10 ಲಕ್ಷ ರು ವಾರ್ಷಿಕ ಆದಾಯವಿದ್ದರೆ, ಎಲ್ ಪಿಜಿ ಸಬ್ಸಿಡಿ ಖೋತಾ
ನವದೆಹಲಿ, ಡಿ. 28: ವಾರ್ಷಿಕ 10 ಲಕ್ಷ ರು.ಗಿಂತ ಹೆಚ್ಚು ಆದಾಯ ಹೊಂದಿರುವವರಿಗೆ ತೆರಿಗೆದಾರರಿಗೆ ಸಬ್ಸಿಡಿ ಸಿಲಿಂಡರ್ಗಳನ್ನು ನೀಡದಿರಲು ಸರ್ಕಾರ ನಿರ್ಧರಿಸಿದೆ. ಈ ಹೊಸ ವ್ಯವಸ್ಥೆ ಜನವರಿ 1, 2016ರಿಂದ ಜಾರಿಗೆ ಬರುವುದು ಬಹುತೇಕ ಖಚಿತವಾಗಿದೆ.
ಹೊಸ ಯೋಜನೆಯಂತೆ ಆದಾಯ ತೆರಿಗೆ ಕಾಯ್ದೆ 1961ರ ಅನ್ವಯ ವಾರ್ಷಿಕ 10 ಲಕ್ಷ ರುಗೂ ಅಧಿಕ ಆದಾಯ ಹೊಂದಿರುವ ವ್ಯಕ್ತಿಗಳು ಎಲ್ ಪಿಜಿ ಸಬ್ಸಿಡಿ ಪಡೆಯುವಂತಿಲ್ಲ. ಸದ್ಯಕ್ಕೆ ಇದನ್ನು ಕಡ್ಡಾಯಗೊಳಿಸಿಲ್ಲ. ಗ್ರಾಹಕರು ಸ್ವಯಂಪ್ರೇರಿತರಾಗಿ ಸಬ್ಸಿಡಿ ಹಿಂತಿರುಗಿಸಲು ಅವಕಾಶ ನೀಡಲಾಗಿದೆ.[ಸ್ಥಿತಿವಂತರಿಗೆ ಎಲ್ ಪಿಜಿ ಸಬ್ಸಿಡಿ ಸ್ಥಗಿತ: ವೆಂಕಯ್ಯ ನಾಯ್ಡು]
ಏಪ್ರಿಲ್ 1, 2014ರಿಂದ ವಾರ್ಷಿಕ ಸಿಲಿಂಡರ್ ಬಳಕೆ ಮಿತಿಯನ್ನು 6 ರಿಂದ 12ಕ್ಕೇರಿಸಲಾಯಿತು. ಇದಕ್ಕೆ ದೊರೆಯುವ ಸಬ್ಸಿಡಿ ಮೊತ್ತವನ್ನು ನೇರವಾಗಿ ಬ್ಯಾಂಕಿಗೆ ತಲುಪುವ ವ್ಯವಸ್ಥೆ ಮಾಡಲಾಯಿತು. 2014-15ರಲ್ಲಿ ಸುಮಾರು 40,551 ಕೋಟಿ ರು ದಾಖಲೆಯ ಮೊತ್ತದ ವಹಿವಾಟು ನಡೆದಿದೆ.

ಸದ್ಯದ ವ್ಯವಸ್ಥೆಯಂತೆ ಗೃಹೋಪಯೋಗಿ ಅಡುಗೆ ಅನಿಲ ಸಿಲಿಂಡರ್ ಗಳು (14.2 ಕೆಜಿ ತೂಗುವ) ವರ್ಷಕ್ಕೆ 12ರಂತೆ ಪಡೆಯಬಹುದು. ಇದರ ಬೆಲೆ 419.26ರು ಇದೆ. ಸಬ್ಸಿಡಿ ರಹಿತ ಮಾರುಕಟ್ಟೆ ದರ 608 ರು ಮೀರುತ್ತದೆ.
ಈಗಾಗಲೇ ದೇಶಾದ್ಯಂತವಿರುವ 15 ಕೋಟಿಗೂ ಅಧಿಕ ಗ್ರಾಹಕರ ಪೈಕಿ 57.5 ಲಕ್ಷ ಜನರು ಸಬ್ಸಿಡಿ ವಾಪಸ್ ಮಾಡಿದ್ದಾರೆ. ಬಡವರಿಗಾಗಿಯೇ ಸಬ್ಸಿಡಿ ಸಿಲಿಂಡರ್ ನೀಡುತ್ತಿರುವುದು, ಹೀಗಿರುವಾಗ 10 ಲಕ್ಷ ರೂ.ಗಿಂತ ಹೆಚ್ಚು ಆದಾಯ ಇರುವವರಿಗೆ ಸಬ್ಸಿಡಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಎಂ ವೆಂಕಯ್ಯ ನಾಯ್ಡು ಕಳೆದ ತಿಂಗಳು ಈ ವ್ಯವಸ್ಥೆ ಬಗ್ಗೆ ಸುಳಿವು ನೀಡಿದ್ದರು.
ದೇಶದೆಲ್ಲೆಡೆ ಅಕ್ರಮವಾಗಿ ಅಡುಗೆ ಅನಿಲ ಸಂಪರ್ಕ ಪಡೆದುಕೊಂಡಿರುವುದನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಿರುವುದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ಉಳಿತಾಯವಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ. (ಪಿಟಿಐ)
-
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ











Click it and Unblock the Notifications