ಆಂಧ್ರ ಪ್ರದೇಶ ಚುನಾವಣೆ: ವೈಎಸ್ಆರ್ಸಿಪಿ ಪರ ಮತ ಹಾಕಿದ್ದಕ್ಕೆ ತಾಯಿಯನ್ನೇ ಕೊಂದ ಟಿಡಿಪಿ ಬೆಂಬಲಿಗ
ರಾಜಕೀಯ ಎನ್ನುವುದು ತೀರಾ ವೈಯಕ್ತಿಕ ಆಗಬಾರದು, ರಾಜಕೀಯ ನಾಯಕರು ಹೊರಗಡೆ ಕಿತ್ತಾಡಿದರೂ, ಇಬ್ಬರೂ ಕೂಡ ಸ್ನೇಹಿತರೇ ಆಗಿರುತ್ತಾರೆ. ಅದಕ್ಕೆ ರಾಜಕೀಯದಲ್ಲಿ ಯಾರೂ ಶತ್ರುಗಳೂ ಅಲ್ಲ ಮಿತ್ರರೂ ಅಲ್ಲ ಎನ್ನುವ ಗಾದೆ ಮಾತಿದೆ. ಆದರೆ ಕಾರ್ಯಕರ್ತರು ಮಾತ್ರ ಬದ್ಧ ವೈರಿಗಳಂತೆ ಆಡುವುದನ್ನು ನೋಡಬಹುದು.
ಆಂಧ್ರ ಪ್ರದೇಶದಲ್ಲಿ ಎದುರಾಳಿ ಪಕ್ಷಕ್ಕೆ ಮತ ಹಾಕಿದ ತಾಯಿಯನ್ನೇ ಮಗ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಅನಂತಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಬೆಂಬಲಿಗ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ತಾಯಿಯನ್ನು ಕೊಲೆ ಮಾಡಿದ್ದಾನೆ.

ಬುಧವಾರ ಆಂಧ್ರ ಪ್ರದೇಶ ವಿಧಾನಸಭೆಗೆ ಮತದಾನ ಮುಕ್ತಾಯವಾಗಿದೆ. ಮತ ಹಾಕಿದ ತಪ್ಪಿಗೆ ತಾಯಿ ಕೊಲೆಯಾಗಿದ್ದಾರೆ. ಆರೋಪಿಯನ್ನು ಕಂಬದೂರು ಮಂಡಲದ ಏಗುವಪಲ್ಲೆ ಗ್ರಾಮದ ವಡ್ಡೆ ವೆಂಕಟೇಶ್ವರಲು (35) ಎಂದು ಗುರುತಿಸಲಾಗಿದ್ದು, ಟಿಡಿಪಿ ಬೆಂಬಲಿಗ ಎಂದು ಪೊಲೀಸರು ಹೇಳಿದ್ದಾರೆ.
ಮೇ 13ರಂದು ನಡೆದಿದ್ದ ಮತದಾನ
ಮೇ 13 ರಂದು ತನ್ನ ತಾಯಿ ಸುಂಕಮ್ಮ (65) ಅವರು ವೈಎಸ್ಆರ್ಸಿಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ತಿಳಿದ ನಂತರ ಮಗ ಕೋಪಗೊಂಡಿದ್ದ ಎಂದು ವರದಿಯಾಗಿದೆ.
ಈ ವಿಚಾರವಾಗಿ ಅವರು ತಮ್ಮ ತಾಯಿಯೊಂದಿಗೆ ಜಗಳವಾಡುತ್ತಿದ್ದರು. ವೆಂಕಟೇಶ್ವರಲು ಸುಂಕಮ್ಮ ಅವರ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆತ ಗ್ರಾಮದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಲಾಟೆ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಸುಂಕಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೆಂಕಟೇಶ್ವರಲು ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications