ಆಂಧ್ರ ಪ್ರದೇಶ ಚುನಾವಣೆ: ವೈಎಸ್ಆರ್ಸಿಪಿ ಪರ ಮತ ಹಾಕಿದ್ದಕ್ಕೆ ತಾಯಿಯನ್ನೇ ಕೊಂದ ಟಿಡಿಪಿ ಬೆಂಬಲಿಗ
ರಾಜಕೀಯ ಎನ್ನುವುದು ತೀರಾ ವೈಯಕ್ತಿಕ ಆಗಬಾರದು, ರಾಜಕೀಯ ನಾಯಕರು ಹೊರಗಡೆ ಕಿತ್ತಾಡಿದರೂ, ಇಬ್ಬರೂ ಕೂಡ ಸ್ನೇಹಿತರೇ ಆಗಿರುತ್ತಾರೆ. ಅದಕ್ಕೆ ರಾಜಕೀಯದಲ್ಲಿ ಯಾರೂ ಶತ್ರುಗಳೂ ಅಲ್ಲ ಮಿತ್ರರೂ ಅಲ್ಲ ಎನ್ನುವ ಗಾದೆ ಮಾತಿದೆ. ಆದರೆ ಕಾರ್ಯಕರ್ತರು ಮಾತ್ರ ಬದ್ಧ ವೈರಿಗಳಂತೆ ಆಡುವುದನ್ನು ನೋಡಬಹುದು.
ಆಂಧ್ರ ಪ್ರದೇಶದಲ್ಲಿ ಎದುರಾಳಿ ಪಕ್ಷಕ್ಕೆ ಮತ ಹಾಕಿದ ತಾಯಿಯನ್ನೇ ಮಗ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಅನಂತಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಬೆಂಬಲಿಗ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ತಾಯಿಯನ್ನು ಕೊಲೆ ಮಾಡಿದ್ದಾನೆ.

ಬುಧವಾರ ಆಂಧ್ರ ಪ್ರದೇಶ ವಿಧಾನಸಭೆಗೆ ಮತದಾನ ಮುಕ್ತಾಯವಾಗಿದೆ. ಮತ ಹಾಕಿದ ತಪ್ಪಿಗೆ ತಾಯಿ ಕೊಲೆಯಾಗಿದ್ದಾರೆ. ಆರೋಪಿಯನ್ನು ಕಂಬದೂರು ಮಂಡಲದ ಏಗುವಪಲ್ಲೆ ಗ್ರಾಮದ ವಡ್ಡೆ ವೆಂಕಟೇಶ್ವರಲು (35) ಎಂದು ಗುರುತಿಸಲಾಗಿದ್ದು, ಟಿಡಿಪಿ ಬೆಂಬಲಿಗ ಎಂದು ಪೊಲೀಸರು ಹೇಳಿದ್ದಾರೆ.
ಮೇ 13ರಂದು ನಡೆದಿದ್ದ ಮತದಾನ
ಮೇ 13 ರಂದು ತನ್ನ ತಾಯಿ ಸುಂಕಮ್ಮ (65) ಅವರು ವೈಎಸ್ಆರ್ಸಿಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ತಿಳಿದ ನಂತರ ಮಗ ಕೋಪಗೊಂಡಿದ್ದ ಎಂದು ವರದಿಯಾಗಿದೆ.
ಈ ವಿಚಾರವಾಗಿ ಅವರು ತಮ್ಮ ತಾಯಿಯೊಂದಿಗೆ ಜಗಳವಾಡುತ್ತಿದ್ದರು. ವೆಂಕಟೇಶ್ವರಲು ಸುಂಕಮ್ಮ ಅವರ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆತ ಗ್ರಾಮದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಲಾಟೆ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಸುಂಕಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೆಂಕಟೇಶ್ವರಲು ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ನೇಪಾಳ ಚುಣಾವಣೆ ಫಲಿತಾಂಶ ಅಂತಿಮ, ಬಲೇಂದ್ರ ಶಾ ಪಕ್ಷಕ್ಕೆ ಒಟ್ಟು 119 ಸ್ಥಾನ | Nepal Election 2026 -
ನೇಪಾಳ ಫಲಿತಾಂಶದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್, ನಂಬರ್ ಗೇಮ್ ಶುರು | Nepal Election 2026 -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ












Click it and Unblock the Notifications