HMPV: ತಮಿಳುನಾಡಿನಲ್ಲಿ ಎರಡು ಎಚ್ಎಂಪಿವಿ ಪ್ರಕರಣ ಪತ್ತೆ; ಭಾರತದಲ್ಲಿ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆ
ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಹ್ಯೂಮನ್ ಮೆಟಾ ನ್ಯೂಮೋವೈರಸ್ (HMPV) ಪ್ರಕರಣಗಳು ಪತ್ತೆಯಾದ ಬಳಿಕ ಇದೀಗ ತಮಿಳುನಾಡಿನಲ್ಲಿ ಎರಡು ಸೋಂಕಿತ ಪ್ರಕರಣಗಳು ವರದಿಯಾಗಿದೆ. ಈ ಮೂಲಕದ ಸೋಮವಾರ ದೇಶದಲ್ಲಿ ಒಟ್ಟಾರೆ ಐದು ಎಚ್ಎಂಪಿವಿ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಮೂರು ತಿಂಗಳ ಮಗು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿತ್ತು.ಬಳಿಕ ಅಹಮದಾಬಾದ್ನಲ್ಲಿ ಎರಡು ತಿಂಗಳ ಮಗುವಿಗೆ ಎಚ್ಎಂಪಿವಿ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈಗ ತಮಿಳುನಾಡಿನ ಚೆನ್ನೈ ಮತ್ತು ಸೇಲಂನಲ್ಲಿ ಒಂದೊಂದು ಪ್ರಕರಣ ವರದಿಯಾಗಿದೆ.
ಚೀನಾದ ವೈರಸ್ ಅಲ್ಲ!
ಚೆನ್ನೈನಲ್ಲಿ ಒಬ್ಬರಿಗೆ ಮತ್ತು ಸೇಲಂನಲ್ಲಿ ಒಬ್ಬರಿಗೆ ಎಚ್ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದು ಚೀನಾದಲ್ಲಿ ರೂಪಾಂತರಗೊಂಡಿರುವ ಎಚ್ಎಂಪಿವಿ ವೈರಸ್ ಅಲ್ಲ, ತಮಿಳುನಾಡಿಲ್ಲಿ ಹರಡುವ ಎಚ್ಎಂಪಿವಿ ವೈರಸ್ ಹಲವು ವರ್ಷಗಳಿಮದ ಇರುವ ವೈರಲ್ ಜ್ವರ ಎಂದು ಆರೋಗ್ಯ ಇಲಾಖೆ ಹೇಳಿದೆ.

ಎಚ್ಎಂಪಿವಿ ಪ್ರಕರಣಗಳು ದೇಶದಲ್ಲಿ ಪತ್ತೆಯಾದ ಬಳಿಕ ಸಹಜವಾಗಿಯೇ ಸಾರ್ವಜನಿಕರನ್ನು ಆತಂಕ ಶುರುವಾಗಿದೆ. ತಮಿಳುನಾಡಿನ ಇಬ್ಬರಲ್ಲಿ ವೈರಸ್ ಪತ್ತೆಯಾದ ಬಳಿಕ ತಮಿಳುನಾಡಿನ ಸಾರ್ವಜನಿಕ ಆರೋಗ್ಯ ಇಲಾಖೆಯು ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದೆ. ಇದು ತಮಿಳುನಾಡಿನಲ್ಲಿ ಹರಡುವ ಸಾಮಾನ್ಯ ಎಚ್ಎಂಪಿವಿ ವೈರಸ್ ಜ್ವರ ಎಂದು ತಿಳಿಸಿದೆ.
ಆತಂಕ ಬೇಡ ಎಂದ ವೈದ್ಯರು
ಎಚ್ಎಂಪಿವಿ ವೈರಸ್ ಈಗ ಹೊಸದಾಗಿ ಪತ್ತೆಯಾಗಿರುವುದಲ್ಲ, 2001ರಲ್ಲೇ ಈ ವೈರಸ್ ಅನ್ನು ಪತ್ತೆ ಹಚ್ಚಲಾಗಿದೆ. ಚಳಿಗಾಲದಲ್ಲಿ ಈ ವೈರಸ್ ಹರಡುವುದು ಚೀನಾದಲ್ಲಿ ಸಾಮಾನ್ಯ ಎನ್ನಲಾಗಿದೆ. ಕೋವಿಡ್ ಸೋಂಕಿನ ಲಕ್ಷಣಗಳನ್ನೇ ಹೊಂದಿದ್ದರು ಎಚ್ಎಂಪಿವಿ ಮಾರಕವಲ್ಲ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಇದು ಕೋವಿಡ್ ರೀತಿ ಸಾಂಕ್ರಾಮಿಕವಾಗುವ ಸಾಧ್ಯತೆ ಇಲ್ಲ ಎಂದು ಕೂಡ ತಿಳಿಸಿದ್ದಾರೆ.
ಗಂಟಲು ನೋವು, ಉಸಿರಾಟದ ತೊಂದರೆ, ಶೀತ, ಕೆಮ್ಮು, ಜ್ವರ ಈ ಸೋಂಕಿನ ಲಕ್ಷಣವಾಗಿದೆ. ಕೋವಿಡ್ ಕೂಡ ಇದೇ ಲಕ್ಷಣ ಹೊಂದಿದ್ದರಿಂದ ಜನ ಆತಂಕಗೊಂಡಿದ್ದಾರೆ. ಆದರೆ ಎಚ್ಎಂಪಿವಿ ಸದ್ಯ ಆ ಮಟ್ಟದಲ್ಲಿ ಹರಡುವ ಸಾಧ್ಯತೆ ಇಲ್ಲದ ಕಾರಣ, ಆರೋಗ್ಯ ತುರ್ತು ಪರಿಸ್ಥಿತಿ ಉಂಟಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಮತ್ತು ಸ್ಯಾನಿಟೈಸರ್ ಬಳಕೆ ಮಾಡುವಂತೆ ಮನವಿ ಮಾಡಲಾಗಿದೆ. ಈ ವೈರಸ್ ಮುಖ್ಯವಾಗಿ 5 ವರ್ಷದೊಳಗಿನ ಮಕ್ಕಳು ಮತ್ತು 65 ವರ್ಷ ಮೇಲ್ಪಟ್ಟವರಿಗೆ ಹೆಚ್ಚಿನ ತೊಂದರೆ ಕೊಡಲಿದ್ದು ಆರೋಗ್ಯದ ಬಗ್ಗೆ ಜಾಗೃತಿ ವಹಿಸಲು ಸೂಚನೆ ಕೊಟ್ಟಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications