ಬಗ್ಗಾ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪಂಜಾಬ್ ಹೈಕೋರ್ಟ್ ಸೂಚನೆ
ಬೆಂಗಳೂರು ಮೇ 8: ಮುಂದಿನ ವಿಚಾರಣೆಯವರೆಗೆ ತಜೀಂದರ್ ಬಗ್ಗಾ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪಂಜಾಬ್ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಪಂಜಾಬ್ ಹೈಕೋರ್ಟ್ ಶನಿವಾರ ಮಧ್ಯರಾತ್ರಿ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯ ದಿನಾಂಕದವರೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ತಜೀಂದರ್ ಬಗ್ಗಾ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ದಕ್ಷಿಣ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ತೇಜಸ್ವಿ ಸೂರ್ಯ ಅವರು ತನ್ನ ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ನ್ಯಾಯ ಮತ್ತು ಕಾನೂನಿನ ಆಳ್ವಿಕೆಗೆ ಮತ್ತೊಂದು ಗೆಲುವು ಎಂದು ಹೇಳಿದ್ದಾರೆ.
ಪಂಜಾಬ್ನ ಮೊಹಾಲಿ ನ್ಯಾಯಾಲಯವು ಶನಿವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ ಮತ್ತು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು. ಪಂಜಾಬ್ ಹೈಕೋರ್ಟ್ ಶನಿವಾರ ಮಧ್ಯರಾತ್ರಿ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯ ದಿನಾಂಕದವರೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ತಜೀಂದರ್ ಬಗ್ಗಾ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ.

ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಪಂಜಾಬ್ ಪೊಲೀಸರು ಬಗ್ಗಾ ಅವರನ್ನು ಬಂಧಿಸಿದ ನಂತರ ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿಯಲ್ಲಿ ಬಗ್ಗಾ ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಮರಳಿದ್ದರು. ಇದರ ನಂತರ ಪಂಜಾಬ್ ಪೊಲೀಸರು ತನ್ನ ಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನುಗ್ಗಿ ತಮ್ಮನ್ನು ಬಂಧಿಸಿದ್ದಾರೆ ಎಂದು ಬಗ್ಗಾ ಆರೋಪಿಸಿದ್ದರು. ಹಿಂದಿನ ಏಪ್ರಿಲ್ನಲ್ಲಿ, ದೆಹಲಿ ಪೊಲೀಸರಿಗೆ ತಿಳಿಸದೆ ತನ್ನನ್ನು ಬಂಧಿಸಲು ಲಕ್ನೋದಲ್ಲಿದ್ದಾಗ ಪಂಜಾಬ್ ಪೊಲೀಸ್ ಅಧಿಕಾರಿಗಳು ತನ್ನ ಮನೆಗೆ ಬಂದರು ಎಂದು ಬಗ್ಗ ಹೇಳಿಕೊಂಡಿದ್ದರು.

ಕಾಶ್ಮೀರಿ ಪಂಡಿತರ ನಿರ್ಗಮನದ ಕುರಿತು ಮಾರ್ಚ್ನಲ್ಲಿ ದೆಹಲಿ ವಿಧಾನಸಭೆಯಲ್ಲಿ ಕೇಜ್ರಿವಾಲ್ ಅವರ ಭಾಷಣಕ್ಕಾಗಿ ಕ್ಷಮೆಯಾಚಿಸುವಂತೆ ದೂರದರ್ಶನ ಕಾರ್ಯಕ್ರಮವೊಂದರಲ್ಲಿ ಬಗ್ಗಾ ಅವರು ನೀಡಿದ ಹೇಳಿಕೆಗಳ ವಿಡಿಯೊದ ಆಧಾರದ ಮೇಲೆ ಆಮ್ ಆದ್ಮಿ ಪಕ್ಷವು (ಎಎಪಿ) ತನ್ನ ವಿರುದ್ಧ ಎಫ್ಐಆರ್ ದಾಖಲಿಸಿದೆ ಎಂದು ಬಗ್ಗಾ ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾನೂನುಬಾಹಿರವಾಗಿ ತಮ್ಮನ್ನು ಬಂಧಿಸಿದ್ದಕ್ಕಾಗಿ ಬಗ್ಗಾ ವಾಗ್ದಾಳಿ ನಡೆಸಿದರು. ಇದಕ್ಕೂ ಮುನ್ನ ಶನಿವಾರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಜೀಂದರ್ ಪಾಲ್ ಸಿಂಗ್ ಬಗ್ಗಾ ಮತ್ತು ಅವರ ತಂದೆಯನ್ನು ರಾಷ್ಟ್ರ ರಾಜಧಾನಿಯ ಅವರ ನಿವಾಸದಲ್ಲಿ ಭೇಟಿಯಾದರು.












Click it and Unblock the Notifications