪೂರಕ ವಾತಾವರಣ ಸೇರಿದಂತೆ ಹಲವು ಸವಲತ್ತು ಕಲ್ಪಿಸುವುದಾಗಿ ತಿಳಿಸಿದ್ದಾನೆ.
ಕಳೆದ ತಿಂಗಳು ವಿಶ್ವಸಂಸ್ಥೆಯಿಂದ ನಡೆದ ಸಭೆಯಲ್ಲಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡು ಅಚ್ಚರಿ ಮೂಸಿಡಿದ್ದರು. ಪ್ರತಿನಿಧಿಗಳಲ್ಲಿ ಒಬ್ಬರಾದ ವಿಜಯಪ್ರಿಯಾ ನಿತ್ಯಾನಂದಳ ಬಗ್ಗೆ, ಆಕೆಯ ಹಿನ್ನೆಲೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಆದರೆ ಕೈಲಾಸ ದೇಶದ ಸದಸ್ಯರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದಿಲ್ಲ ಎಂದು ವಿಶ್ವಸಂಸ್ಥೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದರು.

ವಿಶ್ವಸಂಸ್ಥೆಯ ಸಭೆಯಲ್ಲಿ ವಿಜಯಪ್ರಿಯಾ ನಿತ್ಯಾನಂದ, ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರಿಗೆ' ರಕ್ಷಣೆ ನೀಡಬೇಕು ಎಂದು ಈ ಸಭೆಯಲ್ಲಿ ಕೋರಿದ್ದರು. ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶರಾದ ನಿತ್ಯಾನಂದ ಅವರು ಹಿಂದೂ ಧರ್ಮದ ಸ್ಥಳೀಯ ಸಂಪ್ರದಾಯಗಳು ಮತ್ತು ಜೀವನಶೈಲಿಯನ್ನು ಪುನರುಜ್ಜೀವನಗೊಳಿಸಿದ್ದಕ್ಕಾಗಿ ತೀವ್ರವಾದ ಕಿರುಕುಳ ಅನುಭವಿಸಿದರು ಎಂದರು. ನಿತ್ಯಾನಂದರನ್ನು ಅವರ ಸ್ವ ದೇಶದಿಂದ ಗಡಿಪಾರು ಮಾಡಿಲಾಯಿತು ಎಂದು ಆಕೆ ಹೇಳಿದಳು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications