ದಲಿತರಿಗೆ ಪ್ರವೇಶ ನಿರಾಕರಿಸಿದ ದೇವಸ್ಥಾನಕ್ಕೆ ಬೀಗ ಜಡಿದ ಸರ್ಕಾರ- ಎಲ್ಲಿ ತಿಳಿಯಿರಿ
ಚೆನ್ನೈ, ಜೂನ್ 08: ವಿಲ್ಲುಪುರಂ ಜಿಲ್ಲೆಯ ಮೇಲ್ಪತಿ ಗ್ರಾಮದ ದೇವಸ್ಥಾನಕ್ಕೆ ತಮಿಳುನಾಡು ಸರ್ಕಾರ ಬುಧವಾರ ಬೀಗ ಜಡಿದಿದೆ. ಈ ದೇವಾಲಯಕ್ಕೆ ದಲಿತರು ಪ್ರವೇಶಿಸಬಾರದು ಎಂದು ಪ್ರಬಲ ಜಾತಿಯವರು ಆಜ್ಞೆ ಮಾಡಿದ್ದರು. ಈ ಕುರಿತು ಶಾಂತಿ ಮಾತುಕತೆಗಳು ನಡೆದಿದ್ದವು. ಆದರೂ, ದಲಿತರಿಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡ ತಮಿಳು ನಾಡು ಸರ್ಕಾರ ದೇವಸ್ಥಾನವನ್ನು ಸೀಲ್ ಮಾಡಿದೆ ಎಂದು 'ಡೆಕ್ಕನ್ ಹೆರಾಲ್ಡ್' ವರದಿ ಮಾಡಿದೆ.
ಜಿಲ್ಲೆಯ ಶ್ರೀ ಧರ್ಮರಾಜ ದ್ರೌಪದಿ ಅಮ್ಮನ್ ದೇವಸ್ಥಾನದೊಳಗೆ ಗ್ರಾಮದಲ್ಲಿ ಬಹುಸಂಖ್ಯಾತರಾಗಿರುವ ವನ್ನಿಯಾರ್ಗಳು ತಮ್ಮನ್ನು ಪ್ರವೇಶಿಸಲು ಬಿಡುತ್ತಿಲ್ಲ ಎಂದು ಎಸ್ಸಿ ಸಮುದಾಯದ ಸದಸ್ಯರು ಆರೋಪಿಸಿದ ನಂತರ ವಿವಾದ ಭುಗಿಲೆದ್ದಿದೆ. ದಲಿತರು ದೇವಾಲಯಕ್ಕೆ ಪ್ರವೇಶಿಸುವುದನ್ನು ಖಾತ್ರಿಪಡಿಸುವ ಮೂಲಕ ಶಾಂತಿಯನ್ನು ತರಲು ಜಿಲ್ಲಾಡಳಿತ ಹಲವಾರು ಪ್ರಯತ್ನಗಳನ್ನು ಮಾಡಿತು. ಆದರೆ ಇದೆಲ್ಲವೂ ವ್ಯರ್ಥವಾಗಿದೆ.

ದೇವಸ್ಥಾನವು ಹಿಂದೂ ಧಾರ್ಮಿಕ ಮತ್ತು ಧರ್ಮದತ್ತಿ ಇಲಾಖೆಯಿಂದ ನಿರ್ವಹಿಸಲ್ಪಡುತ್ತಿದೆ. ಗ್ರಾಮದಲ್ಲಿರುವ ವನ್ನಿಯಾರ್ಗಳು ದೇವಸ್ಥಾನದ ದೈನಂದಿನ ವ್ಯವಹಾರಗಳನ್ನು ನಿಯಂತ್ರಿಸುತ್ತಾರೆ. ದಲಿತರು ಹೊರಗಿನಿಂದ ದೇವರನ್ನು ಪೂಜಿಸಬಹುದು. ಆದರೆ ದೇವಾಲಯಕ್ಕೆ ಪ್ರವೇಶಿಸಬಾರದು ಎಂಬ ತಮ್ಮ ನಿಲುವಿನಲ್ಲಿ ವನ್ನಿಯಾರ್ಗಳು ಅಚಲವಾಗಿದ್ದರಿಂದ ಶಾಂತಿ ಮಾತುಕತೆ ವಿಫಲವಾಯಿತು.
ಮೇ ತಿಂಗಳ ಕೊನೆಯ ಸುತ್ತಿನ ಮಾತುಕತೆಯ ಸಮಯದಲ್ಲಿ ಎಲ್ಲಾ ಪ್ರಯತ್ನಗಳು ವಿಫಲವಾದ ಕಾರಣ, ವಿಲ್ಲುಪುರಂ ಕಂದಾಯ ವಿಭಾಗೀಯ ಅಧಿಕಾರಿ ಎಸ್ ರವಿಚಂದ್ರನ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಬೆಳಿಗ್ಗೆ ಗ್ರಾಮಕ್ಕೆ ಬಂದು ದೇವಾಲಯವನ್ನು ಸೀಲ್ ಮಾಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ದೇವಾಲಯವನ್ನು ಮುಚ್ಚಲಾಗಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 145 (1) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಡೆಕ್ಕನ್ ಹೆರಾಲ್ಡ್ಗೆ ತಿಳಿಸಿದ್ದಾರೆ.
ಶಾಂತಿ ಭಂಗದಂತಹ ಚಟುವಟಿಕೆ ಕಂಡುಬಂದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ ಎಂದು ತಿಳಿದುಬಂದಿದೆ. ಎಪ್ರಿಲ್ನಲ್ಲಿ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಪ್ರವೇಶಿಸಲು ಯತ್ನಿಸಿದ ದಲಿತರ ಮೇಲೆ ವನ್ನಿಯಾರ್ಗಳು ಹಲ್ಲೆ ನಡೆಸಿದಾಗ ಎರಡು ಸಮುದಾಯಗಳ ನಡುವಿನ ಉದ್ವಿಗ್ನತೆಗೆ ಕಾರಣವಾಯಿತು.

ವಿಲ್ಲುಪುರಂ ಸಂಸದ ಡಿ.ರವಿಕುಮಾರ್ ಅವರು ಪ್ರತಿ ಸಮುದಾಯದವರ ಆರಾಧನೆಯ ಹಕ್ಕನ್ನು ಗೌರವಿಸಿ ಅನುಷ್ಠಾನಗೊಳಿಸುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಡೆಕ್ಕನ್ ಹೆರಾಲ್ಡ್ಗೆ ತಿಳಿಸಿದರು.
'ದೇವಸ್ಥಾನಕ್ಕೆ ಟ್ರಸ್ಟಿಗಳನ್ನು ನೇಮಿಸಲು ಮತ್ತು ಅದರ ದೈನಂದಿನ ವ್ಯವಹಾರಗಳನ್ನು ವಹಿಸಿಕೊಳ್ಳಲು ಗ್ರಾಮಸ್ಥರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದೇವಾಲಯದ ಒಳಗೆ ಹೋಗಲು ಮತ್ತು ಪೂಜೆ ಮಾಡಲು ಅನುಮತಿಸುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರ ಸಹಾಯವನ್ನು ದಲಿತರು ಕೋರಿದ್ದಾರೆ. ಅವರ ಬೇಡಿಕೆಗಳನ್ನು ಸರ್ಕಾರ ಜಾರಿಗೊಳಿಸಬೇಕು' ಎಂದು ಒತ್ತಾಯಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications