''ನಾನು ಮಾತನಾಡಿರುವ ಆಡಿಯೋ ಕಟ್ಟುಕಥೆ..'' ಎಂದ ಪಿಟಿಆರ್
ಚೆನ್ನೈ ಏಪ್ರಿಲ್ 22: ನನ್ನ ಭಾಷಣದ ಆಡಿಯೋ ಎಂದು ಹೇಳಿಕೊಂಡು ಬಿಡುಗಡೆ ಮಾಡಿದ ವಿಡಿಯೋ ಕಟ್ ಅಂಡ್ ಪೇಸ್ಟ್ ಮಾಡಲಾಗಿದೆ ಎಂದು ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಟ್ವಿಟರ್ ನಲ್ಲಿ ವಿವರಣೆ ನೀಡಿದ್ದಾರೆ. ಜೊಎತೆಗ ಇದು ಡಿಎಂಕೆಗೆ ಕಳಂಕ ತರಲು ಮಾಡಿದ ಪ್ಲ್ಯಾನ್ ಎಂದು ಪಿಟಿಆರ್ ಹೇಳಿದ್ದಾರೆ.
ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಮಾತನಾಡಿದ್ದಾರೆ ಎಂಬ ಆಡಿಯೋವೊಂದು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೇ ಆಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಟ್ವಿಟರ್ ಪೇಜ್ ನಲ್ಲಿ ಬಿಡುಗಡೆ ಮಾಡಿದ್ದರು. ಅಲ್ಲದೆ ಇಂಗ್ಲಿಷ್ ಸಂಭಾಷಣೆಯ ತಮಿಳು ಅನುವಾದವನ್ನು ವೀಡಿಯೊದಲ್ಲಿ ಹಂಚಿಕೊಳ್ಳಲಾಗಿದೆ.

ಈ ಆಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ ಮತ್ತು ಟೀಕಿಸಿದ್ದಾರೆ. ಅದರಲ್ಲೂ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ಈ ವಿಚಾರವನ್ನು ಪ್ರಸ್ತಾಪಿಸಿ ತೀವ್ರ ಟೀಕೆ ಮಾಡಿದ್ದಾರೆ.
My statement on the 26-second malicious fabricated audio clip pic.twitter.com/KM85dogIgh
— Dr P Thiaga Rajan (PTR) (@ptrmadurai) April 22, 2023
ಈ ನಿಟ್ಟಿನಲ್ಲಿ ಡಿಎಂಕೆ ಸರಕಾರ ಯಾವುದೇ ವಿವರಣೆ ನೀಡದೆ ಮೌನವಹಿಸಿರುವುದು ತಮಗೆ ಮತ ಹಾಕಿದ ಜನತೆಗೆ ಮಾಡುತ್ತಿರುವ ಅನ್ಯಾಯ ಎಂಬುದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅರಿತುಕೊಳ್ಳಬೇಕು ಎಂದು ಅಣ್ಣಾಮಲೈ ಹೇಳಿದ್ದರು.

ಈಗ ಆಡಿಯೋ ಬಿಡುಗಡೆಯಾಗಿರುವ ಬಗ್ಗೆ ಪಳನಿವೇಲ್ ತ್ಯಾಗರಾಜನ್ ಟ್ವಿಟ್ಟರ್ ನಲ್ಲಿ ವಿವರಣೆ ನೀಡಿದ್ದಾರೆ. ಡಿಎಂಕೆಗೆ ಕಳಂಕ ತರಲು ನನ್ನ ಭಾಷಣವನ್ನು ಬೇಕಾದ ರೀತಿಯಲ್ಲಿ ಕಟ್ ಅಂಡ್ ಪೇಸ್ಟ್ ಮಾಡಲಾಗಿದೆ ಎಂದಿದ್ದಾರೆ.
Except for the DMK IT Wing Dimwits, no one would believe this line of defence.
— K.Annamalai (@annamalai_k) April 22, 2023
What is stopping the state FM from calling for an “independent forensic analysis” of the audio?
₹30,000 Crores in a year - Thiru @mkstalin has a lot to explain to the people. (2/2)
ಈ ಸಂಬಂಧ ಪಳನಿವೇಲ್ ತ್ಯಾಗರಾಜನ್ ಅವರು ಎರಡು ಪುಟಗಳ ವಿಸ್ತೃತ ವಿವರಣೆ ನೀಡಿದ್ದಾರೆ. ಅದರಲ್ಲಿ ನಾನು ಮಾತನಾಡಿದ್ದೇನೆ ಎಂದು ಹರಿದಾಡುತ್ತಿರುವ ಈ ಆಡಿಯೋಗಳು ದುರುದ್ದೇಶಪೂರ್ವಕವಾಗಿ ಕಲ್ಪಿತವಾಗಿದ್ದು, ತಂತ್ರಜ್ಞಾನದ ಸಹಾಯದಿಂದ ಯಾರು ಬೇಕಾದರೂ ಇಂತಹ ಆಡಿಯೋ ರಚಿಸಬಹುದು ಎಂದು ಹೇಳಿದ್ದಾರೆ.
ಆಡಿಯೋ ಕ್ಲಿಪ್ನ ಸ್ಕ್ರೀನ್ಶಾಟ್ ಅನ್ನು ಸಹ ಅವರು ಪೋಸ್ಟ್ ಮಾಡಿದ್ದಾರೆ. ಇಂತಹ ಆರೋಪಗಳಿಗೆ ಉತ್ತರವೇ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಯಾವುದೇ ನೈತಿಕ ತತ್ವಗಳಿಲ್ಲದ ನಿರ್ಲಜ್ಜ ರಾಜಕಾರಣಿಗಳಿಂದ ಈ ಆಡಿಯೋ ಪದೇ ಪದೇ ಹರಡುತ್ತಿದೆ ಎಂದು ಪಿಟಿಆರ್ ಗುಡುಗಿದ್ದಾರೆ.
ಈ ಆಡಿಯೋ ನಿಜವಲ್ಲ ಎಂಬುದು ಸಾರ್ವಜನಿಕವಾಗಿ ಬಿಡುಗಡೆಯಾಗಿ ಸ್ಪಷ್ಟವಾಗಿದೆ. ಸುಧಾರಿತ ತಂತ್ರಜ್ಞಾನವು ಸುಲಭವಾಗಿ ಲಭ್ಯವಿರುವ ದಿನಗಳಲ್ಲಿ ಇಂತಹ ನಕಲಿ ಆಡಿಯೊಗಳನ್ನು ರಚಿಸಲು ಸುಲಭವಾಗಿದೆ. ಅಂತಹ ಅನೇಕ ಆಡಿಯೊಗಳು ಮತ್ತು ವೀಡಿಯೊಗಳನ್ನು ದುರುದ್ದೇಶಪೂರಕವಾಗಿ ಬಿಡುಗಡೆ ಮಾಡಬಹುದು. ಇದರಲ್ಲಿ ಆಶ್ಚರ್ಯಪಡುವಂಥದ್ದೇನೂ ಇಲ್ಲ. ನಮ್ಮನ್ನು ವಿಭಜಿಸುವ ಇಂತಹ ದುರುದ್ದೇಶಪೂರಿತ ಪ್ರಯತ್ನಗಳು ಫಲಿಸುವುದಿಲ್ಲ ಎಂದು ಪಿಟಿಆರ್ ತಿರುಗೇಟು ಕೊಟ್ಟಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications