ಕಾವೇರಿ ಜಲಮಂಡಳಿಗಾಗಿ ಇಂದು ತಮಿಳುನಾಡು ಬಂದ್

Recommended Video

      ಕಾವೇರಿ ಜಲಮಂಡಳಿ ವಿವಾದ : ತಮಿಳುನಾಡು ರಾಜ್ಯದಾದ್ಯಂತ ಬಂದ್ | Oneindia Kannada

      ಚೆನ್ನೈ, ಏಪ್ರಿಲ್ 05: ಕಾವೇರಿ ಜಲ ನಿರ್ವಹಣ ಮಂಡಳಿ ನಿರ್ಮಿಸುವಂತೆ ಒತ್ತಾಯಿಸಿ ಮತ್ತು ಮಂಡಳಿ ನಿರ್ಮಿಸಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಬಂದ್ ಗೆ ಡಿಎಂಕೆ ಮತ್ತು ತಮಿಳುನಾಡಿನ ಇನ್ನಿತರ ವಿಪಕ್ಷ ಸದಸ್ಯರು ಕರೆನೀಡಿದ್ದಾರೆ.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

      ಇಂದು(ಏ.5) ಕರೆನೀಡಿರುವ ರಾಜ್ಯವ್ಯಾಪಿ ಬಂದ್ ನಿಂದಾಗಿ ತಮಿಳುನಾಡಿನಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ತಮಿಳುನಾಡು ಬಂದ್ ಹಿನ್ನೆಲೆಯಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ ತೆರಳುವ ಕೆಎಸ್ ಆರ್ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ)ಯ 250 ಕ್ಕೂ ಹೆಚ್ಚು ಬಸ್ ಗಳನ್ನು ರದ್ದು ಮಾಡಲಾಗಿದೆ.

      ತಮಿಳುನಾಡಿನ ಹಲವೆಡೆ ರಸ್ತೆ ತಡೆ, ಪ್ರತಿಭಟನೆಗಳು ನಡೆಯುತ್ತಿವೆ. ನಿನ್ನೆಯಿಂದಲೇ ರಾಜ್ಯದಲ್ಲಿ ಪ್ರತಿಭಟನೆಯ ಕಾವು ಏರಿದ್ದು, ಡಿಎಂಕೆಯ ಹಲವು ಸದಸ್ಯರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದರು.

      Tamil Nadu bandh for demanding to form Cauvery management board

      ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಫೆ.16 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ, ತೀರ್ಪು ಬಂದ ಆರುವಾರಗಳ ಒಳಗೆ ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಂತೆ ಆದೇಶ ನೀಡಿತ್ತು. ಆದರೆ ಇದುವರೆಗೂ ಕಾವೇರಿ ನಿರ್ವಹಣ ಮಂಡಳಿಯನ್ನು ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಯಾವುದೇ ಮಾಹಿತಿ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ತಮಿಳುನಾಡು ದೂರಿದೆ.

      ತಮಿಳುನಾಡು ಸರ್ಕಾರ ಕೇಂದ್ರದ ವಿರುದ್ಧ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಏ.9 ರಂದು ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+