Tamil Nadu bypoll: ತಮಿಳುನಾಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಗೆಲುವು- ಯಾವುದರ ಮುನ್ಸೂಚನೆ?
ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಇವಿಕೆಎಸ್ ಇಳಂಗೋವನ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಎಐಎಡಿಎಂಕೆಯ ಕೆಎಸ್ ತೆನ್ನರಸು ವಿರುದ್ಧ 30,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ವರದಿ ಓದಿ
ಈರೋಡ್, ಮಾರ್ಚ್ 02: ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಇವಿಕೆಎಸ್ ಇಳಂಗೋವನ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಎಐಎಡಿಎಂಕೆಯ ಕೆಎಸ್ ತೆನ್ನರಸು ವಿರುದ್ಧ 30,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಮೂರನೇ ಸುತ್ತಿನ ಮತ ಎಣಿಕೆಯ ಕೊನೆಯಲ್ಲಿ ಆಡಳಿತಾರೂಢ ಡಿಎಂಕೆ ಬೆಂಬಲಿತ ಇಳಂಗೋವನ್ನ ಸ್ಪಷ್ಟ ಗೆಲುವಿನತ್ತ ಮುನ್ನಡೆದಿದ್ದರು. ಆ ನಂತರ ಬಂದ ಫಲಿತಾಂಶದಲ್ಲಿ ಅವರ ಗೆಲುವು ಸ್ಪಷ್ಟವಾಯಿತು. ಡಿಎಂಕೆ ಪಕ್ಷದ ನೇತೃತ್ವದ ಸೆಕ್ಯುಲರ್ ಪ್ರೋಗ್ರೆಸ್ಸಿವ್ ಅಲಯನ್ಸ್ (ಎಸ್ಪಿಎ) ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಈ ಮೈತ್ರಿಕೂಟವು ಎರಡು ಎಡ ಪಕ್ಷಗಳನ್ನು ಒಳಗೊಂಡಿವೆ.

ಮೇನಕಾ ನವನೀತನ್ ನಾಮ್ ತಮಿಳರ್ ಕಚ್ಚಿ ಮತ್ತು ಡಿಎಂಡಿಕೆಯ ಆನಂದ್ ಕ್ರಮವಾಗಿ 1,820 ಮತ್ತು 256 ಮತಗಳನ್ನು ಪಡೆದರು.
ಈ ಅಭೂತಪೂರ್ವ ಗೆಲುವಿಗೆ ಪ್ರತಿಕ್ರಿಯಿಸಿರುವ ಇಳಂಗೋವನ್, 2024 ರ ಲೋಕಸಭಾ ಚುನಾವಣೆಯಲ್ಲಿಯೂ ಇದೇ ರೀತಿಯ ಫಲಿತಾಂಶವನ್ನು ಕಾಂಗ್ರೆಸ್ ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.
ಸ್ಟಾಲಿನ್ ಸರ್ಕಾರದ ಸಕಾರಾತ್ಮಕ ಕೆಲಸಗಳು ನನಗೆ ಸಹಾಯ ಮಾಡಿದೆ ಎಂದು ಇಳಂಗೋವನ್ ಹೇಳಿದರು. 'ಈ ಗೆಲುವು ನಿರೀಕ್ಷಿಸಲಾಗಿತ್ತು. ಇದು ಸಿಎಂ ಸ್ಟಾಲಿನ್ ಅವರ ಆಡಳಿತಕ್ಕೆ ಸಿಕ್ಕ ಮನ್ನಣೆ. ಅವರು 20 ತಿಂಗಳಲ್ಲಿ ಸುಮಾರು 80 ಪ್ರತಿಶತದಷ್ಟು ಚುನಾವಣಾ ಭರವಸೆಗಳನ್ನು ಪೂರ್ಣಗೊಳಿಸಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿಯವರ ಮೇಲೆ ಜನರಿಗೆ ಎಷ್ಟು ಪ್ರೀತಿ ಮತ್ತು ವಾತ್ಸಲ್ಯವಿದೆ ಎಂಬುದಕ್ಕೆ ಇದು ಉದಾಹರಣೆಯಾಗಿದೆ' ಎಂದು ತಿಳಿಸಿದರು.

ತಮಿಳುನಾಡು 39 ಲೋಕಸಭಾ ಸ್ಥಾನಗಳನ್ನು ಹೊಂದಿದ್ದರೆ, ನೆರೆಯ ಪುದುಚೇರಿ ಒಂದು ಸ್ಥಾನವನ್ನು ಹೊಂದಿದೆ.
ಜನವರಿ 4 ರಂದು ಇಳಂಗೋವನ್ ಅವರ ಪುತ್ರ ಕಾಂಗ್ರೆಸ್ ಶಾಸಕ ಇ ತಿರುಮಹನ್ ಎವೆರಾ ಅವರ ನಿಧನದಿಂದಾಗಿ ಈರೋಡ್ ಪೂರ್ವ ಉಪಚುನಾವಣೆ ಅನಿವಾರ್ಯವಾಗಿತ್ತು.
ರಾಜಧಾನಿ ಚೆನ್ನೈನಿಂದ ಸುಮಾರು 400 ಕಿಮೀ ದೂರದಲ್ಲಿರುವ ಈರೋಡ್ ಜಿಲ್ಲೆಯ ಈ ಕ್ಷೇತ್ರದಲ್ಲಿ ಫೆಬ್ರವರಿ 27 ರಂದು ನಡೆದ ಉಪಚುನಾವಣೆಯಲ್ಲಿ ಸುಮಾರು 75 ಪ್ರತಿಶತದಷ್ಟು ಮತಗಳು ಚಲಾವಣೆಯಾಗಿದ್ದವು.

ಈ ಕ್ಷೇತ್ರದಲ್ಲಿ ಡಿಎಂಕೆಯ ಬಹುತೇಕ ಕ್ಯಾಬಿನೆಟ್ ಮಂತ್ರಿಗಳು ಮತ್ತು ಎಐಎಡಿಎಂಕೆಯ ಎಲ್ಲಾ ಮಾಜಿ ಮಂತ್ರಿಗಳು ತಳಮಟ್ಟದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ವಾರ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಪ್ರಚಾರ ನಡೆಸಿದ್ದರು. ತಮ್ಮ ಪ್ರಚಾರ ಭಾಷಣಗಳಲ್ಲಿ, ದ್ರಾವಿಡ ಚಳವಳಿಯ ಹರಿಕಾರ ಪೆರಿಯಾರ್ ಅವರ ಕುಟುಂಬಕ್ಕೆ ಸೇರಿದ ಇಳಂಗೋವನ್ ಅವರ ತಂದೆ ಇವಿಕೆ ಸಂಪತ್ ಅವರ ಬಗ್ಗೆ ಮಾತನಾಡಿದ್ದರು. ಸಂಪತ್ ಪುತ್ರನಿಗೆ ನಿಮ್ಮ ಮತ ಕೇಳಲು ದಿವಂಗತ ಕರುಣಾನಿಧಿ ಪುತ್ರ ಇಲ್ಲಿಗೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದರು.
ಎಂ ಕೆ ಸ್ಟಾಲಿನ್ ಸರ್ಕಾರದ ಆಡಳಿತದ ವೈಖರಿ, ಇಳಂಗೋವನ್ ಅವರ ಪ್ರಾಮಾಣಿಕ ವ್ಯಕ್ತಿತ್ವ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಮತ್ತು ಬೆಳಗಿನ ಉಪಾಹಾರ ಯೋಜನೆಯಂತಹ ಜನಪ್ರಿಯ ಯೋಜನೆಗಳು ಸೇರಿದಂತೆ ಹಲವಾರು ಅಂಶಗಳು ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡಿವೆ. ಎರಡೂ ಪಕ್ಷಗಳಿಂದ ಸಂಪನ್ಮೂಲಗಳ ಬೃಹತ್ ನಿಯೋಜನೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಗೆ ತಮಿಳುನಾಡಿನಲ್ಲಿ ಗೆಲುವು ಸಿಕ್ಕಿದೆ.
77 ಅಭ್ಯರ್ಥಿಗಳು ಕಣದಲ್ಲಿದ್ದರೆ, ಇಳಂಗೋವನ್ ಮತ್ತು ಎಐಎಡಿಎಂಕೆ ಮಾಜಿ ಶಾಸಕ ತೆನ್ನರಸು ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ನಾಮ್ ತಮಿಳರ್ ಕಚ್ಚಿಯ ಎನ್ ಮೇನಕಾ ಮತ್ತು ಡಿಎಂಡಿಕೆಯ ಎಸ್ ಆನಂದ್ ಇತರ ಅಭ್ಯರ್ಥಿಗಳಲ್ಲಿ ಪ್ರಮುಖರಾಗಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications