ತಮಿಳುನಾಡು: ಮಗನ ಕಾಲೇಜು ಶುಲ್ಕ ಕಟ್ಟಲು, ಸರ್ಕಾರದಿಂದ ಪರಿಹಾರ ಪಡೆಯಲು ಪ್ರಾಣ ಬಿಟ್ಟ ತಾಯಿ
ಚೆನ್ನೈ, ಜುಲೈ. 18: ಮಕ್ಕಳಿಗಾಗಿ ತಾಯಿ ಯಾವ ತ್ಯಾಗಕ್ಕೂ ಸಿದ್ಧರಾಗಿರುತ್ತಾರೆ ಎಂಬ ಮಾತುಗಳನ್ನು ಕೇಳಿರುತ್ತೇವೆ. ಸಿನಿಮಾ, ಕಥೆ ಕಾದಂಬರಿಗಳಲ್ಲಿ ಓದಿರುತ್ತೇವೆ. ಆದರೆ, ತಮಿಳುನಾಡು ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ತನ್ನ ಮಗನ ಭವಿಷ್ಯವನ್ನು ಉಜ್ವಲಗೊಳಿಸುವ ಬಯಕೆಯಿಂದ ತಾಯಿಯೊಬ್ಬರು ತಮ್ಮ ಪ್ರಾಣವನ್ನೇ ಬಲಿ ನೀಡಿರುವ ದಾರುಣ ಘಟನೆ ನಡೆದಿದೆ.
ತಮಿಳುನಾಡಿನಲ್ಲಿ ನಡೆದ ಈ ದಾರುಣ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಪತಿ (45) ಎಂದು ಗುರುತಿಸಲಾಗಿರುವ ಮಹಿಳೆ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಆರ್ಥಿಕ ಅಡಚಣೆಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

45 ವರ್ಷದ ಪಾಪತಿ ಅವರು ಜೂನ್ 28 ರಂದು ವೇಗವಾಗಿ ಬಂದ ಬಸ್ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದರು. ಅಪಘಾತ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ನೀಡುತ್ತಾರೆ ಎಂದು ಯಾರೋ ತಪ್ಪು ಮಾಹಿತಿ ನೀಡಿದ ಕಾರಣ, ತನ್ನ ಮಗನ ಕಾಲೇಜು ಶುಲ್ಕ ಕಟ್ಟಲು ಹಣ ಮತ್ತು ಮಗನ ಭವಿಷ್ಯಕ್ಕೆ ಹಣ ಸಹಾಯವಾಗುತ್ತದೆ ಎಂದು ಇಂತಹ ಕೆಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ.
A Women allegedly killed herself by coming under a bus to arrange money for her son's education in Tamil Nadu.
— Ahmed Khabeer احمد خبیر (@AhmedKhabeer_) July 18, 2023
She was working as a 'safai karmachari' (cleaning staff) at the Collector's office in Salem district.
pic.twitter.com/nwLrd4TxS5
ಪೊಲೀಸ್ ಮೂಲಗಳ ಪ್ರಕಾರ, ಜೂನ್ 28 ರಂದು ಪಾಪತಿ ಬಸ್ಸಿಗೆ ಅಡ್ಡ ಬರಲು ಯತ್ನಿಸಿದ್ದರು, ಆದರೆ, ಆಕೆಗೆ ಬೈಕ್ ಡಿಕ್ಕಿ ಹೊಡೆದಿದೆ. ಇದಾಗಿ ಸ್ವಲ್ಪ ಸಮಯದ ನಂತರ, ಆಕೆ ರಸ್ತೆ ದಾಟಲು ಪ್ರಯತ್ನಿಸುವಂತೆ ಇನ್ನೊಂದು ಬಸ್ಸಿನ ಮುಂದೆ ಹೋಗಿ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ.
ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದರೆ ಆಕೆಯ ಕುಟುಂಬಕ್ಕೆ 45,000 ರೂ.ಗಳನ್ನು ನೀಡುವುದಾಗಿ ಹೇಳಿ ಯಾರೋ ಮೃತ ಮಹಿಳೆಗೆ ತಪ್ಪಿ ಮಾಹಿತಿ ನೀಡಿದ್ದರು. ತನ್ನ ಮಗನ ಕಾಲೇಜು ಶುಲ್ಕಕ್ಕಾಗಿ ಹಣವನ್ನು ಹೊಂದಿಸಲು ಹೆಣಗಾಡುತ್ತಿದ್ದ ಅವರಿಗೆ ಇದು ದಾರಿಯಾಗಿ ಕಾಣಿಸಿದೆ. ಪತಿಯಿಂದ ಬೇರ್ಪಟ್ಟ ನಂತರ ಕಳೆದ 15 ವರ್ಷಗಳಿಂದ ಪಾಪತಿ ತನ್ನ ಮಕ್ಕಳನ್ನು ಒಂಟಿಯಾಗಿ ಬೆಳೆಸಿದರು.

ಅಪಘಾತದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಸಂತಾಪ ವ್ಯಕ್ತಪಡಿಸಿದ್ದಾರೆ. ತನ್ನ ಮಗನ ಶಿಕ್ಷಣಕ್ಕಾಗಿ ಶುಲ್ಕ ಪಾವತಿಸಲು ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ತಾಯಿಯನ್ನು ಪ್ರೇರೇಪಿಸಿದ ಶಿಕ್ಷಣ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿದ್ದಾರೆ. ಇನ್ನು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇತರ ಕಾರಣಗಳೇನಾದರು ಇರಬಹುದೇ ಎಂದು ತನಿಖೆ ನಡೆಸುತ್ತಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications