ವಿದೇಶದಲ್ಲಿರುವ ಕಪ್ಪುಹಣದ ಮಾಹಿತಿ ಶೀಘ್ರದಲ್ಲೇ ಹೊರಕ್ಕೆ: ಗೋಯಲ್
ನವದೆಹಲಿ, ಜೂನ್ 29: ಕಪ್ಪು ಹಣದ ಕುರಿತಂತೆ ಭಾರತ ಮತ್ತು ಸ್ವಿಟ್ಜರ್ಲೆಂಡ್ ನಡುವೆ ಒಪ್ಪಂದ ನಡೆದಿದ್ದು, ಮುಂದಿನ ಹಣಕಾಸು ವರ್ಷದ ಅಂತ್ಯದ ವೇಳೆಗೆ ಎಲ್ಲ ಮಾಹಿತಿ ಲಭ್ಯವಾಗಲಿವೆ ಎಂದು ಹಣಕಾಸು ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
2018ರ ಫೆಬ್ರುವರಿ 1ರಿಂದ ಪ್ರಸಕ್ತ ಹಣಕಾಸು ವರ್ಷದ ಅಂತ್ಯದವರೆಗಿನ ಎಲ್ಲ ಮಾಹಿತಿಗಳು ನಮಗೆ ದೊರಕಲಿವೆ. ಹೀಗಿರುವಾಗ ಇದು ಕಪ್ಪುಹಣ ಅಥವಾ ಅಕ್ರಮ ವಹಿವಾಟು ಎಂದು ಕಲ್ಪನೆ ಮಾಡಿಕೊಳ್ಳುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದ್ದಾರೆ.
2017ರಲ್ಲಿ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರು ಇರಿಸಿರುವ ಹಣದ ಪ್ರಮಾಣ ಶೇ 50ರಷ್ಟು ಹೆಚ್ಚಳವಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

2017ರಲ್ಲಿ ಭಾರತೀಯರು ಸ್ವಿಸ್ ಬ್ಯಾಂಕ್ನಲ್ಲಿ ಇರಿಸಿದ ಹಣದ ಪ್ರಮಾಣ ಶೇ 50ರಷ್ಟು ಹೆಚ್ಚಾಗಿದ್ದು, 1.01 ಬಿಲಿಯನ್ ಸ್ವಿಸ್ ಫ್ರಾಂಕ್ಸ್ (7,000 ಕೋಟಿ) ಹಣ ಜಮೆ ಮಾಡಲಾಗಿದೆ ಎಂದು ಅಲ್ಲಿನ ಬ್ಯಾಂಕುಗಳ ಪ್ರಾಧಿಕಾರ ತಿಳಿಸಿತ್ತು.
ಮಾಜಿ ಸಚಿವ ಪಿ. ಚಿದಂಬರಂ ಅವರು ಪ್ರಾರಂಭಿಸಿದ ಲಿಬರಲೈಸ್ಡ್ ರೆಮಿಟ್ಟೆನ್ಸ್ ಸ್ಕೀಮ್ ಅಡಿಯಲ್ಲಿ ಶೇ 40ರಷ್ಟು ಹಣ ಜಮೆ ಮಾಡಲಾಗಿದೆ ಎಂಬ ವರದಿಗಳನ್ನು ಗೋಯಲ್ ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು.
ಒಮ್ಮೆ ಮಾಹಿತಿ ಹೊರಬಂದ ಬಳಿಕ ತಪ್ಪಿತಸ್ಥರು ಎಂದು ಪತ್ತೆಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಉಂಟಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು ಅಂತರರಾಷ್ಟ್ರೀಯ ಸನ್ನಿವೇಶವನ್ನು ಮನಸ್ಸಿನಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications