ರಾಮಸೇತು ಬಗ್ಗೆ ಹೇಳುತ್ತಾ ನೆಹರೂ-ಎಡ್ವಿನಾ ಸಂಬಂಧದ ಬಗ್ಗೆ ಸ್ವಾಮಿ ಟ್ವೀಟ್
ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸಲು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸೋಮವಾರ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ವೇಳೆ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಹಾಗೂ ಬ್ರಿಟಿಷರ ಕೊನೆ ವೈಸ್ ರಾಯ್ ಮೌಂಟ್ ಬ್ಯಾಟನ್ ಪತ್ನಿ ಎಡ್ವಿನಾರ ಸಂಬಂಧದ ಬಗ್ಗೆಯೂ ಪ್ರಸ್ತಾವ ಮಾಡಿದ್ದಾರೆ.
ಸೇತುಸಮುದ್ರಂ ಯೋಜನೆ ಬಗ್ಗೆ ಸರಕಾರದಿಂದ ಸುಪ್ರೀಂ ಕೋರ್ಟ್ ಗೆ ಹೇಳಿಸುವುದಕ್ಕೆ ನನಗೆ ಹಾಗೂ ಗಡ್ಕರಿಗೆ ನಾಲ್ಕು ವರ್ಷ ಸಮಯ ಹಿಡಿಸಿದೆ. ಇದೀಗ ನಾಲ್ಕೂ ಮುಕ್ಕಾಲು ವರ್ಷದ ನಂತರ ರಾಮಸೇತು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಅಲ್ಲ. ಎಡ್ವಿನಾ ಜತೆ ನೆಹರೂ ಅನೈತಿಕ ಸಂಬಂಧ ಹೊಂದಿದ್ದ ಶಿಮ್ಲಾದಲ್ಲಿನ ಕಟ್ಟಡವನ್ನು ಘೋಷಣೆ ಪಾರಂಪರಿಕ ಸ್ಥಳ ಮಾಡಲಾಗಿದೆ. ರಾಮಸೇತು ಮಾಡಬಾರದಾ? ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನ ಟೀಕಾಕಾರರು ನೆಹರೂ ಹಾಗೂ ಎಡ್ವಿನಾ ಸಂಬಂಧದ ಬಗ್ಗೆ ಆಗಾಗ ಪ್ರಸ್ತಾವ ಮಾಡುತ್ತಾರೆ. ಇನ್ನು ಸುಬ್ರಮಣಿಯನ್ ಸ್ವಾಮಿ ಶಿಮ್ಲಾದ ಯಾವ ಕಟ್ಟಡದಲ್ಲಿ ನೆಹರೂ ಅವರು ಎಡ್ವಿನ್ ರನ್ನು ಭೇಟಿ ಆಗುತ್ತಿದ್ದರು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಆದರೆ ಭಾರತ-ಪಾಕಿಸ್ತಾನ ವಿಭಜನೆಯ ಅಂತಿಮ ಸುತ್ತಿನ ಮಾತುಕತೆ ನಡೆದ ವೈಸ್ ರೆಗಲ್ ಲಾಡ್ಜ್, ಈಗ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಡ್ ಸ್ಟಡೀಸ್ ಆಗಿದ್ದು, ಅದು ಪಾರಂಪರಿಕ ಸ್ಥಳ ಆಗಿದೆ.

ರಾಮಸೇತು ಎಂಬುದು ಸುಣ್ಣದ ಕಲ್ಲಿನ ಸರಣಿಯು ತಮಿಳುನಾಡಿನ ರಾಮೇಶ್ವರಂ ಹಾಗೂ ಶ್ರೀಲಂಕಾದ ಮನ್ನಾರ್ ದ್ವೀಪದ ಮಧ್ಯೆ ಇದೆ. ಇದು ಹಿಂದೂಗಳ ನಂಬಿಕೆಯಾದ ರಾಮನ ಸುತ್ತ ಇದೆ. ಇದನ್ನು ರಾಮನ ಸೇನೆ ನಿರ್ಮಿಸಿತು ಎಂಬ ನಂಬಿಕೆ ಇದೆ. ಈ ರಾಮ ಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಥಳ ಎಂದು ಘೋಷಿಸುವಂತೆ ಸ್ವಾಮಿ ಕಳೆದ ವರ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
It took me&Gadkari 4 years to make Govt. tell SC that Sethusamundram project has been scrapped. Now after 4 3/4 years Ram Setu is not a National Heritage Monument. The building in Shimla where Nehru had his illicit affair with Edwina has been declared so. Not Ram Setu?!!
— Subramanian Swamy (@Swamy39) 14 January 2019
ಹಾಗೊಂದು ವೇಳೆ ಘೋಷಣೆಯಾದರೆ ಈ ಸ್ಥಳದ ಸುತ್ತಮುತ್ತ ಯಾವುದೇ ಅಭಿವೃದ್ಧಿ ಹಾಗೂ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ. ರಾಮಸೇತುವಿಗೆ ತೊಂದರೆ ಆಗುವ ಸೇತುಸಮುದ್ರಮ್ ಶಿಪ್ಪಿಂಗ್ ಚಾನಲ್ ಯೋಜನೆ ಬದಲಾಯಿಸುತ್ತೇವೆ ಎಂದು ಕಳೆದ ಬಾರಿ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಹೇಳಿತ್ತು. ಕಳೆದ ವರ್ಷ ಮಾರ್ಚ್ ನಲ್ಲೆ ಮೋದಿ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ, ಆ ಯೋಜನೆಯಿಂದ ರಾಮ್ ಸೇತುವಿಗೆ ಏನೂ ತೊಂದರೆ ಇಲ್ಲ ಎಂದಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications