ಬಿಜೆಪಿ ಕೈಹಿಡಿದ ಎನ್ ಟಿ ರಾಮರಾವ್ ಪುತ್ರಿ ಪುರಂದರೇಶ್ವರಿ
ಹೈದರಾಬಾದ್, ಮಾರ್ಚ್6-ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಹೈದರಾಬಾದಿನಿಂದ ಸಿಹಿ ಸುದ್ದಿಯೊಂದು ಬಂದಿದೆ. ಮೂರು ವಾರಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದ ಕೇಂದ್ರ ಸಚಿವೆ ದಗ್ಗುಬಾಟಿ ಪುರಂದರೇಶ್ವರಿ ಮತ್ತು ಅವರ ಪತಿ ಪ್ರಕಾಶಂ ಜಿಲ್ಲೆಯ ಪರ್ಚೂರು ಶಾಸಕ, ಮಾಜಿ ಸಚಿವ ದಗ್ಗುಬಾಟಿ ವೆಂಕಟೇಶ್ವರ ರಾವುಲು ದಂಪತಿ ಇದೀಗ ಮೋದಿ ಕೈಹಿಡಿದಿದ್ದು, ಇಂದು ಗುರುವಾರ ಬಿಜೆಪಿ ಕೈಹಿಡಿದರು.
ಸೋನಿಯಾ ಗಾಂಧಿಗೆ ಹತ್ತಿರವಾಗಿದ್ದ ಪುರಂದರೇಶ್ವರಿ, ತೆಲಂಗಾಣ ಸ್ಥಾಪನೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ವಿಮುಖಗೊಂಡಿದ್ದರು. ವಿಶಾಖಪಟ್ಟಣಂ ಸಂಸದೆಯಾಗಿರುವ 55 ವರ್ಷದ ದಗ್ಗುಬಾಟಿ ಪುರಂದರೇಶ್ವರಿ ಕಳೆದ ತಿಂಗಳು ಕಾಂಗ್ರೆಸ್ ಪ್ರಾಥಮಿಕ ಸದಸ್ಯಕ್ಕೆ ರಾಜೀನಾಮೆ ನೀಡಿ, ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಸ್ಥಾನದಿಂದಲೂ ದೂರವಾಗಿದ್ದರು. ಪುರಂದರೇಶ್ವರಿ, ಈ ಹಿಂದಿನ ಲೋಕಸಭೆಯಲ್ಲಿ ಬಾಪಟ್ಲ ಕ್ಷೇತ್ರದಿಂದ ಆಯ್ಕೆಯಾಗಿ ಬಂದಿದ್ದರು. ಆ ಅವಧಿಯಲ್ಲಿ ಮಾನವ ಸಂಪನ್ಮೂಲ ಖಾತೆಯನ್ನು ನಿಭಾಯಿಸಿದ್ದರು.

ದಗ್ಗುಬಾಟಿ ಪುರಂದರೇಶ್ವರಿ ಅವರು ತೆಲುಗು ದೇಶಂ ಪಕ್ಷದ ಸಂಸ್ಥಾಪಕ, ದಿವಂಗತ ನಂದಮೂರಿ ತಾರಕ ರಾಮಾರಾವ್ ಅವರ ಪುತ್ರಿ. ತೆಲಂಗಾಣ ರಚನೆ ವಿರೋಧಿಸಿ ಸಲ್ಲಿಸಿದ್ದ ರಾಜೀನಾಮೆ ಪತ್ರದಲ್ಲಿ ನೀವು ನಮ್ಮ ಕತ್ತು ಕತ್ತರಿಸಿದ್ದೀರಿ. ತೆಲಂಗಾಣ ದಳ್ಳುರಿಯಲ್ಲಿ ಮಜಾ ಮಾಡುತ್ತಿದ್ದೀರಿ' ಎಂದು ಪುರಂದರೇಶ್ವರಿ ಆಕ್ರೋಶ ವ್ಯಕ್ತಪಡಿಸಿದ್ದರು.
ದಗ್ಗುಬಾಟಿ ಪುರಂದರೇಶ್ವರಿ ಮತ್ತು ದಗ್ಗುಬಾಟಿ ವೆಂಕಟೇಶ್ವರ ರಾವುಲು ದಂಪತಿಯನ್ನು ಪಕ್ಷಕ್ಕೆ ಸ್ವಾಗತಿಸಿರುವ ಬಿಜೆಪಿ, ಇಬ್ಬರಿಗೂ ಪಕ್ಷದ ವತಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವುದಾಗಿ ತಿಳಿಸಿದೆ. ಜತೆಗೆ ಆಂಧ್ರ ಪ್ರದೇಶದಲ್ಲಿ ಪುರಂದರೇಶ್ವರಿಗೆ ಬಿಜೆಪಿ ಉದ್ತುವಾರಿಯನ್ನು ಸಹ ನೀಡುವ ಸಾಧ್ಯತೆಯಿದೆ.
ಪುರಂದರೇಶ್ವರಿ ಅವರು ತಮಿಳು, ತೆಲುಗು, ಇಂಗ್ಲಿಷ್, ಹಿಂದಿ ಮತ್ತು ಫ್ರೆಂಚ್ ಭಾಷೆಗಳನ್ನು ಕರತಲಾಮಲಕ ಮಾಡಿಕೊಂಡಿದ್ದಾರೆ. ಗುರು ವೇಮಪತಿ ಚಿನ್ನ ಸತ್ಯಂ ಅವರ ಮಾರ್ಗದರ್ಶನದಲ್ಲಿ ದಶಕಗಳ ಕಾಲ ಕೂಚಿಪುಡಿ ನೃತ್ಯಾಭ್ಯಾಸ ಮಾಡಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications