ತಮಿಳುನಾಡು: ದಲಿತ ಯುವಕನ ಮೇಲೆ ಮೂತ್ರ ವಿಜರ್ಸನೆ ಮಾಡಿ ಥಳಿಸಿದ ಮೇಲ್ಜಾತಿಯವರು, ಬಂಧನ
ಚೆನ್ನೈ, ನವೆಂಬರ್ 2: ಮಧ್ಯಪ್ರದೇಶದ ಮಾದರಿ ಘಟನೆ ಮತ್ತೆ ನಡೆದಿದೆ. ತಮಿಳುನಾಡಿನ ತಿರುನಲ್ವೇಲಿಯಲ್ಲಿ ಇಬ್ಬರು ದಲಿತ ಯುವಕರಿಗೆ ಬಟ್ಟೆ ಬಿಚ್ಚಿ ಹೊಡೆದು ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿ, ನಗದು ಮತ್ತು ಮೊಬೈಲ್ ಫೋನ್ಗಳನ್ನು ಕಸಿದುಕೊಳ್ಳುವ ಮೂಲಕ ಚಿತ್ರಹಿಂಸೆ ನೀಡಲಾಗಿದೆ.
ಈ ಸಂಬಂಧ ತಿರುನಲ್ವೇಲಿ ಜಿಲ್ಲೆಯ ಪ್ರಬಲ ಜಾತಿಯಾದ ಅತ್ಯಂತ ಹಿಂದುಳಿದ ಸಮುದಾಯದ (ಎಂಬಿಸಿ) ಆರು ಜನರನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 30 ರಂದು (ಸೋಮವಾರ) ರಾತ್ರಿ 7.45 ರಿಂದ ಮಧ್ಯರಾತ್ರಿ 1 ಗಂಟೆಯ ನಡುವೆ ಥಾಮಿರಬರಾಣಿ ನದಿಪಾತ್ರದಲ್ಲಿ ಮನೋಜ್ ಮತ್ತು ಮರಿಯಪ್ಪನ್ ಎಂಬ ಇಬ್ಬರು ಯುವಕರು ಸ್ನಾನ ಮಾಡಲು ಹೋದಾಗ ಈ ಘಟನೆ ಸಂಭವಿಸಿದೆ. ಮನೆಗೆ ಮರಳುತ್ತಿದ್ದಾಗ ಮದ್ಯ ಹಾಗೂ ಗಾಂಜಾ ಸೇವಿಸಿದ್ದ ತಂಡವೊಂದು ಯುವಕರಿಬ್ಬರ ಮೇಲೆ ಹೊಂಚು ಹಾಕಿ ದಾಳಿ ನಡೆಸಿದೆ.

ಇಬ್ಬರು ದಲಿತ ಸಮುದಾಯದ ಯುವಕರು ಎಂದು ತಿಳಿದ ಗ್ಯಾಂಗ್ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದೆ. ಆಯುಧಗಳಿಂದ ಹಲ್ಲೆ ನಡೆಸಿ ಇಬ್ಬರನ್ನು ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಪ್ರದೇಶದ ಪ್ರಬಲ ಜಾತಿಗೆ ಸೇರಿದ ಆರು ಸದಸ್ಯರ ಗುಂಪು ಮಧ್ಯರಾತ್ರಿಯವರೆಗೂ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದೆ. ದಲಿತ ಯುವಕರನ್ನು ಬೆದರಿಸಿ ಹಣ, ಸೆಲ್ ಫೋನ್ ಗಳು, ಐದು ಸಾವಿರ ರೂಪಾಯಿ ಹಾಗೂ ಎಟಿಎಂ ಕಾರ್ಡ್ ಗಳನ್ನು ಕಿತ್ತುಕೊಂಡಿತ್ತು.
ಇಬ್ಬರು ಯುವಕರು ಗ್ಯಾಂಗ್ನಿಂದ ಬೆತ್ತಲೆಯಾಗಿ ತಪ್ಪಿಸಿಕೊಂಡು ರಾತ್ರಿ 1.30 ರ ಸುಮಾರಿಗೆ ತಮ್ಮ ಮನೆಗೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಕ್ರೂರ ಕೃತ್ಯದ ಬಗ್ಗೆ ತಿಳಿದ ಸಂಬಂಧಿಕರು ಮತ್ತು ಸ್ನೇಹಿತರು ಬೆಚ್ಚಿಬಿದ್ದು, ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣ ಚಿಕಿತ್ಸೆಗಾಗಿ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು.
ದೂರಿನ ಆಧಾರದ ಮೇಲೆ ಜಿಲ್ಲೆಯ ತಚನಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗ್ಯಾಂಗ್ ಅನ್ನು ಕ್ರೌರ್ಯ, ಹಲ್ಲೆ ಮತ್ತು ಆಯುಧಗಳಿಂದ ಗಾಯಗೊಳಿಸುವುದು, ದರೋಡೆಯಲ್ಲಿ ತೊಡಗಿರುವುದು ಮತ್ತು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿದ್ದಾರೆ.
ತಮಿಳುನಾಡು ಮೂಲದ ದಲಿತ ಪರ ಪಕ್ಷ ವಿಸಿಕೆ ಪೊಲೀಸರು ಘಟನೆಯನ್ನು ಸರಳ ಘಟನೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಎಫ್ಐಆರ್ನಲ್ಲಿ ಸಂತ್ರಸ್ತರ ದೂರಿನಿಂದ ಹಲವಾರು ಅಂಶಗಳನ್ನು ಕೈಬಿಟ್ಟಿದ್ದಾರೆ ಎಂದು ಆರೋಪಿಸಿದೆ. ಆದಾಗ್ಯೂ, ತಿರುನಲ್ವೇಲಿಯ ಪೊಲೀಸ್ ಆಯುಕ್ತರು ಅವರ ಆರೋಪಗಳನ್ನು ಅಲ್ಲಗಳೆದಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications