ಕರುಣಾನಿಧಿ ಮರಿ ಮೊಮ್ಮಗ ರಾಜಕೀಯ ಎಂಟ್ರಿಗೆ ಚರ್ಚೆ ಜೋರು!
ಕುಟುಂಬ ರಾಜಕೀಯ ಎನ್ನುವುದು ಭಾರತದಲ್ಲಿ ಹೊಸದೇನು ಅಲ್ಲ. ಆದರೆ ಮೂರು ತಲೆಮಾರು ನಾಲ್ಕನೇ ತಲೆಮಾರಿನವರು ಸಹ ರಾಜಕೀಯಕ್ಕೆ ಎಂಟ್ರಿ ಕೊಡುವುದು ಬಹುಶಃ ಭಾರತದಲ್ಲಿ ಅಪರೂಪ. ಇಂತಹ ಮತ್ತೊಂದು ಅಪರೂಪದ ರಾಜಕೀಯಕ್ಕೆ ತಮಿಳುನಾಡಿನ ಜನ ಸಾಕ್ಷಿಯಾಗುತ್ತಿದ್ದಾರೆ. ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದಲ್ಲಿ ಈ ರೀತಿಯ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿನಲ್ಲಿ ಇದೀಗ ಡಿಎಂಕೆ ಪಕ್ಷ ಅಧಿಕಾರದಲ್ಲಿದ್ದು, ಮಾಜಿ ಮುಖ್ಯಮಂತ್ರಿ ದಿ. ಕರುಣಾನಿಧಿ ಅವರ ಪುತ್ರ ಎಂ.ಕೆ ಸ್ಟಾಲಿನ್ ಅವರು ಮುಖ್ಯಮಂತ್ರಿಯಾಗಿದ್ದರೆ. ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಉಪಮುಖ್ಯಮಂತ್ರಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ರಾಜಕೀಯದಲ್ಲಿ ಉನ್ನತ ಸ್ಥಾನಗಳನ್ನು ಉದಯನಿಧಿಗೆ ಕೊಟ್ಟಿರುವುದಕ್ಕೇ ಭಾರೀ ಚರ್ಚೆಯಾಗುತ್ತಿದೆ. ಆದರೆ ಇಲ್ಲಿ ನಾಲ್ಕನೇ ತಲೆಮಾರಿನ ರಾಜಕೀಯ ಲೆಕ್ಕಾಚಾರಗಳು ಈಗ ಜೋರಾಗಿವೆ!
ಹೌದು ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಪ್ರಾರಂಭವಾಗಿದೆ. ತಮಿಳುನಾಡಿನಲ್ಲಿ ಮುಂದಿನ ದಿನಗಳಲ್ಲಿ ಹೊಸ ರಾಜಕೀಯ ಶುರುವಾಗಲಿದೆಯೇ ಅಥವಾ ಉದಯನಿಧಿ ಸ್ಟಾಲಿನ್ ಅವರ ಪುತ್ರ ಸಹ ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಎಂಟ್ರಿಕೊಡಲಿದ್ದಾರೆಯೇ ಎನ್ನುವ ವಿಷಯ ಭಾರೀ ಚರ್ಚೆಯಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಈಚೆಗೆ ತಮಿಳುನಾಡು ರಾಜಕೀಯದಲ್ಲಿ ನಡೆದಿರುವ ಘಟನೆ. ಈಚೆಗಷ್ಟೇ ಉದಯನಿಧಿ ಸ್ಟಾಲಿನ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಉದಯನಿಧಿ ಸ್ಟಾಲಿನ್ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದಾಗಲೇ ಭಾರೀ ವಿರೋಧ ವ್ಯಕ್ತವಾಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನದಂತಹ ಪ್ರಮುಖ ಜವಾಬ್ದಾರಿಗಳನ್ನು ಕೊಟ್ಟಿದ್ದಕ್ಕೆ ವಿರೋಧ ಪಕ್ಷಗಳು ಮಾತ್ರವಲ್ಲ. ಡಿಎಂಕೆಯ ಕಾರ್ಯಕರ್ತರಲ್ಲೂ ಅಸಮಾಧಾನ ಮೂಡಿತ್ತು. ಇದು ತಣ್ಣಗಾಗುವ ಮೊದಲೇ ಉದಯನಿಧಿ ಸ್ಟಾಲಿನ್ ಅವರ ಮಗ ಇನ್ಬನಿಧಿ ಸ್ಟಾಲಿನ್ ಅವರು ಸರ್ಕಾರಿ ಕಾರ್ಯಕ್ರಮಗಳ ಮುಖ್ಯ ವೇದಿಕೆಯಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದಾರೆ.

ರಾಜಕೀಯಕ್ಕೆ ಬರ್ತಾರಾ ಇನ್ಬನಿಧಿ ಸ್ಟಾಲಿನ್ ?
ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿಧಿ ಸ್ಟಾಲಿನ್ ಅವರು ಸಹ ರಾಜಕೀಯಕ್ಕೆ ಬರಲಿದ್ದಾರೆಯೇ ಎನ್ನುವ ವಿಷಯ ಭಾರೀ ಚರ್ಚೆಯಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಉದಯನಿಧಿ ಅವರೊಂದಿಗೆ ಅವರ ಪುತ್ರ ಸಹ ಕಾರ್ಯಕ್ರಮವೊಂದರ ವೇದಿಕೆ ಹಂಚಿಕೊಂಡಿರುವುದು. ತಮಿಳುನಾಡಿನ ಅಲಂಗನಲ್ಲೂರು ಎನ್ನುವಲ್ಲಿ ನಡೆದ ಜಲ್ಲಿಕಟ್ಟು ಸಮಾರಂಭದಲ್ಲಿ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿಧಿ ಸ್ಟಾಲಿನ್ ಕಾಣಿಸಿಕೊಂಡಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಇವರು ಭಾಗಿಯಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಇದೇ ಸಮಾರಂಭದಲ್ಲಿ ಮಧುರೈ ಜಿಲ್ಲಾಧಿಕಾರಿಯನ್ನೇ ಸೈಡ್ ಮಾಡಿ ಇನ್ಬನಿಧಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಈ ಬೆಳವಣಿಗೆ ನಡೆದ ಮೇಲೆ ಇನ್ಬನಿಧಿ ಸಹ ರಾಜಕೀಯಕ್ಕೆ ಬರಲಿದ್ದಾರೆಯೇ ಎನ್ನುವ ಚರ್ಚೆ ಶುರುವಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications