Get Updates
Get notified of breaking news, exclusive insights, and must-see stories!

ಮಾನವೀಯ ನೆರವು: ಮಣಿಪುರಕ್ಕೆ ಮತ್ತೆ ಸಹಾಯ ಹಸ್ತ ಚಾಚಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ಚೆನ್ನೈ, ಆಗಸ್ಟ್. 01: ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯಕ್ಕೆ ಔಷಧಿ ಸೇರಿದಂತೆ ಮಾನವೀಯ ನೆರವು ನೀಡಲು ನಾವು ಸಿದ್ಧವಾಗಿದ್ದೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಪರಿಹಾರ ಶಿಬಿರಗಳಲ್ಲಿ ನೆಲೆಸಿರುವವರಿಗೆ ನೆರವು ಸಾಮಗ್ರಿಗಳನ್ನು ಕಳುಹಿಸಲು ಒಪ್ಪಿಗೆ ನೀಡುವಂತೆ ತಮಿಳುನಾಡು ಸರ್ಕಾರ ಮಣಿಪುರಕ್ಕೆ ಮನವಿ ಮಾಡಿದೆ.

ಈಶಾನ್ಯ ರಾಜ್ಯದಲ್ಲಿ 'ಪ್ರಚಲಿತ ಪರಿಸ್ಥಿತಿ'ಯಿಂದಾಗಿ ಸುಮಾರು 50,000 ಕ್ಕೂ ಹೆಚ್ಚು ಜನರು ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ ಎಂದು ತಮಗೆ ಮಾಹಿತಿಯಿದೆ ಎಂದು ಜುಲೈ 31 ರ ಪತ್ರದಲ್ಲಿ ಎಂಕೆ ಸ್ಟಾಲಿನ್ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್‌ ಅವರಿಗೆ ತಿಳಿಸಿದ್ದಾರೆ. ಪತ್ರದಲ್ಲಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಉಲ್ಲೇಖಿಸಲಾಗಿದೆ.

"ಈ ನಿರ್ಣಾಯಕ ಸಮಯದಲ್ಲಿ, ತಮಿಳುನಾಡು ಸರ್ಕಾರವು ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಟಾರ್ಪಾಲಿನ್ ಶೀಟ್‌ಗಳು, ಬೆಡ್ ಶೀಟ್‌ಗಳು, ಸೊಳ್ಳೆ ಪರದೆಗಳು, ಅಗತ್ಯ ಔಷಧಗಳು, ಸ್ಯಾನಿಟರಿ ನ್ಯಾಪ್‌ಕಿನ್‌ಗಳು ಮತ್ತು ಹಾಲಿನ ಪುಡಿಯಂತಹ ಅಗತ್ಯ ಪರಿಹಾರ ಸಾಮಗ್ರಿಗಳನ್ನು ಒದಗಿಸುವ ಮೂಲಕ ನಿಮ್ಮ ರಾಜ್ಯಕ್ಕೆ ಬೆಂಬಲ ನೀಡಲು ಸಿದ್ಧವಾಗಿದೆ" ಎಂದು ಸಿಎಂ ಎಂಕೆ ಸ್ಟಾಲಿನ್ ತಿಳಿಸಿದ್ದಾರೆ.

Tamil Nadu CM Stalin writes to Manipur cm on sending aid, including medicines

"ಈ ನೆರವು ಶಿಬಿರಗಳಲ್ಲಿ ತಂಗಿರುವ ಜನರಿಗೆ ತುಂಬಾ ಉಪಯುಕ್ತವಾಗಿದೆ ಮತ್ತು ಅಗತ್ಯವಿದ್ದರೆ ಅವರನ್ನು ಏರ್ ಲಿಫ್ಟ್ ಮಾಡಬಹುದು. ಈ ಮಾನವೀಯ ನೆರವಿಗೆ ನಿಮ್ಮ ಸರ್ಕಾರದ ಒಪ್ಪಿಗೆಯನ್ನು ದಯೆಯಿಂದ ನೀಡುವಂತೆ ನಾನು ವಿನಂತಿಸುತ್ತೇನೆ" ಎಂದು ಮಣಿಪುರ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

"ಈ ಮಾನವೀಯ ನೆರವು ನೀಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮದ ಬಗ್ಗೆ ದಯವಿಟ್ಟು ನಮಗೆ ತಿಳಿಸಿ, ಇದರಿಂದ ನನ್ನ ಅಧಿಕಾರಿಗಳು ನಿಮ್ಮ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬಹುದು ಮತ್ತು ಪರಿಹಾರ ಸಾಮಗ್ರಿಗಳನ್ನು ಶೀಘ್ರವಾಗಿ ನಿಮ್ಮ ರಾಜ್ಯಕ್ಕೆ ಕಳುಹಿಸಬಹುದು" ಎಂದು ಮುಖ್ಯಮಂತ್ರಿ ಸ್ಟಾಲಿನ್ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ತಮಿಳುನಾಡಿನಲ್ಲಿ ಜನಾಂಗೀಯ ಹಿಂಸಾಚಾರದ ಹಿನ್ನೆಲೆಯಲ್ಲಿ ಮಣಿಪುರ ಕ್ರೀಡಾ ಪಟುಗಳಿಗೆ ತರಬೇತಿ ಸೌಲಭ್ಯಗಳನ್ನು ಒದಗಿಸಲು ತಮಿಳುನಾಡು ಸಿಎಂ ಸ್ಟಾಲಿನ್ ಈ ಹಿಂದೆ ಮುಂದಾಗಿದ್ದರು. ಖೇಲೋ ಇಂಡಿಯಾ ಮತ್ತು ಏಷ್ಯನ್ ಗೇಮ್ಸ್‌ನಂತಹ ಕ್ರೀಡಾಕೂಟಗಳಿಗೆ ತರಬೇತಿ ಪಡೆಯಲು ಮಣಿಪುರದ ಪರಿಸ್ಥಿತಿ ಅಲ್ಲಿನ ಕ್ರೀಡಾಪಟುಗಳಿಗೆ ಅನುಕೂಲಕರವಾಗಿಲ್ಲ ಎಂದು ಸಿಎಂ ಸ್ಟಾಲಿನ್ ಹೇಳಿದ್ದರು.

Tamil Nadu CM Stalin writes to Manipur cm on sending aid, including medicines

ಹೀಗಾಗಿ ಮಣಿಪುರದ ಕ್ರೀಡಾಪಟುಗಳಿಗೆ ತಮಿಳುನಾಡಿನಲ್ಲಿ ವ್ಯವಸ್ಥೆ ಮಾಡುವಂತೆ ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸೂಚಿಸಿದ್ದೇನೆ. ಕ್ರೀಡಾ ಇಲಾಖೆಯ ಪರವಾಗಿ "ಉತ್ತಮ ಗುಣಮಟ್ಟದ" ಸೌಲಭ್ಯಗಳನ್ನು ಒದಗಿಸುವುದಾಗಿ ಉದಯನಿಧಿ ಭರವಸೆ ನೀಡಿದ್ದಾರೆ. ಮಣಿಪುರವು ಚಾಂಪಿಯನ್‌ಗಳನ್ನು, ವಿಶೇಷವಾಗಿ ಮಹಿಳಾ ಚಾಂಪಿಯನ್‌ಗಳನ್ನು ದೇಶಕ್ಕೆ ನೀಡುವಲ್ಲಿ ಹೆಸರುವಾಸಿಯಾಗಿದೆ" ಎಂದು ಆಹ್ವಾನ ನೀಡಿದ್ದರು.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಮಂದಿ ಗಾಯಗೊಂಡಿದ್ದಾರೆ. ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೀಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಕುಕಿ ಸಮುದಾಯ ಬೆಟ್ಟದ ಜಿಲ್ಲೆಗಳಲ್ಲಿ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ ಆಯೋಜಿಸಿತ್ತು. ಇದು ಹಿಂಸಾಚಾರಕ್ಕೆ ಕಾರಣವಾಗಿತ್ತು.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೀಯಿ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. 40 ಪ್ರತಿಶತಕ್ಕಿಂತ ಸ್ವಲ್ಪ ಹೆಚ್ಚಿರುವ ಬುಡಕಟ್ಟು ಜನಾಂಗದವರು, ನಾಗಾಗಳು ಮತ್ತು ಕುಕಿ ಸಮುದಾಯಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+