ಆಂಧ್ರ ಪ್ರದೇಶ ಚುನಾವಣೆ: ವೈಎಸ್ಆರ್ಸಿಪಿ ಪರ ಮತ ಹಾಕಿದ್ದಕ್ಕೆ ತಾಯಿಯನ್ನೇ ಕೊಂದ ಟಿಡಿಪಿ ಬೆಂಬಲಿಗ
ರಾಜಕೀಯ ಎನ್ನುವುದು ತೀರಾ ವೈಯಕ್ತಿಕ ಆಗಬಾರದು, ರಾಜಕೀಯ ನಾಯಕರು ಹೊರಗಡೆ ಕಿತ್ತಾಡಿದರೂ, ಇಬ್ಬರೂ ಕೂಡ ಸ್ನೇಹಿತರೇ ಆಗಿರುತ್ತಾರೆ. ಅದಕ್ಕೆ ರಾಜಕೀಯದಲ್ಲಿ ಯಾರೂ ಶತ್ರುಗಳೂ ಅಲ್ಲ ಮಿತ್ರರೂ ಅಲ್ಲ ಎನ್ನುವ ಗಾದೆ ಮಾತಿದೆ. ಆದರೆ ಕಾರ್ಯಕರ್ತರು ಮಾತ್ರ ಬದ್ಧ ವೈರಿಗಳಂತೆ ಆಡುವುದನ್ನು ನೋಡಬಹುದು.
ಆಂಧ್ರ ಪ್ರದೇಶದಲ್ಲಿ ಎದುರಾಳಿ ಪಕ್ಷಕ್ಕೆ ಮತ ಹಾಕಿದ ತಾಯಿಯನ್ನೇ ಮಗ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಅನಂತಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಬೆಂಬಲಿಗ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ತಾಯಿಯನ್ನು ಕೊಲೆ ಮಾಡಿದ್ದಾನೆ.

ಬುಧವಾರ ಆಂಧ್ರ ಪ್ರದೇಶ ವಿಧಾನಸಭೆಗೆ ಮತದಾನ ಮುಕ್ತಾಯವಾಗಿದೆ. ಮತ ಹಾಕಿದ ತಪ್ಪಿಗೆ ತಾಯಿ ಕೊಲೆಯಾಗಿದ್ದಾರೆ. ಆರೋಪಿಯನ್ನು ಕಂಬದೂರು ಮಂಡಲದ ಏಗುವಪಲ್ಲೆ ಗ್ರಾಮದ ವಡ್ಡೆ ವೆಂಕಟೇಶ್ವರಲು (35) ಎಂದು ಗುರುತಿಸಲಾಗಿದ್ದು, ಟಿಡಿಪಿ ಬೆಂಬಲಿಗ ಎಂದು ಪೊಲೀಸರು ಹೇಳಿದ್ದಾರೆ.
ಮೇ 13ರಂದು ನಡೆದಿದ್ದ ಮತದಾನ
ಮೇ 13 ರಂದು ತನ್ನ ತಾಯಿ ಸುಂಕಮ್ಮ (65) ಅವರು ವೈಎಸ್ಆರ್ಸಿಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ತಿಳಿದ ನಂತರ ಮಗ ಕೋಪಗೊಂಡಿದ್ದ ಎಂದು ವರದಿಯಾಗಿದೆ.
ಈ ವಿಚಾರವಾಗಿ ಅವರು ತಮ್ಮ ತಾಯಿಯೊಂದಿಗೆ ಜಗಳವಾಡುತ್ತಿದ್ದರು. ವೆಂಕಟೇಶ್ವರಲು ಸುಂಕಮ್ಮ ಅವರ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆತ ಗ್ರಾಮದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಲಾಟೆ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಸುಂಕಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೆಂಕಟೇಶ್ವರಲು ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications