Cyclone Fengal: ಫೆಂಗಲ್ ಚಂಡಮಾರುತ- ಸಚಿವ ಕೆ ಪೊನ್ಮಡಿ ಮೇಲೆ ಕೆಸರು ಎಸೆದ ಗ್ರಾಮಸ್ಥರು!
ತಮಿಳುನಾಡಿನಲ್ಲಿ ಇಂದು ಕೂಡ ಧಾಕಾರವಾಗಿ ಮಳೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ತಮಿಳುನಾಡಿನ ಜನ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ನೆರೆ ರಾಜ್ಯದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮನೆಗಳು, ರಸ್ತೆಗಳು ನದಿಗಳಾಗಿ ಪರಿವರ್ತನೆಗೊಂಡಿವೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಇದಕ್ಕಾಗಿ ಸ್ಥಳ ಪರಿಶೀಲನೆಗೆಂದು ತೆರಳಿದ ತಮಿಳುನಾಡು ಅರಣ್ಯ ಸಚಿವರ ಮೇಲೆ ಸ್ಥಳೀಯರು ಕೋಪ ತೋರಿಸಿದ್ದಾರೆ. ಅವರ ಮೇಲೆ ಕೆಸರು ಎಸೆದು ಆಕ್ರೋಶ ಹೊರ ಹಾಕಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಇರುವೆಲ್ಪಟ್ಟು ಗ್ರಾಮದ ನಿವಾಸಿಗಳು ಮಂಗಳವಾರ (ಡಿಸೆಂಬರ್ 03) ಪ್ರವಾಹದಿಂದ ಉಂಟಾದ ಹಾನಿಯನ್ನು ವೀಕ್ಷಿಸಲು ಬಂದ ತಮಿಳುನಾಡು ಅರಣ್ಯ ಸಚಿವ ಕೆ ಪೊನ್ಮಡಿ ಅವರ ಮೇಲೆ ಕೆಸರು ಎಸೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಫೆಂಗಲ್ ಚಂಡಮಾರುತದಿಂದ ನಾನಾ ಸಮಸ್ಯೆಗಳನ್ನು ಅನುಭವಿಸಿದ ಪ್ರದೇಶದಲ್ಲಿ ಇರುವೆಲ್ಪಟ್ಟು ಗ್ರಾಮವೂ ಒಂದು. ಇಲ್ಲಿನ ಸಮಸ್ಯೆಗಳ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ಪ್ರಯೋಜನವಾಗಿರಲಿಲ್ಲ. ಫೆಂಗಲ್ ಚಂಡಮಾರುತದಿಂದ ಪರಿಹಾರವೂ ಸರಿಯಾಗಿ ನೀಡದ ಬೆನ್ನಲ್ಲೆ ಜನರ ಕೋಪ ನೆತ್ತಿಗೇರಿತ್ತು. ಹೀಗಾಗಿ ಸಚಿವರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮದ ಜನ ಪ್ರತಿಭಟನೆಗೆ ಮುಂದಾಗಿದ್ದರು. ಇದೇ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಇರುವೆಲ್ಪಟ್ಟು ಗ್ರಾಮವನ್ನು ಪರಿಶೀಲಿಸುವಾಗ ವಿಲ್ಲುಪುರಂ ಜಿಲ್ಲೆಯಾದ್ಯಂತ ಫೆಂಗಲ್ ಚಂಡಮಾರುತದ ಪ್ರಭಾವ ಹೆಚ್ಚಾಗಿರುವುದು ಕಂಡು ಬಂದಿದೆ. ತಮ್ಮ ದೂರದ ಗ್ರಾಮವನ್ನು ಅಧಿಕಾರಿಗಳು ಎರಡು ದಿನಗಳಿಂದ ನಿರ್ಲಕ್ಷಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕಾರಣಕ್ಕೆ ಕೋಪಗೊಂಡ ಸ್ಥಳೀಯರು ಜಮಾಯಿಸಿ ಸಚಿವರ ಮೇಲೆ ಕೆಸರು ಎಸೆದಿದ್ದಾರೆ. ಇದರಿಂದಾಗಿ ಸಚಿವರ ಬಿಳಿ ಅಂಗಿ ಹಾಗೂ ಅವರೊಂದಿಗೆ ಇದ್ದ ಪೊಲೀಸರು ಮತ್ತು ಇತರ ಅಧಿಕಾರಿಗಳ ಬಟ್ಟೆಗಳಿಗೆ ಕಪ್ಪು ಕಲೆ ಅಂಟಿರುವುದು ಕಂಡು ಬಂದಿದೆ. ನಾಲ್ಕು ಗಂಟೆಗೂ ಹೆಚ್ಚು ಕಾಲ ನಡೆದ ಪ್ರತಿಭಟನೆಯಿಂದ ಸಂಚಾರ ಸ್ಥಗಿತಗೊಂಡಿದ್ದು, ಚಂಡಮಾರುತದಿಂದ ಸಂತ್ರಸ್ತರಾದ ಜನರು ಸಚಿವರಿಗೆ ದೂರು ಸಲ್ಲಿಸಿದರು.
This is the current state of affairs in Tamil Nadu. The CM and the Deputy Chief Minister were busy taking photos in the streets of Chennai while the city received very little rain and did not bother to keep track of the happenings beyond Chennai. The DIPR behaves like the media… pic.twitter.com/DvZN3UT1f0
— K.Annamalai (@annamalai_k) December 3, 2024
ಮಣ್ಣು ಎರಚಿದ ಬಗ್ಗೆ ಸಚಿವರು ಹೇಳಿದ್ದೇನು?
ಘಟನೆಯ ಬಗ್ಗೆ ಮಾಧ್ಯಮಗಳನ್ನು ಉದ್ದೇಶಿಸಿ ಚೆನ್ನೈನಲ್ಲಿ ಶೇಖರ್ ಬಾಬು ಅವರು ಮಾತನಾಡಿದರು. ಇದು ರಾಜಕೀಯ ಪ್ರೇರಿತ ಕೃತ್ಯ. ರಾಜಕೀಯ ಪಕ್ಷದ ಸದಸ್ಯರು ಹಾಗೂ ಅವರ ಸಂಬಂಧಿಯೊಬ್ಬರು ಮಣ್ಣು ಎಸೆದಿದ್ದಾರೆ ಎಂದು ಬಾಬು ಹೇಳಿದರು.
ಬಿಜೆಪಿಯಿಂದ ವೀಡಿಯೋ ಶೇರ್
ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ ಅಣ್ಣಾಮಲೈ ಅವರು ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಚೆನ್ನೈನಲ್ಲಿ ಫೋಟೋ ತೆಗೆಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ರಾಜಧಾನಿ ನಗರದಲ್ಲಿ ಏನಾಗುತ್ತಿದೆ ಎಂಬುದನ್ನು ಹೊರತುಪಡಿಸಿ ಬೇರೆ ಏನನ್ನೂ ನೋಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸಂತ್ರಸ್ತರಿಗೆ ಪರಿಹಾರ ಧನ
ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ಮಾಡುವ ಸಚಿವರೊಂದಿಗೆ ಸ್ಟಾಲಿನ್ ಮಂಗಳವಾರ ಉನ್ನತ ಮಟ್ಟದ ಸಭೆ ಕರೆದಿದ್ದರು. ನಂತರ ಸಂತ್ರಸ್ತ ಕುಟುಂಬಗಳು ಅನುಭವಿಸಿದ ನಷ್ಟವನ್ನು ಪರಿಹರಿಸುವ ಉದ್ದೇಶದಿಂದ ಸ್ಟಾಲಿನ್ ಪರಿಹಾರ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಮತ್ತು ಹಾನಿಗೊಳಗಾದ ಮನೆಗಳಿಗೆ 10 ಸಾವಿರ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
Bengaluru Rain: ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಹಲವೆಡೆ ತುಂತುರು ಮಳೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
Tamilnadu Election 2026: ಮಹಿಳೆಯರಿಗೆ 2 ಸಾವಿರ: ತಮಿಳುನಾಡಿನ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ










Click it and Unblock the Notifications