ಸಿನಿಮಿಯಾ ಶೈಲಿಯಲ್ಲಿ ಬ್ಯಾಂಕ್ ದರೋಡೆಗೆ ಯತ್ನ, ಬಂಧನ
ಅಜಿತ್ ಕುಮಾರ್ ಅಭಿನಯದ ತುನಿವು ಚಿತ್ರದ ಮಾದರಿಯಲ್ಲಿ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಪೂಚಿನಾಯಿಕನಪೆಟ್ಟಿಯ ಖಲೀಲ್ ರಹಮಾನ್ ಎಂಬ 25 ವರ್ಷದ ಯುವಕನನ್ನು ಮಂಗಳವಾರ ಬ್ಯಾಂಕ್ ದರೋಡೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಚೆನ್ನೈ, ಜನವರಿ 24: ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಪೂಚಿನಾಯಿಕನಪೆಟ್ಟಿಯ ಖಲೀಲ್ ರಹಮಾನ್ ಎಂಬ 25 ವರ್ಷದ ಯುವಕನನ್ನು ಮಂಗಳವಾರ ಬ್ಯಾಂಕ್ ದರೋಡೆ ಮಾಡಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಇತ್ತೀಚಿಗೆ ತಮಿಳುನಾಡಿನ ಖ್ಯಾತ ನಟರಾದ ಅಜಿತ್ ಕುಮಾರ್ ಅಭಿನಯದ ತುನಿವು ಚಿತ್ರದಲ್ಲಿ ಬ್ಯಾಂಕ್ ದರೋಡೆ ಮಾಡುವ ದೃಶ್ಯದಿಂದ ಪ್ರೇರಣೆಗೊಂಡಿದ್ದ ಯುವಕ ದಿಂಡಿಗಲ್ ಜಿಲ್ಲೆಯ ತಾಡಿಕೊಂಬು ಶಾಖೆಯ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅನ್ನು ದರೋಡೆ ಮಾಡಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.
ಅಜಿತ್ ಕುಮಾರ್ ಚಿತ್ರದ ತುನಿವು ಚಿತ್ರ ನೋಡಿ ಆತ ಸ್ಥಳಿಯ ಬ್ಯಾಂಕ್ಗೆ ನುಗ್ಗಿ ಬ್ಯಾಂಕ್ ನೌಕರರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದನು. ಬ್ಯಾಂಕ್ ದರೋಡೆಗಾಗಿ ಮೆಣಸಿನ ಪುಡಿ, ಪೆಪ್ಪರ್ ಸ್ಪ್ರೇ ಮತ್ತು ಚಾಕುವನ್ನು ಬಳಸಿದ್ದನು. ಪ್ಲಾಸ್ಟಿಕ್ ಟ್ಯಾಗ್ ಬಳಸಿ ಮೂವರು ಬ್ಯಾಂಕ್ ಉದ್ಯೋಗಿಗಳನ್ನು ಕಟ್ಟಿ ಹಾಕಿದ್ದನು ಎನ್ನಲಾಗಿದೆ. ಆದಾಗ್ಯೂ, ಒಬ್ಬ ಉದ್ಯೋಗಿ ತನ್ನನ್ನು ತಾನೇ ಬಿಡಿಸಿಕೊಂಡು ಸ್ಥಳೀಯ ಜನರಿಗೆ ಮಾಹಿತಿ ನೀಡಿದ್ದರು.

ಬಳಿಕ ಅಕ್ಕಪಕ್ಕದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಖಲೀಲ್ನನ್ನು ತಡೆದು ನಂತರ ಪೊಲೀಸರಿಗೆ ಒಪ್ಪಿಸಿದರು ಎಂದು ಡಿಎಚ್ ವರದಿ ಮಾಡಿದೆ. ಸ್ಥಳೀಯ ಪೊಲೀಸರ ತಿಳಿಸಿರುವಂತೆ ಯುವಕನು ಜೀವನದಲ್ಲಿ ಖಿನ್ನತೆಗೆ ಒಳಗಾಗಿದ್ದನು. ಆತ ಇತ್ತೀಚೆಗೆ ತನ್ನ ನೆಚ್ಚಿನ ನಟನಾದ ಅಜಿತ್ ಕುಮಾರ್ ಅಭಿನಯದ ಬ್ಯಾಂಕ್ ದರೋಡೆಯನ್ನು ಚಿತ್ರಿಸುವ ಥುನಿವು ಚಲನಚಿತ್ರದಿಂದ ಸ್ಫೂರ್ತಿ ಪಡೆದು ಬ್ಯಾಂಕ್ ದರೋಡೆ ಮಾಡಲು ಪ್ರಯತ್ನಿಸಿದನು ಎಂದು ಮಾಹಿತಿ ನೀಡಿದ್ದಾನೆ.
ದಿಂಡುಗಲ್ ಪಶ್ಚಿಮ ಪೊಲೀಸರು ಖಲೀಲ್ ರೆಹಮಾನ್ ಮತ್ತು ಅವರ ಪೂರ್ವಾಪರ ಮತ್ತು ಅವರು ಈ ಹಿಂದೆ ಅಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್ ದರೋಡೆಯಲ್ಲಿ ಇತರ ವ್ಯಕ್ತಿಗಳು ಭಾಗಿಯಾಗಿರುವ ಸಂಚಿನ ದೃಷ್ಟಿಕೋನದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆತ ಬ್ಯಾಂಕ್ ಲೂಟಿ ಮಾಡಲು ಪ್ರಯತ್ನಿಸಿದಾಗ, ಕಟ್ಟಿಹಾಕಿದ್ದ ಉದ್ಯೋಗಿಯೊಬ್ಬರು ಸಹಾಯಕ್ಕಾಗಿ ಅಳುತ್ತಾ ಹೊರಗೆ ಓಡಿಹೋಗಿದ್ದರು. ಇದರಿಂದ ಬೆಚ್ಚಿಬಿದ್ದ ಸಾರ್ವಜನಿಕರು ಬ್ಯಾಂಕ್ಗೆ ನುಗ್ಗಿ ಪುಚ್ಚಿನಾಯಕನಪಟ್ಟಿಯ ಕಲೀಲ್ ರೆಹಮಾನ್ ಎಂಬಾತನನ್ನು ಹಿಡಿದಿದ್ದರು. ಕಲೀಲ್ ಇತ್ತೀಚೆಗೆ ತೆರೆಕಂಡ ಅಜಿತ್ ಕುಮಾರ್ ಚಿತ್ರ ತುನಿವು ಸೇರಿದಂತೆ ಹಲವಾರು ಚಲನಚಿತ್ರಗಳನ್ನು ವೀಕ್ಷಿಸಿದ್ದರು. ಜೀವನದಲ್ಲಿ ಬೇಸರಗೊಂಡಿದ್ದರಿಂದ ಆತ ಬ್ಯಾಂಕ್ ದರೋಡೆಗೆ ಪ್ರಯತ್ನಿಸಲು ಪ್ರೇರೇಪಣೆಯನ್ನು ಅದರಿಂದ ಪಡೆದಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications