Swati Maliwal Assault Case: ದೆಹಲಿ ಸಿಎಂ ಆಪ್ತ ಸಹಾಯಕನ ವಿರುದ್ಧ FIR, ಶೀಘ್ರವೇ ಬಂಧನ?
ನವದೆಹಲಿ, ಮೇ 16: ದೆಹಲಿಯಲ್ಲಿ ಆಡಳಿತಲ್ಲಿರುವ ಆಮ್ ಆದ್ಮಿ ಪಕ್ಷದ ಸಂಸದೆ 'ಸ್ವಾತಿ ಮಲಿವಾಲ್' (MP Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ (Bibhav Kumar) ಅವರ ಮೇಲೆ ಯಾವ ಕ್ಷಣದಲ್ಲಾದರೂ ಎಫ್ಐಆರ್ ದಾಖಲಿಸಿ, ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಹೌದು, ಆಮ್ ಆದ್ಮಿ ಪಕ್ಷ (ಎಎಪಿ) ಮುಖ್ಯಸ್ಥರು ಆದ ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಸಂಸದೆ ಮೇಲೆ ಬಿಭವ್ ಕುಮಾರ್ ಅವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಪ್ರಕರಣ ಸಂಬಂಧ ಹಲ್ಲೆಗೆ ಒಳಗಾದ ಎಎಪಿ ಸಂಸದೆ ಮತ್ತು 'ದೆಹಲಿ ಮಹಿಳಾ ಆಯೋಗ'ದ ಮಾಜಿ ಅಧ್ಯಕ್ಷೆ 'ಸ್ವಾತಿ ಮಲಿವಾಲ್' ಅವರು ಗುರುವಾರ ಸಂಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಕುರಿತಂತೆ ದೂರು ದಾಖಲಿಸಿದ್ದಾರೆ. ಸಿಎಂ ನಿವಾಸದಲ್ಲಿ ಹಲ್ಲೆ ಮಾಡಿದ ಬಿಭವ್ ಕುಮಾರ್ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇಂದು ಇಲ್ಲವೇ ನಾಳೆ ಆರೋಪಿ ಪೊಲೀಸ್ ವಶಕ್ಕೆ?
ದೆಹಲಿ ಪೊಲೀಸರು ಯಾವ ಕ್ಷಣದಲ್ಲಾದರೂ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಬಹುದು. ಎಫ್ಐಆರ್ ದಾಖಲಿಸುತ್ತಿದ್ದಂತೆ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ದಟ್ಟವಾಗಿವೆ ಎಂದು ದೆಹಲಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಘಟನೆಯು ಬೆಳಕಿಗೆ ಬರುತ್ತಿದ್ದಂತೆ ದೆಹಲಿ ಪೊಲೀಸ್ ಅಧಿಕಾರಿಗಳ ತಂಡವು ಗುರುವಾರ ನವದೆಹಲಿಯಲ್ಲಿರುವ ಸ್ವಾತಿ ಮಲಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಘಟನೆ, ಆರೋಪ ಕುರಿತು ಪೊಲೀಸರು ಸಂಸದೆ ಸ್ವಾತಿ ಮಲಿವಾಲ್ ಅವರನ್ನು ನಾಲ್ಕು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆ ಖಂಡಿಸಿದ ದೆಹಲಿ ಮಹಿಳಾ ಆಯೋಗ, ನೋಟಿಸ್
ಒಬ್ಬ ಸಂಸದೆ ಮೇಲೆ ಸಿಎಂ ನಿವಾಸದಲ್ಲೇ ಹಲ್ಲೆ ನಡೆದಿದೆ. ಇನ್ನೂ ಜನಸಾಮಾನ್ಯರಿಗೆ ಈ ಸರ್ಕಾರದಿಂದ ರಕ್ಷಣೆ ಸಿಗುತ್ತದೆಯೇ ಎಂಬ ಅನುಮಾನಕ್ಕೆ ಈ ಘಟನೆ ಎಡೆಮಾಡಿಕೊಡುತ್ತಿದೆ. ಆಯೋಗದ ಮಾಜಿ ಅಧ್ಯಕ್ಷ ಮೇಲೆ ಹಲ್ಲೆ ಮಾಡಿರುವುದನ್ನು 'ದೆಹಲಿ ಮಹಿಳಾ ಆಯೋಗ'ವು ತೀವ್ರವಾಗಿ ಖಂಡಿಸಿದೆ.
ನಾಳೆ ಶುಕ್ರವಾರ ಮೇ 17ರಂದು ಸಂಸದರ ಮೇಲಿನ ಹಲ್ಲೆ ಪ್ರಕರಣಕ್ಕೆ ಕುರಿತಂತೆ ಭಾರತೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಸ್ಪಷ್ಟನೆ ನೀಡುವಂತೆ ರಾಜ್ಯ ಮಹಿಳಾ ಆಯೋಗವು ಸಿಎಂ ಆಪ್ತ ಮತ್ತು ಹಲ್ಲೆ ಆರೋಪಿತ ಬಿಭವ್ ಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಸದ್ಯ ಹಲ್ಲೆಗೆ ಒಳಗಾಗಿರುವ ಸಂಸದೆ ಸ್ವಾತಿ ಮಲಿವಾಲ್ ಅವರು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಅವರ ತಾಯಿ ಸಂಗೀತಾ ಮಲಿವಾಲ್ ಅವರು ತಿಳಿಸಿದ್ದಾರೆ.
-
ಭಾರತದ ಸನಿಹವೇ ಮುಳುಗಿತು ಇರಾನ್ ಯುದ್ಧನೌಕೆ: ವಿಶಾಖಪಟ್ಟಣದಿಂದ ಹಿಂದಿರುಗುತ್ತಿದ್ದ ಹಡಗಿಗೆ ಅಮೆರಿಕ ಬಾಂಬ್ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ












Click it and Unblock the Notifications