ಜಗನ್ ರೆಡ್ಡಿಗೆ ಭಾರಿ ಆಘಾತ, ರಾಯಲ ಸೀಮೆಯಲ್ಲಿ ನಾಯ್ಡು ಸವಾರಿ!
ಆಂಧ್ರಪ್ರದೇಶದ ಎಂಎಲ್ಸಿ ಚುನಾವಣೆಯಲ್ಲಿ ಆಡಳಿತಾರೂಢ ತೆಲುಗು ದೇಶಂ ಪಕ್ಷ (ಟಿಡಿಪಿ) ಕ್ಲೀನ್ ಸ್ವೀಪ್ ಮಾಡಿದೆ. ಎಲ್ಲಾ 9 ಸ್ಥಾನಗಳನ್ನು ಬಾಚಿಕೊಂಡಿರುವ ಚಂದ್ರಬಾಬು ನಾಯ್ಡು ಅವರ ಪಕ್ಷ ಭರ್ಜರಿ ಪ್ರದರ್ಶನ ನೀಡಿದೆ
ಅನಂತಪುರಂ, ಮಾರ್ಚ್ 21: ಆಂಧ್ರಪ್ರದೇಶದ ಎಂಎಲ್ಸಿ ಚುನಾವಣೆಯಲ್ಲಿ ಆಡಳಿತಾರೂಢ ತೆಲುಗು ದೇಶಂ ಪಕ್ಷ (ಟಿಡಿಪಿ) ಕ್ಲೀನ್ ಸ್ವೀಪ್ ಮಾಡಿದೆ. ಎಲ್ಲಾ 9 ಸ್ಥಾನಗಳನ್ನು ಬಾಚಿಕೊಂಡಿರುವ ಚಂದ್ರಬಾಬು ನಾಯ್ಡು ಅವರ ಪಕ್ಷ ಭರ್ಜರಿ ಪ್ರದರ್ಶನ ನೀಡಿದೆ. ಗಾಯದ ಮೇಲೆ ಬರೆ ಎಳೆದಂತೆ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಪ್ರಬಲವಿರುವ ಕ್ಷೇತ್ರಗಳನ್ನು ನಾಯ್ಡು ಕಿತ್ತುಕೊಂಡಿದ್ದಾರೆ.
ಶ್ರೀಕಾಕುಳಂ, ಪೂರ್ವ ಗೋದಾವರಿ, ಅನಂತಪುರ ಹಾಗೂ ಪಶ್ಚಿಮ ಗೋದಾವರಿ ಗೆದ್ದ ಬಳಿಕ, ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಸಾರ್ ಕಾಂಗ್ರೆಸ್ ಅಧಿಪತ್ಯ ಹೊಂದಿರುವ ರಾಯಲ ಸೀಮೆಯ ಕಡಪ, ಕರ್ನೂಲ್, ನೆಲ್ಲೂರು ಜಿಲ್ಲೆಗಳ ಮೇಲೆ ಟಿಡಿಪಿ ತನ್ನ ಬಾವುಟ ಹಾರಿಸಿದೆ.

ಈ ಗೆಲುವಿನಿಂದ ಅಸೆಂಬ್ಲಿಯಲ್ಲಿ ಟಿಡಿಪಿ ತನ್ನ ಕೋಟಾವನ್ನು 15ಕ್ಕೇರಿಸಿಕೊಂಡಿದೆ. ಕಡಪದಲ್ಲಿ ವೈಎಸ್ಸಾರ್ ಕಾಂಗ್ರೆಸ್ಸಿನ ಅಭ್ಯರ್ಥಿ ವೈಎಸ್ ವಿವೇಕಾನಂದ ರೆಡ್ಡಿ ಸೋಲು, ಜಗನ್ ಗೆ ಭಾರಿ ಆಘಾತ ನೀಡಿದೆ.
ಅಖಂಡ ಆಂಧ್ರಪ್ರದೇಶದ ಸಿಎಂ ಆಗಿದ್ದ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರ ಸೋದರ ವೈಎಸ್ ವಿವೇಕಾನಂದ ರೆಡ್ಡಿ ಅವರು ಮಾಜಿ ಸಚಿವರಾಗಿದ್ದು, ಟಿಡಿಪಿಯ ಮರೆಡ್ಡಿ ರವೀಂದ್ರನಾಥ್ ರೆಡ್ಡಿ ವಿರುದ್ಧ 33 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ನೆಲ್ಲೂರಿನಲ್ಲಿ ಟಿಡಿಪಿಯ ವಕಟಿ ನಾರಾಯಣ ರೆಡ್ಡಿ ಅವರು ವೈಎಸ್ಸಾರ್ ಕಾಂಗ್ರೆಸ್ಸಿನ ಅನಂ ವಿಜಯ್ ಕುಮಾರ್ ರೆಡ್ಡಿ ಅವರ ವಿರುದ್ಧ 85 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕರ್ನೂಲ್ ನಲ್ಲಿ ಜಗನ್ ಅವರ ಅಭ್ಯರ್ಥಿ ಗೌರು ವೆಂಕಟ ರೆಡ್ಡಿ ವರು ಟಿಡಿಪಿಯ ಶಿಲ್ಪ ಚಕ್ರಪಾಣಿ ವಿರುದ್ಧ 43 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications