ಮೇಕೆದಾಟು ಯೋಜನೆ ಕುರಿತು ಡಿಕೆ ಶಿವಕುಮಾರ್ ಹೇಳಿಕೆ: ವಿರೋಧ ವ್ಯಕ್ತಪಡಿಸಿದ ತಮಿಳುನಾಡು ಸರ್ಕಾರ
ಚೆನ್ನೈ, ಮೇ 31: ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಪೂರ್ಣಗೊಳಿಸಲು ಕರ್ನಾಟಕದ ಸರ್ಕಾರ 1,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಪ್ರತಿಕ್ರಿಯಿಸಿದೆ. ಈ ಕುರಿತು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗಣ್ ಅವರು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.
'ಕರ್ನಾಟಕ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರು ಮೇಕೆದಾಟು ಅಣೆಕಟ್ಟು ಕಾಮಗಾರಿ ಪೂರ್ಣಗೊಳಿಸುತ್ತೇವೆ. ಅದಕ್ಕಾಗಿ 1,000 ಕೋಟಿ ರೂಪಾಯಿಗಳ ನಿಧಿಯನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಸುದ್ದಿಯನ್ನು ಇಂದು ಬೆಳಿಗ್ಗೆ ಪತ್ರಿಕೆಗಳಲ್ಲಿ ಓದಿದೆ' ಎಂದು ದೊರೈಮುರುಗಣ್ ಹೇಳಿದ್ದಾರೆ.

'ಭಾರೀ ಹೋರಾಟ ನಡೆಸಿ ಗೆದ್ದಿರುವ ಶಿವಕುಮಾರ್ ಅವರು ಜನರ ಅಭಿನಂದನೆ ಪಡೆಯುವಲ್ಲಿ ನಿರತರಾಗಿರುವ ಕಾರಣ ನಾನೇ ಒಂದು ಕ್ಷಣ ಖುದ್ದಾಗಿ ಬಂದು ಅಭಿನಂದಿಸುತ್ತೇನೆ. ಆದಾಗ್ಯೂ, ಈ ಹೇಳಿಕೆಯ ಮೂಲಕ ನಾನು ಅವರಿಗೆ ನನ್ನ ಶುಭಾಶಯಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ' ಎಂದು ಅವರು ತಿಳಿಸಿದ್ದಾರೆ.
'ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಪಕ್ಕದ ರಾಜ್ಯವನ್ನು ಕೆಣಕುವ ಕೆಲಸ ಮಾಡುತ್ತಿರುವುದು ಆಶ್ಚರ್ಯ ತಂದಿದೆ. ಅಧಿಕಾರಿಗಳು ಇನ್ನೂ ಮೇಕೆದಾಟುವಿನ ಸಂಪೂರ್ಣ ವಿವರಗಳನ್ನು ಅವರಿಗೆ ತಿಳಿಸಿಲ್ಲ ಎಂದು ನಾನು ಭಾವಿಸುತ್ತೇನೆ' ಎಂಬುದಾಗಿ ತಮಿಳುನಾಡು ಜಲಸಂಪನ್ಮೂಲ ಸಚಿವರು ಹೇಳಿದ್ದಾರೆ.
'ಕಾವೇರಿ ಸಮಸ್ಯೆ ಬಗೆಹರಿಸಲು ರಚಿಸಲಾಗಿರುವ ಕಾವೇರಿ ನ್ಯಾಯಮಂಡಳಿ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಮೇಕೆದಾಟು ಯೋಜನೆ ಬಗ್ಗೆ ಉಲ್ಲೇಖವಾಗಿಲ್ಲ. ಅನಧಿಕೃತ ನಿರ್ಮಾಣಗಳು ತಮಿಳುನಾಡಿನ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ ತಮಿಳುನಾಡಿನ ಹಕ್ಕಾಗಿರುವ ಅನಿಯಂತ್ರಿತ ಮಧ್ಯಂತರ ಜಲಾನಯನ ಪ್ರದೇಶದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುತ್ತೇವೆ ಎಂಬುದಾಗಿ ಹೇಳಿರುವುದು ಸ್ವಾಗತಾರ್ಹವಲ್ಲ' ಎಂದು ದೊರೈಮುರುಗಣ್ ಹೇಳಿದ್ದಾರೆ.

'ಮೇಘದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸುವ ಕರ್ನಾಟಕ ಸರ್ಕಾರದ ಯೋಜನೆಯನ್ನು ತಮಿಳುನಾಡು ಎಲ್ಲಾ ಹಂತಗಳಲ್ಲಿ ವಿರೋಧಿಸುತ್ತದೆ. ಶೀಘ್ರದಲ್ಲೇ ಅವರನ್ನು ಖುದ್ದಾಗಿ ಭೇಟಿಯಾಗುವ ಅವಕಾಶ ಸಿಗಲಿದೆ. ನಂತರ ನಾವು ಈ ಸಮಸ್ಯೆಯನ್ನು ವಿವರವಾಗಿ ಮಾತನಾಡಬಹುದು ಎಂಬುದಾಗಿ ನಾನು ಭಾವಿಸುತ್ತೇನೆ. ಅಲ್ಲಿಯವರೆಗೆ ಗೌರವಾನ್ವಿತ ಶಿವಕುಮಾರ್ ತಾಳ್ಮೆಯಿಂದ ಇರುತ್ತಾರೆ ಎಂದು ನಾನು ಭಾವಿಸುತ್ತೇನೆ' ಎಂಬುದಾಗಿ ತಿಳಿಸಿದ್ದಾರೆ.
ಚುನಾವಣೆಗೂ ಮುನ್ನ ಮೇಕೆದಾಟು ಯೋಜನೆ ಜಾರಿಗಾಗಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications