ಬಂಧನ ಭೀತಿಯಲ್ಲಿ ಸೈಫ್ ಅಲಿಖಾನ್ -ತಾಂಡವ್ ಚಿತ್ರ ತಂಡ
ನವದೆಹಲಿ, ಜನವರಿ 27: ಸೈಫ್ ಅಲಿ ಖಾನ್ ಅಭಿನಯದ ತಾಂಡವ್ ವೆಬ್ ಸೀರಿಸ್ ತಂಡಕ್ಕೆ ಕಾನೂನು ಸಮರದಲ್ಲಿ ಹಿನ್ನಡೆಯಾಗಿದೆ. ಬಂಧನದಿಂದ ರಕ್ಷಣೆ ಕೋರಿ ತಾಂಡವ್ ತಂಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರದಂದು ತಿರಸ್ಕರಿಸಿದೆ.
ಹಿಂದು ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಮೇಲೆ 'ತಾಂಡವ್' ವೆಬ್ ಸರಣಿ ಮೇಲೆ ಈಗಾಗಲೇ ದೇಶದ ವಿವಿಧೆಡೆ ದೂರು ದಾಖಲಾಗಿದ್ದು, ವಿವಿಧ ಕೋರ್ಟ್ ಗಳಲ್ಲಿ ಪ್ರಕರಣವು ವಿಚಾರಣೆ ಹಂತದಲ್ಲಿದೆ.
ನ್ಯಾ. ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಹಾಗೂ ಎಂಆರ್ ಶಾ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿ ಈ ಪ್ರಕರಣದಲ್ಲಿ ಹೈಕೋರ್ಟಿನಲ್ಲಿ ಮೊದಲಿಗೆ ಎಫ್ಐಆರ್ ರದ್ದುಕೋರಿ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಉತ್ತರಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ತಾಂಡವ್ ವಿರುದ್ಧ ಪ್ರಕರಣ ದಾಖಲಾಗಿದೆ.

ಅಮೆಜಾನ್ ಪ್ರೈ ವಿಡಿಯೋದ ಅಪರ್ಣಾ ಪುರೋಹಿತ್, ತಾಂಡವ್ ನಿರ್ದೇಶಕ ಅಲಿ ಅಬ್ಬಾಸ್ ಜಾಫರ್, ನಿರ್ಮಾಪಕ ಫರಾನ್ ಅಖ್ತರ್, ನಟ ಜೀಶಾನ್ ಅಯುಬ್, ಸೈಫ್ ಅಲಿ ಖಾನ್ ವಿರುದ್ಧ ದೂರು ದಾಖಲಿಸಲಾಗಿದೆ. ಹಿಂದು ದೇವರುಗಳ ವಿರುದ್ಧ ಅವಹೇಳನಕಾರಿ ಸಂಭಾಷಣೆಗಳಿವೆ. ಶಿವನನ್ನು ಕೆಟ್ಟ ಪದಗಳಿಂದ ನಿಂದಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸನ್ನಿವೇಶ, ದೃಶ್ಯ ತೆಗೆದು ಹಾಕಬೇಕು ಹಾಗೂ ಕ್ಷಮೆಯಾಚಿಸಬೇಕು ಎಂದು ದೂರು ದಾಖಲಿಸಲಾಗಿತ್ತು. ಕ್ಷಮೆಯಾಚಿಸಿದ ಚಿತ್ರ ತಂಡ ಎರಡು ದೃಶ್ಯಗಳಿಗೆ ಕತ್ತರಿ ಹಾಕಿದೆ. ಶಿವ ಪಾತ್ರಧಾರಿಯಾಗಿ ಜೀಶಾನ್ ಕಾಣಿಸಿಕೊಂಡಿದ್ದು ಹಾಗೂ ದಲಿತ ಮುಖಂಡರಿಗೆ ಅವಮಾನ ದೃಶ್ಯ ಡಿಲೀಟ್ ಮಾಡಲಾಗಿದೆ.
ಯಾವ ಸೆಕ್ಷನ್ ಅಡಿ ದೂರು ಹಿಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಂಬ ಆರೋಪದ ಮೇಲೆ ದೂರು ನೀಡಲಾಗಿದ್ದು, ಕೆಆರ್ ಪುರ ಪೊಲೀಸರು ಐಪಿಸಿ ಸೆಕ್ಷನ್ 295 ಎ, 153ಎ, 501, 501 (1)(B) ಹಾಗೂ 298 ಅಡಿ ಮತ್ತು ಮಾಹಿತಿ ಹಕ್ಕು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿತರ ವಿರುದ್ಧ ಎಫ್ಐಆರ್ ಹಾಕಲಾಗಿದೆ. ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪವನ್ನು ಪರಿಗಣಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications