ಸೊಸೆಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದಲ್ಲಿ 15 ತಿಂಗಳ ಮೊಮ್ಮಗಳನ್ನು ಕೊಂದ ಅಜ್ಜಿ
ಚೆನ್ನೈ, ಜುಲೈ. 22: ಅತ್ತೆ- ಸೊಸೆ ಸಂಬಂಧ ಚೆನ್ನಾಗಿರುವುದು ಕೆಲವು ಮನೆಗಳಲ್ಲಿ ಮಾತ್ರ. ಹಲವು ಸಮಯದ ಇಲ್ಲಿ ಜಗಳಗಳೇ ಹೆಚ್ಚಾಗಿರುತ್ತದೆ. ಮನೆಯ ಮೇಲಿನ ತಮ್ಮ ಹಿಡಿತ ತಪ್ಪಬಾರದು ಎಂದು ಬಡಿದಾಡುವ ಅತ್ತೆ.. ಹೊಸ ಮನೆಯ ಮೇಲೆ ಹಿಡಿತ ಸಾಧಿಸಲು ಪರದಾಡುವ ಸೊಸೆಯ ನಡುವೆ ಬರುವ ಜಗಳಗಳು ಸಾಮಾನ್ಯವಾಗಿರುತ್ತದೆ.
ಇದೆ ಸಮಯದಲ್ಲಿ ಈ ಮನಸ್ತಾಪ, ಜಗಳಗಳು ತಾರಕ್ಕಕೆ ಏರುವ ಸಾಧ್ಯತೆಯಿದೆ. ನೆರೆಯ ತಮಿಳುನಾಡಿನಲ್ಲಿ ಇಂತಹ ಜಗಳ ದುರಂತವಾಗಿದ್ದು, 15 ತಿಂಗಳ ಹಸುಳೆಯ ಜೀವವನ್ನು ಬಲಿ ಪಡೆದಿದೆ. ತಮಿಳುನಾಡಿನ ಅರಿಯಲೂರ್ ಜಿಲ್ಲೆಯಲ್ಲಿ 60 ವರ್ಷದ ವೃದ್ಧೆಯೊಬ್ಬಳು ತನ್ನ ಸೊಸೆಗೆ ಅಕ್ರಮ ಸಂಬಂಧವಿದೆ ಎಂದು ಭಾವಿಸಿ ಮೊಮ್ಮಗುವನ್ನು ಕೊಂದಿದ್ದಾಳೆ.

ಅಕ್ರಮ ಸಂಬಂಧದಿಂದ ತನ್ನ ಸೊಸೆಗೆ ಮಗು ಜನಿಸಿದೆ ಎಂಬ ಶಂಕೆಯಿಂದ ತನ್ನ 15 ತಿಂಗಳ ಎಳೆ ಮೊಮ್ಮಗಳನ್ನು 60 ವರ್ಷದ ವೃದ್ಧೆ ಕೊಂದಿದ್ದಾಳೆ. ಕೊಲೆ ಮಾಡಿದ ಆರೋಪಿ ವಿರುತಾಂಬಳನನ್ನು ಪೊಲೀಸರು ಬಂಧಿಸಿದ್ದು, ಆಕೆ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಆರೋಪಿ ವೃದ್ಧೆಯ ಮಗ ರಾಜಾ ತನ್ನ 21 ವರ್ಷದ ಪತ್ನಿ ಸಂಧ್ಯಾ ಎರಡನೇ ಮಗುವಿಗೆ ಗರ್ಭಿಣಿಯಾಗಿದ್ದಾಗ ಕೆಲಸದ ನಿಮಿತ್ತ ವಿದೇಶಕ್ಕೆ ತೆರಳಿದ್ದ. ಈ ವೇಳೆ ಸಂಧ್ಯಾ ಕೃತಿಕಾ ಎಂಬ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆದರೆ, ಸಂಧ್ಯಾ ಹೇಳುವ ಪ್ರಕಾರ, ರಾಜಾ ವಿದೇಶದಲ್ಲಿರುವುದರಿಂದ ಮಗು ಅಕ್ರಮ ಸಂಬಂಧದಿಂದ ಹುಟ್ಟಿದೆ ಎಂದು ಆಕೆಯ ಅತ್ತೆ ಆರೋಪಿಸುತ್ತಿದ್ದರು ಎನ್ನಲಾಗಿದೆ.
ಶುಕ್ರವಾರ ಸಂಧ್ಯಾ ತನ್ನ ಇಬ್ಬರು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಸಮೀಪದ ಅಂಗಡಿಗೆ ಹಾಲು ಖರೀದಿಸಲು ಹೋಗಿದ್ದರು. ಅಂಗಡಿಯಿಂದ ಮರಳಿ ಬಂದಾಗ ಸಂಧ್ಯಾ ತನ್ನ ಮಗಳು ಕೃತಿಕಾ ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡು ಬಂತು. ನಂತರ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವಳು ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಸಂಧ್ಯಾಳ ದೂರಿನ ಆಧಾರದ ಮೇಲೆ ತಮಿಳುನಾಡು ಪೊಲೀಸರು ಆಕೆಯ ಅತ್ತೆ ವಿರುತಾಂಬಳನ್ನು ಬಂಧಿಸಿದ್ದಾರೆ. ಹಲವಾರು ಗಂಟೆಗಳ ವಿಚಾರಣೆಯ ನಂತರ, ವಿರುತಾಂಬ ಬಾಲಕಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಮಗು ಆಟವಾಡುತ್ತಿದ್ದಾಗ ತನ್ನ ಸಹೋದರನ ಮೇಲೆ ಮರಳನ್ನು ಎಸೆದಿದ್ದಾರೆ.
ಇದನ್ನು ನೋಡಿದ ವಿರುತಾಂಬ ಕೋಪದ ಭರದಲ್ಲಿ 15 ತಿಂಗಳ ಮಗುವಿಗೆ ಬಲವಂತವಾಗಿ ಮರಳನ್ನು ತಿನ್ನಿಸಿದ್ದಾರೆ. ಇದರ ಪರಿಣಾಮ ಹಸುಳೆ ಮೃತಪಟ್ಟಿದೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ವಿಚಾರಣೆಯ ನಂತರ ಆಕೆಯನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಸದ್ಯ ಆರೋಪಿ, ನ್ಯಾಯಾಂಗ ಬಂಧನದಲ್ಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications