Annamalai: ಬಿಜೆಪಿ ನಾಯಕ 'ಅಣ್ಣಾಮಲೈ' ವಿರುದ್ಧ ಪೊಲೀಸ್ ಕೇಸ್ ದಾಖಲು
ಧರ್ಮಪುರಿ, ಜನವರಿ 11: ದಕ್ಷ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಗುರುತಿಸಿಕೊಂಡು ಬಳಿಕ ಬಿಜೆಪಿ ಸೇರಿ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿರುವ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ (Annamalai) ವಿರುದ್ಧ ಧರ್ಮಪುರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರು ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ತಮಿಳುನಾಡಿನ ಧರ್ಮಪುರಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದೇ ಜನವರಿ 8 ರಂದು ಪಾಪ್ಪಿರೆಡ್ಡಿಪಟ್ಟಿ ಬಳಿಯ ಬೊಮ್ಮಿಡಿ ಪ್ರದೇಶದಲ್ಲಿ ಬಿಜೆಪಿ ಮುಖ್ಯಸ್ಥರ 'ಎನ್ ಮನ್ ಎನ್ ಮಕ್ಕಳ್' ರ್ಯಾಲಿಯಲ್ಲಿ ಅಣ್ಣಾಮಲೈ ಮತ್ತು ಕ್ರಿಶ್ಚಿಯನ್ ಯುವಕರ ಗುಂಪಿನ ನಡುವೆ ಚರ್ಚ್ ಪ್ರವೇಶವನ್ನು ವಿರೋಧಿಸಿ ವಾಗ್ವಾದ ನಡೆದಿತ್ತು.
ಚರ್ಚ್ ಪ್ರವೇಶ ಯತ್ನ: ಅಣ್ಣಮಲೈ ತಡೆದ ಗುಂಪು
ಅಣ್ಣಾಮಲೈ ಅವರು ತಮ್ಮ ರ್ಯಾಲಿಯಲ್ಲಿ ಪಾಪಿರೆಡ್ಡಿಪಟ್ಟಿಯ ಸೇಂಟ್ ಲೂರ್ಡ್ಸ್ ಚರ್ಚ್ನಲ್ಲಿರುವ ಮೇರಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾಗಿದ್ದರಿಂದ ಈ ವೇಳೆ ಗಲಾಟೆ, ಮಾತಿನ ಚಕಮಕಿ ನಡೆದಿದೆ. ಮಣಿಪುರ ಹಿಂಸಾಚಾರ ಉಲ್ಲೇಖಿಸಿ ಯುವಕರ ಗುಂಪು ಅಣ್ಣಾಮಲೈ ಗುಂಪನ್ನು ಚರ್ಚ್ಗೆ ಪ್ರವೇಶದಂತೆ ತಡೆಯಿತು. ಜೊತೆಗೆ ಅವರ ವಿರುದ್ಧ ಘೋಷಿಸಿದರು.

ಅಣ್ಣಾಮಲೈ ಹೇಳಿಕೆ ವಿಡಿಯೋ ವೈರಲ್
ಈ ಘಟನೆ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಣ್ಣಾಮಲೈ ಯುವಕರಿಗೆ ಮಣಿಪುರ ಸಮಸ್ಯೆಯನ್ನು ವಿವರಿಸುವುದು ಸಹ ಈ ವಿಡಿಯೋದಲ್ಲಿ ಸರೆಯಾಗಿದೆ. ಈ ವೇಳೆ ಅಣ್ಣಾಮಲೈ ವಿರುದ್ಧ ಚರ್ಚೆಗೆ ಬಾರದಂತೆ ತಡೆದ ಗುಂಪು ವಾಗ್ದಾಳಿ ನಡೆಸಿತು. ಇದು ಸಹ ರೆಕಾರ್ಡ್ ಆಗಿದೆ.
ನೀವು ಡಿಎಂಕೆ ರೀತಿ ಮಾತನಾಡಬೇಡಿ. ಇದು ಸಾರ್ವಜನಿಕ ಸ್ಥಳ. ನನ್ನನ್ನು ತಡೆಯಲು ನಿಮಗೆ ಯಾವ ಹಕ್ಕಿದೆ? ಎಂದು ಅಣ್ಣಾಮಲೈ ಅವರು ಆ ಗುಂಪನ್ನು ಪ್ರಶ್ನಿಸಿದ್ದಾರೆ. ನಾನು 10,000 ಜನರನ್ನು ಒಟ್ಟುಗೂಡಿಸಿ ಧರಣಿ ನಡೆಸಿದರೆ ನೀವೇನು ಮಾಡುತ್ತೀರಿ? ಎಂದು ಹೇಳಿರುವ ಅಣ್ಣಾಮಲೈ ಅವರ ವಿಡಿಯೋ ವೈರಲ್ ಆಗಿದೆ.
ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲು: ಬಿಜೆಪಿ ಖಂಡನೆ
ಸ್ಥಳದಲ್ಲಿ ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆ ಪೊಲೀಸರ ಮಧ್ಯಪ್ರವೇಶದಿಂದ, ಅಣ್ಣಾಮಲೈ ಪ್ರತಿಮೆಗೆ ಚರ್ಚ್ನ ಮೇರಿ ಪ್ರತಿಮೆ ಹಾರ ಹಾಕಿದರು. ಬಳಿಕ ಕಾರ್ತಿಕ್ ಎಂಬುವವರು ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ದೂರು ದಾಖಲಿಸಿದರು. ಅದರ ಆಧಾರದಲ್ಲಿ ಧರ್ಮಪುರಿ ಜಿಲ್ಲೆಯ ಬೊಮ್ಮಿಡಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 153 (ಎ), 504, ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಾಯಿತು.
ಇದೆಲ್ಲ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕವು, ಅಣ್ಣಾಮಲೈ ಚರ್ಚ್ ಪ್ರವೇಶವನ್ನು ವಿರೋಧಿಸಿದ ಗುಂಪು ಆಡಳಿತ ಪಕ್ಷವಾದ ಡಿಎಂಕೆಗೆ ಪರವಾದದ್ದು. ಅದಕ್ಕೆ ಬೇಕು ಅಂತಲೇ ಹೀಗೆ ಮಾಡಿದೆ ಎಂದು ಅವರು ಆರೋಪಿಸಿದೆ. ಡಿಎಂಕೆ ಸರ್ಕಾರವು ಅಣ್ಣಾಮಲೈ ವಿರುದ್ಧ ಕೈಗೊಂಡ ಕಾನೂನು ಕ್ರಮವನ್ನು ಬಿಜೆಪಿ ಘಟಕ ತೀವ್ರವಾಗಿ ಖಂಡಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications