Tamarind: ಅಡುಗೆ ಮನೆಯಿಂದ ಅರಣ್ಯದವರೆಗೆ ಹುಣಸೆ ಹಣ್ಣಿನದ್ದೇ ಹವಾ
Tamarind: ಅರಣ್ಯ ಇಲಾಖೆಯು ಮಹತ್ವಕ್ಕೆ ಕಾರ್ಯಕ್ಕೆ ಮುಂದಾಗಿದ್ದು, ರಸ್ತೆ ಬದಿ ಹಾಗೂ ಶಾಲಾ-ಕಾಲೇಜುಗಳ ಆವರಣದಲ್ಲಿ ಹುಣಸೆ ಮತ್ತು ಬೇಲದ ಹಣ್ಣಿನಂತಹ ಗಿಡಗಳನ್ನು ನೆಡಲು ಮುಂದಾಗಿದೆ. ಹಾಗಾದ್ರೆ ಈ ನಿರ್ಧಾರದ ಹಿಂದಿನ ಉದ್ದೇಶ ಹಾಗೂ ಏನೆಲ್ಲಾ ಪ್ರಯೋಜನಗಳಿವೆ ಎನ್ನುವ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾರ್ವಜನಿಕರ ಆರೋಗ್ಯ ಮತ್ತು ಪೌಷ್ಟಿಕಾಂಶದ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಉತ್ತರ ಪ್ರದೇಶದ ಅರಣ್ಯ ಇಲಾಖೆಯು ಒಂದು ವಿಶೇಷ ಅಭಿಯಾನವನ್ನು ಕೈಗೊಂಡಿದೆ. ಸಾಂಪ್ರದಾಯಿಕ ಅರಣ್ಯ ಗಿಡಗಳ ಜೊತೆಗೆ, ಈ ಬಾರಿ ಔಷಧಿ ಗುಣಗಳುಳ್ಳ ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವ ಹುಣಸೆ ಹಾಗೂ ಬೇಲದ ಹಣ್ಣಿನಂತಹ ಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೆಡಲು ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಾಗಾದ್ರೆ ಹುಣಸೆ ಹಣ್ಣಿನ ಮಹತ್ವದ ಏನೆಂದು ನೀವು ತಿಳಿಯಬೇಕೆಂದರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ನೋಡಿ.

ಆರೋಗ್ಯದ ಮೇಲೆ ಗಮನಹರಿಸಲು ಮಹತ್ವದ ಹೆಜ್ಜೆ
ಹುಣಸೆ ಮತ್ತು ಕವಾಟ ಹಣ್ಣುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣ ಹೊಂದಿವೆ. ಜೀರ್ಣಕ್ರಿಯೆ ಸುಧಾರಿಸಲು ಮತ್ತು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸಲು ಈ ಹಣ್ಣುಗಳು ಸಹಕಾರಿ ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಈ ಆಯ್ಕೆ ಮಾಡಿಕೊಂಡಿದೆ.
ಉಚಿತವಾಗಿ ಗಿಡಗಳ ವಿತರಣೆ
ಮುಂಬರುವ ಮಳೆಗಾಲದ ಅವಧಿಯಲ್ಲಿ ಅರಣ್ಯ ಪ್ರದೇಶಗಳು ಮಾತ್ರವಲ್ಲದೆ, ರಸ್ತೆ ಬದಿಗಳು, ಶಾಲೆಗಳು ಮತ್ತು ಸಾರ್ವಜನಿಕ ಉದ್ಯಾನವನಗಳಲ್ಲಿ ಈ ಗಿಡಗಳನ್ನು ನೆಡಲಾಗುವುದು. ಅಲ್ಲದೆ, ಆಸಕ್ತ ಸಾರ್ವಜನಿಕರು ಮತ್ತು ರೈತರಿಗೆ ಈ ಗಿಡಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ವಿತರಿಸುವ ಯೋಜನೆಯೂ ಇದೆ. ಈ ಮರಗಳು ದೀರ್ಘಕಾಲದವರೆಗೂ ಇರುತ್ತವೆ ಮತ್ತು ಹೆಚ್ಚಿನ ನಿರ್ವಹಣೆಯ ಅಗತ್ಯ ಇರುವುದಿಲ್ಲ. ಹುಣಸೆ ಮತ್ತು ಕವಾಟ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇರುವುದರಿಂದ, ಇದು ಸ್ಥಳೀಯರಿಗೆ ಆರ್ಥಿಕವಾಗಿಯೂ ನೆರವಾಗಲಿದೆ.
ಅಧಿಕಾರಿಗಳು ಹೇಳುವುದೇನು?
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಕಾರ, ಕೇವಲ ಹಸಿರನ್ನು ಹೆಚ್ಚಿಸುವುದು ನಮ್ಮ ಗುರಿಯಲ್ಲ. ಬದಲಿಗೆ ಆ ಹಸಿರಿನಿಂದ ಜನರಿಗೆ ನೇರವಾದ ಆರೋಗ್ಯ ಪ್ರಯೋಜನಗಳು ಸಿಗಬೇಕು ಎಂಬುದು ಈ ಅಭಿಯಾನದ ಉದ್ದೇಶವಾಗಿದೆ. ಹವಾಮಾನ ವೈಪರೀತ್ಯವನ್ನು ತಡೆಗಟ್ಟಲು ಈ ಮರಗಳು ಹೆಚ್ಚು ಸಹಕಾರಿಯಾಗಲಿವೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯಕ್ಕೆ ಪ್ರಯೋಜನ ನೀಡುವ ಹಣ್ಣುಗಳಿಂದ ದೂರವಾಗುತ್ತಿದ್ದಾರೆ. ಈ ಅಭಿಯಾನದ ಮೂಲಕ ಸಾಂಪ್ರದಾಯಿಕ ಹಣ್ಣುಗಳ ಮಹತ್ವವನ್ನು ಜನರಿಗೆ ತಿಳಿಸುವುದು ಮತ್ತು ಅಳಿವಿನಂಚಿನಲ್ಲಿರುವ ಇಂತಹ ಮರಗಳನ್ನು ಸಂರಕ್ಷಿಸುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯು ಪ್ರಯಾಗ್ರಾಜ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಸಿರು ವಲಯವನ್ನು ಹೆಚ್ಚಿಸುವುದಲ್ಲದೆ, ಜನರ ಜೀವನಶೈಲಿಯಲ್ಲಿ ಸಕಾರಾತ್ಮಕ ಬದಲಾವಣೆ ತರಲಿದೆ ಎಂದು ನಿರೀಕ್ಷಿಸಲಾಗಿದೆ.
ಪೌಷ್ಟಿಕಾಂಶದ ಗಣಿ ಹುಣಸೆ ಹಣ್ಣು
ಹುಣಸೆ ಹಣ್ಣು ಕೇವಲ ಅಡುಗೆಯ ರುಚಿ ಹೆಚ್ಚಿಸುವುದಲ್ಲದೆ, ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಇದರಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್ಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಮತ್ತು ಮಲಬದ್ಧತೆಯನ್ನು ನಿವಾರಿಸುವಲ್ಲಿ ಹುಣಸೆ ಹಣ್ಣು ರಾಮಬಾಣ. ಇದರಲ್ಲಿರುವ ಟಾರ್ಟಾರಿಕ್ ಆಮ್ಲವು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ನೆರವಾಗುತ್ತದೆ.
ಅರಣ್ಯ ಇಲಾಖೆಯು ಇಂತಹ ಉಪಯುಕ್ತ ಮರಗಳನ್ನು ಬೆಳೆಸುವ ಮೂಲಕ ಜನರಿಗೆ ಉಚಿತವಾಗಿ ಪೌಷ್ಟಿಕಾಂಶ ಸಿಗುವಂತೆ ಮಾಡುತ್ತಿದೆ. ಹುಣಸೆ ಮರಗಳು ದೀರ್ಘಕಾಲ ಬಾಳಿಕೆ ಬರುವುದರಿಂದ ಪರಿಸರಕ್ಕೂ ಪೂರಕ ಹಾಗೂ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಆರ್ಥಿಕವಾಗಿಯೂ ಇದು ವರದಾನವಾಗಲಿದೆ ಎಂದು ಹೇಳಲಾಗುತ್ತದೆ.
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications