ತಮಿಳುನಾಡು ಚುನಾವಣೆ: 41 ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧೆ
ಚೆನ್ನೈ, ಏಪ್ರಿಲ್ 04: ತಮಿಳುನಾಡು ವಿಧಾನಸಭೆ ಚುನಾವಣೆ 2016ರಲ್ಲಿ ಡಿಎಂಕೆ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. 234 ಕ್ಷೇತ್ರಗಳ ಪೈಕಿ 41ರಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಸಿದ್ಧವಾಗಿದೆ. ಮೇ 16ರಂದು ಒಂದು ಹಂತದಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಮುಕುಲ್ ವಾಸ್ನಿಕ್ ಹಾಗೂ ಎಂ ಕರುಣಾನಿಧಿ ಅವರ ಗೋಪಾಲಪುರಂ ನಿವಾಸದಲ್ಲಿ ಸೀಟು ಹಂಚಿಕೆ ಬಗ್ಗೆ ಸಭೆ ನಡೆಸಿದರು. ಸೋಮವಾರ ಬೆಳಗ್ಗೆ ಸೀಟು ಹಂಚಿಕೆ ಸಭೆಯಲ್ಲಿ ಇತ್ಯರ್ಥಗೊಂಡಂತೆ ಕಾಂಗ್ರೆಸ್ 41 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರು ಪ್ರಕಟಿಸಿದರು.[ಜಯಾ ಪಕ್ಷದಿಂದ ನಟ ಶರತ್ ಕುಮಾರ್ ಗೆ ಟಿಕೆಟ್]

ಕಾಂಗ್ರೆಸ್ ಜತೆಗಿನ ಮೈತ್ರಿಯಿಂದ ಡಿಎಂಕೆ ಇನ್ನಷ್ಟು ಬಲಿಷ್ಠವಾಗಿದೆ. ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ಆದರೆ, ಇತ್ತೀಚಿನ ಚುನಾವಣಾ ಪೂರ್ವ ಸಮೀಕ್ಷೆಯಂತೆ ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರುವುದು ಖಾತ್ರಿಯಾಗಿದೆ.
ಕಾಂಗ್ರೆಸ್ 63 ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಪಟ್ಟು ಹಿಡಿದಿತ್ತು. 2011ರಲ್ಲಿ 63 ಸ್ಥಾನವನ್ನು ಪಡೆದಿತ್ತು. ಆದರೆ,ಡಿಎಂಕೆ ಒಪ್ಪಲಿಲ್ಲ 33 ಸೀಟುಗಳನ್ನು ಕೊಡುವುದಾಗಿ ಆಫರ್ ನೀಡಿತ್ತು. ಆದರೆ, ಕೊನೆಗೆ 41 ಸ್ಥಾನಗಳಿಗೆ ಡೀಲ್ ಕುದುರಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications