Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ಕೊಯಮತ್ತೂರು ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಆರೋಪಿಸಿದ್ದಾರೆ.
ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಕಾಣೆಯಾಗಿದೆ. ಇದು ಡಿಎಂಕೆ ರಾಜಕೀಯ ಷಡ್ಯಂತ್ರ. ಒಂದು ಲಕ್ಷ ಮತಗಳು ಕಾಣೆಯಾಗಿರುವುದಕ್ಕೆ ಯಾರು ಉತ್ತರ ಕೊಡುತ್ತಾರೆ ಎಂದು ಕೇಳಿದ್ದಾರೆ.

ಹೆಸರು ಕೈಬಿಟ್ಟಿರುವ ಸಂಬಂಧ ಬಿಜೆಪಿ ವತಿಯಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇಗಾಗಲೇ ದೂರು ನೀಡಲಾಗಿದೆ. ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನ ನಡೆಸುವಂತೆಯೂ ಅಣ್ಣಾಮಲೈ ಆಗ್ರಹಿಸಿದ್ದಾರೆ.
Tamil Nadu | State BJP chief and Coimbatore Lok Sabha constituency candidate K Annamalai says, "We saw complaints from a large number of voters on their names being missing from the voters' list. This happened in many places. We are demanding re-poll in places where the names of… pic.twitter.com/zRmWkikhzC
— ANI (@ANI) April 19, 2024
ಪದಾಧಿಕಾರಿಗಳ ಹೆಸರೂ ಕಾಣೆಯಾಗಿದೆ
"ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾಗಿರುವ ಬಗ್ಗೆ ಹೆಚ್ಚಿನ ಸಂಖ್ಯೆಯ ಮತದಾರರು ದೂರು ಕೊಟ್ಟಿದ್ದಾರೆ. ಹಲವು ಕಡೆಗಳಲ್ಲಿ ಇದೇ ರೀತಿ ಆಗಿದೆ. ಮತದಾರರ ಹೆಸರು ಕೈಬಿಟ್ಟಿರು ಕಡೆ ಮರು ಮತದಾನಕ್ಕೆ ಒತ್ತಾಯಿಸುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂದು ಅನುಮಾನವಿದೆ, ಬಿಜೆಪಿ ಪದಾಧಿಕಾರಿಗಳ ಹೆಸರುಗಳು ಕೂಡ ಮತದಾರರ ಪಟ್ಟಿಯಿಂದ ಕಾಣೆಯಾಗಿದೆ." ಎಂದು ಹೇಳಿದರು.
ಬಿಜೆಪಿ ಸದಸ್ಯರಿಂದ ಪ್ರತಿಭಟನೆ
ಕೊಯಮತ್ತೂರಿನ ಗೌಂಡಂಪಾಳ್ಯಂ ಪ್ರದೇಶದಲ್ಲಿ 830 ಜನರ ಮತಗಳು ನಾಪತ್ತೆಯಾಗಿವೆ ಎಂದು ಬಿಜೆಪಿ ಸದಸ್ಯರು ಮತಗಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications