The Kerala Story: ದಿ ಕೇರಳ ಸ್ಟೋರಿ ಬಿಡುಗಡೆಗೆ ತಮಿಳುನಾಡಿನಲ್ಲಿ ಭಾರೀ ಕಟ್ಟೆಚ್ಚರ!
ಚೆನ್ನೈ, ಮೇ. 05: ಭಾರಿ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಲನಚಿತ್ರವು ಶುಕ್ರವಾರದಂದು ಬಿಡುಗಡೆಯಾಗಲಿದೆ. ಹೀಗಾಗಿ ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಮೇಲೆ ನಿಗಾ ಇಡಲು ತಮಿಳುನಾಡು ಸರ್ಕಾರವು ಎಲ್ಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.
ಈ ಚಲನಚಿತ್ರವು ಕೇರಳ ಮತ್ತು ಇತರ ಹಲವೆಡೆಗಳಲ್ಲಿ ಅನೇಕ ಪಕ್ಷಗಳು ಮತ್ತು ಇತರ ಗುಂಪುಗಳ ನಡುವೆ ವಿವಾದವನ್ನು ಹುಟ್ಟುಹಾಕಿದೆ. ಇದೆ ಕಾರಣಕ್ಕೆ ಸಂಘರ್ಷಗಳು ಉಂಟಾಗುವ ಕಾರಣ ತಮಿಳುನಾಡು ಸರ್ಕಾರ ಮುನ್ನೆಚ್ಚರಿಕರ ತೆಗೆದುಕೊಂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ತಮಿಳುನಾಡು ಸರ್ಕಾರವು ಎಲ್ಲಾ ಜಿಲ್ಲಾ ಕಲೆಕ್ಟರ್ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದೆ.

ದಿ ಕೇರಳ ಸ್ಟೋರಿ ಚಿತ್ರ ಮೇ 5 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ. ಈ ಚಲನಚಿತ್ರವನ್ನು ನಾಲ್ಕು ಭಾಷೆಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬರಲಿದೆ. ಚಲನಚಿತ್ರಗಳ ಬಿಡುಗಡೆ ಸೇರಿದಂತೆ ಕೆಲವು ಘಟನೆಗಳ ಕಾರಣದಿಂದ ಯಾವುದೇ ತೊಂದರೆ ಉಂಟಾಗುವ ಸಾಧ್ಯತೆಯಿರುವ ಕಾರಣ ಸರ್ಕಾರ ಎಚ್ಚರಿಕೆ ವಹಿಸಿದೆ.
ರಾಜ್ಯದಲ್ಲಿ ಪೊಲೀಸರ ಗುಪ್ತಚರ ವಿಭಾಗದ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಚಿತ್ರವನ್ನು ನಿಷೇಧಿಸಲು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ. ನಮಗೆ ಅಂತಹ ಯಾವುದೇ ವಿನಂತಿ ಬಂದಿಲ್ಲ. ಕೇರಳದಲ್ಲಿಯೂ ಇಂತಹ ಕ್ರಮ ಕೈಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

2011 ರ ಕೊನೆಯಲ್ಲಿ, ಜಯಲಲಿತಾ ನೇತೃತ್ವದ ಸರ್ಕಾರವು ಇಂಗ್ಲಿಷ್ ಚಲನಚಿತ್ರ ಡ್ಯಾಮ್ 999 ನ ಪ್ರದರ್ಶನವನ್ನು ನಿಷೇಧಿಸಿತ್ತು. ಅದರ ಶೀರ್ಷಿಕೆಯು ಪರೋಕ್ಷವಾಗಿ ತಮಿಳುನಾಡು ಮತ್ತು ಕೇರಳ ನಡುವಿನ ಮುಲ್ಲಪೆರಿಯಾರ್ ಅಣೆಕಟ್ಟು ವಿವಾದವನ್ನು ಸೂಚಿಸುತ್ತದೆ ಎನ್ನಲಾಗಿತ್ತು. ನಿಷೇಧವು ಇನ್ನೂ ಒಂದು ವರ್ಷದವರೆಗೆ ಜಾರಿಯಲ್ಲಿದೆ.
ಇನ್ನು, 2013 ರ ಆರಂಭದಲ್ಲಿ, ಕಮಲ್ ಹಾಸನ್ ಅಭಿನಯದ ವಿಶ್ವರೂಪಂ ಚಿತ್ರಕ್ಕೆ ಮುಸ್ಲಿಂ ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರಂಭದಲ್ಲಿ ಅಧಿಕಾರಿಗಳು ಚಿತ್ರಕ್ಕೆ ನಿಷೇಧ ಹೇರಿದ್ದರು. ಆದರೆ, ಚಲನಚಿತ್ರ ನಿರ್ಮಾಪಕರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ನಂತರ ಚಿತ್ರಕ್ಕೆ ಹಾಕಿದ್ದ ನಿಷೇಧವನ್ನು ತೆಗೆದುಹಾಕಲಾಯಿತು.
2006 ರಲ್ಲಿ, ದಿ ಡಾ ವಿನ್ಸಿ ಕೋಡ್ ಎಂಬ ಚಲನಚಿತ್ರದ ಪ್ರದರ್ಶನವನ್ನು ಕರುಣಾನಿಧಿ ನೇತೃತ್ವದ ಸರ್ಕಾರವು ನಿಷೇಧಿಸಿತು, ಆದರೆ ಮದ್ರಾಸ್ ಹೈಕೋರ್ಟ್ ಅದರ ಪ್ರದರ್ಶನಕ್ಕೆ ಅನುಮತಿ ನೀಡಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications