ತಮಿಳುನಾಡು ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮಾದರಿ ಗ್ಯಾರಂಟಿ ಯೋಜನೆ ಘೋಷಿಸಿದ ಬಿಜೆಪಿ ಮಿತ್ರ ಪಕ್ಷ ಎಐಎಡಿಎಂಕೆ
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ - 2026ಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ತಮಿಳುನಾಡಿನ ವಿರೋಧ ಪಕ್ಷವಾಗಿರುವ ಹಾಗೂ ಬಿಜೆಪಿ ಮೈತ್ರಿ ಪಕ್ಷವಾಗಿರುವ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ /AIADMK) ಕರ್ನಾಟಕ ಮಾದರಿ ಅನುಸರಿಸಲು ಮುಂದಾಗಿದೆ.
ಹೌದು ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಕರ್ನಾಟಕ ಮಾದರಿಯ ಗ್ಯಾರಂಟಿ ಯೋಜನೆಯನ್ನು ಎಐಎಡಿಎಂಕೆ ಘೋಷಿಸಿದೆ. ಅಚ್ಚರಿಯ ವಿಷಯವೆಂದರೆ ಕರ್ನಾಟಕದಲ್ಲಿ ಮಹಿಳೆಯರಿಗೆ ಫ್ರೀ ಬಸ್ ಸೌಲಭ್ಯ ನೀಡಿರುವಂತೆ ತಮಿಳುನಾಡಿನಲ್ಲಿ ಪುರುಷರಿಗೂ ಫ್ರೀ ಬಸ್ ಸೌಲಭ್ಯ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

2026ರ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಎಡಿಎಂಕೆ ಪಕ್ಷವು ಚುನಾವಣಾ ಭರವಸೆ (ಮೊದಲ ಹಂತದ ಪ್ರಣಾಳಿಕೆ)ಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯ ಮಿತ್ರಪಕ್ಷವೂ ಆಗಿರುವ ಎಐಎಡಿಎಂಕೆ ಪಕ್ಷವು ಕಾಂಗ್ರೆಸ್ ಮಾದರಿ ಗ್ಯಾರಂಟಿ ಯೋಜನೆಯನ್ನು ಅನುಸರಿಸುತ್ತಿದೆ. ಪ್ರತಿ ಕುಟುಂಬ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ಸಾವಿರ ರೂಪಾಯಿ ಕೊಡುವುದು ಮತ್ತು ಪುರುಷರಿಗೆ ಉಚಿತ ಬಸ್ ಪ್ರಯಾಣವನ್ನು ವಿಸ್ತರಿಸುವ ಯೋಜನೆಗಳು ಪ್ರಮುಖವಾಗಿದೆ.
ಇನ್ನು ತಮಿಳುನಾಡಿನಲ್ಲಿ ಈಗಾಗಲೇ ಕುಟುಂಬದ ಮಹಿಳೆಗೆ 1,000 ರೂಪಾಯಿ ಹಾಗೂ ಉಚಿತ ಬಸ್ ಸೇವೆ ಇದೆ. ನಾವು ಮುಂದೆ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡಲಿದ್ದೇವೆ. ಅಲ್ಲದೇ ಪುರುಷರಿಗೂ ಫ್ರೀ ಬಸ್ ಸೇವೆ ಕಲ್ಪಿಸಲಾಗುವುದು ಎಂದು ಎಐಎಡಿಎಂಕೆ ಭರವಸೆ ನೀಡಿದೆ.
ಈ ಬಾರಿ ತಮಿಳುನಾಡು ರಾಜಕೀಯದಲ್ಲಿ ಹಲವು ಬೆಳವಣಿಗೆಗಳು ನಡೆದಿವೆ. ನಟ ಹಾಗೂ ರಾಜಕಾರಣಿ ವಿಜಯ್ ಅವರು ಅಲ್ಲಿನ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಿದ್ದಾರೆ. ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದರೆ ತಮಿಳಿಗರಿಗೆ ಹೊಸ ಯೋಜನೆಗಳನ್ನು ಪರಿಚಯಿಸುವುದಾಗಿ ಎಐಎಡಿಎಂಕೆ ಹೇಳಿದೆ. ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಸಮಗ್ರ ಬೆಳವಣಿಗೆ, ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಭದ್ರತೆಗೆ ಆದ್ಯತೆ ನೀಡುವುದಾಗಿ ಪಕ್ಷವು ಹೇಳಿದೆ.
ಎಐಎಡಿಎಂಕೆ ಪಕ್ಷದ ಸಂಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ಎಂ.ಜಿ ರಾಮಚಂದ್ರನ್ ಅವರ 109ನೇ ಜನ್ಮ ವಾರ್ಷಿಕೋತ್ಸವದ ದಿನದಂದು ಈ ಘೋಷಣೆಗಳನ್ನು ಎಐಎಡಿಎಂಕೆ ಮಾಡಿದೆ. ಮಹಿಳೆಯರ ಸಬಲೀಕರಣ, ಜೀವನೋಪಾಯವನ್ನು ಬಲಪಡಿಸುವುದು, ಎಲ್ಲರಿಗೂ ವಸತಿ ಖಚಿತಪಡಿಸುವುದು ಮತ್ತು ಕಾರ್ಮಿಕರ ಘನತೆಯನ್ನು ಕಾಪಾಡುವುದು ನಮ್ಮ ಮುಖ್ಯ ಆದ್ಯತೆಗಳಾಗಿವೆ ಎಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ವಿರೋಧ ಪಕ್ಷದ ನಾಯಕ ಪಳನಿಸ್ವಾಮಿ ಅವರು ಹೇಳಿದ್ದಾರೆ.
ಕುಲವಿಳಕ್ಕು (ಕುಟುಂಬದ ನಂದಾದೀಪ) ಯೋಜನೆ ಅಡಿಯಲ್ಲಿ ಪಕ್ಷವು ಎಲ್ಲಾ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಮಾಸಿಕ 2,000 ರೂ.ಗಳ ನಗದು ಸಹಾಯವನ್ನು ನೀಡುವುದಾಗಿ ಹೇಳಿದೆ. ನೇರವಾಗಿ ಮನೆಯ ಮಹಿಳಾ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಪ್ರಸ್ತಾವನೆಯು ಡಿಎಂಕೆ ಸರ್ಕಾರದ ಕಲೈಗ್ನರ್ ಮಗಳಿರ್ ಉರಿಮೈ ತೋಗೈ ಯೋಜನೆಯಡಿಯಲ್ಲಿ ಪ್ರಸ್ತುತ ನೀಡಲಾಗುತ್ತಿರುವ 1,000 ರೂ. ಯೋಜನೆಗೆ ಟಕ್ಕರ್ ಕೊಡುವ ಉದ್ದೇಶವನ್ನು ಹೊಂದಿದೆ.
ಎಐಎಡಿಎಂಕೆ ಪಕ್ಷದ ಪ್ರಮುಖ ಭರವಸೆಗಳು
1. ಕುಟುಂಬದ ಮುಖ್ಯಸ್ಥೆ / ಮಹಿಳೆಗೆ ಪ್ರತಿ ತಿಂಗಳು ತಲಾ 2 ಸಾವಿರ ರೂಪಾಯಿ.
2. ಪುರುಷರಿಗೂ ಉಚಿತ ಬಸ್, ಮಹಿಳೆಯರಿಗೆ ಉಚಿತ ಬಸ್ ಸೇವೆ ಯಥಾಸ್ಥಿತಿ.
3. ನಗರ ಬಸ್ಗಳಲ್ಲಿ ಪ್ರಯಾಣಿಸುವ ಪುರುಷರಿಗೆ ಉಚಿತ ಬಸ್ ಪ್ರಯಾಣ.
4. ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ಭೂಮಿ ಮತ್ತು ಉಚಿತ ಕಾಂಕ್ರೀಟ್ ಮನೆಗಳ ನಿರ್ಮಾಣ.
5. ನಗರ ಪ್ರದೇಶಗಳಲ್ಲಿ ಅಪಾರ್ಟ್ಮೆಂಟ್ಗಳನ್ನು ನಿರ್ಮಿಸುವುದು ಮತ್ತು ಹಂಚಿಕೆ ಮಾಡುವುದು.
6. 5 ಲಕ್ಷ ಮಹಿಳೆಯರಿಗೆ ಸಬ್ಸಿಡಿಯಲ್ಲಿ ದ್ವಿಚಕ್ರ ವಾಹನ ಸೌಲಭ್ಯ, ತಲಾ 25,000 ರೂ. ಸಬ್ಸಿಡಿ ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications