ನಾನು ಹೆಡ್ ಮಾಸ್ಟರ್, ಪ್ರತ್ಯೇಕತಾವಾದಿಗಳ ಜೊತೆ ಮಾತನಾಡಿ
ಕಾಶ್ಮೀರ, ಆಗಸ್ಟ್ 29: ಆರ್ಟ್ ಆಫ್ ಲಿವಿಂಗ್ ನ ಶ್ರೀಶ್ರೀ ರವಿಶಂಕರ್ ಹಾಗೂ ಮುಜಾಫರ್ ವನಿ (ಎನ್ ಕೌಂಟರ್ ನಲ್ಲಿ ಮೃತಪಟ್ಟ್ ಭಯೋತ್ಪಾದಕ ಬುಹ್ರಾನ್ ವನಿ ತಂದೆ) ಮಧ್ಯದ ಭೇಟಿ ಹಲವರ ಹುಬ್ಬೇರುವಂತೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ಜಾರಿಯಲ್ಲಿದ್ದು, ಇನ್ನೊಂದು ದಾರಿಯ ಮೂಲಕ ಸರ್ಕಾರವೇ ನಡೆಸುತ್ತಿರುವ ಶಾಂತಿ ಪ್ರಕ್ರಿಯೆಯೇ ಇದು ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಹುರಿಯತ್ ಕಾನ್ಫರೆನ್ಸ್ ಹೇಳಬೇಕು ಎಂದಿರುವ ಅಂಶಗಳನ್ನು ಮುಜಾಫರ್ ವನಿ ಮೂಲಕ ತಿಳಿಸಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದರೆ, ನಮಗೆ ಈ ಭೇಟಿ ವಿಚಾರದಲ್ಲಿ ಹೇಳುವುದಕ್ಕೆ ಏನೂ ಇಲ್ಲ. ನಮಗೆ ತಿಳಿದು ಬಂದ ಮಾಹಿತಿ ಪ್ರಕಾರ ಮುಜಾಫರ್ ವನಿ ಚಿಕಿತ್ಸೆಗಾಗಿ ಆರ್ಟ್ ಆಫ್ ಲಿವಿಂಗ್ ಗೆ ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.[ಬುಲೆಟ್ ಪ್ರೂಫ್ ವಾಹನ ಶಾಪಿಂಗ್ ಮಾಡಿದ ದಾವೂದ್ ಇಬ್ರಾಹಿಂ!]
ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಮುಜಾಫರ್ ವನಿ, 'ಶ್ರೀಶ್ರೀ ಕಾಶ್ಮೀರಕ್ಕೆ ಬರ್ತಾರೆ. ಇಲ್ಲಿನ ಪರಿಸ್ಥಿತಿಯ ಬಗ್ಗೆ ಅವರೇ ಪರಿಶೀಲಿಸುತ್ತಾರೆ. ನಮ್ಮ ಭೇಟಿ ಸಂದರ್ಭದಲ್ಲಿ ಸಿರಿಯಾದ ಯುದ್ಧದ ವಿಡಿಯೋಗಳನ್ನು ಅವರು ತೋರಿಸಿದರು. ಕಾಶ್ಮೀರದ ಪರಿಸ್ಥಿತಿ ಅಷ್ಟು ಕೆಟ್ಟದಾಗಿಲ್ಲ ಅಂತ ನನ್ನ ಮೊಬೈಲ್ ಫೋನ್ ನಲ್ಲಿದ್ದ ವಿಡಿಯೋಗಳನ್ನು ಅವರಿಗೆ ತೋರಿಸಿದೆ' ಎಂದು ಹೇಳಿದರು.

ನನ್ನ ಮಗನ ಸಾವಿನ ನಂತರ ಶ್ರೀಶ್ರೀ ಕರೆ ಮಾಡಿ, ಸಂತಾಪ ಸೂಚಿಸಿದರು. ಅವರು ನನ್ನ ಭೇಟಿ ಮಾಡಬೇಕು ಅಂತಲೂ ಹೇಳಿದರು. ಅದಕ್ಕೆ, ನಾನೇ ಚಿಕಿತ್ಸೆಗಾಗಿ ಆಶ್ರಮಕ್ಕೆ ಬರಬೇಕು ಅಂತ ಹೇಳಿದೆ. ಎರಡು ದಿನ ಅಲ್ಲಿದ್ದೆ. ಆ ವೇಳೆ ಕಾಶ್ಮೀರದ ಸಮಸ್ಯೆಗಳ ಬಗ್ಗೆ ವಿವರಿಸಿದೆ ಎಂದರು.[ಕಾಶ್ಮೀರ ಹಿಂಸಾಚಾರಕ್ಕೆ ತುಪ್ಪ ಸುರಿಯುತ್ತಿದೆ ಪಾಕ್: ಮುಫ್ತಿ ಕಿಡಿಕಿಡಿ]
ಕಾಶ್ಮೀರ ಸಮಸ್ಯೆ ಬಗೆಹರಿಯುವುದಕ್ಕೆ ಭಾರತ ಯಾರ ಜತೆಗೆ ಮಾತುಕತೆ ನಡೆಸಬೇಕು ಅಂತ ಅವರು ಕೇಳಿದರು. ಭಾರತ ಯಾವುದೇ ಷರತ್ತುಗಳನ್ನು ಇಡದೆ ಕಾಶ್ಮೀರದ ಪ್ರತಿನಿಧಿಗಳ ಜತೆ ಮಾತನಾಡಬೇಕು. ಗಿಲಾನಿ, ಯಾಸಿನ್ ಮಲಿಕ್, ಶಬೀರ್ ಶಾ, ಮಿರ್ವೈಜ್ ಉಮರ್ ಫಾರೂಕ್ ಜತೆ ಮಾತುಕತೆ ನಡೆಸಬೇಕು ಅಂತ ಹೇಳಿದ್ದೇನೆ ಎಂದು ಮುಜಾಫರ್ ವನಿ ಹೇಳಿದರು.[6 ಸಾವಿರ ಸಂಬಳ, ಬ್ಯಾಂಕ್ ಖಾತೆಯಲ್ಲಿ 18 ಲಕ್ಷ!]
ಶ್ರೀಶ್ರೀ ರವಿಶಂಕರ್ ಸಕಾರಾತ್ಮಕ ಆಲೋಚನೆ ಇರುವ ವ್ಯಕ್ತಿ. ಸರ್ಕಾರದಲ್ಲಿರುವ ಸಚಿವರ ಆಲೋಚನೆಯೂ ಹಾಗೇ ಇರುತ್ತದೆ ಅಂತ ನಾನಂದುಕೊಳ್ತೀನಿ ಎಂದು ಪತ್ರಕರ್ತರಿಗೆ ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications