NDA Government: ಟಿಡಿಪಿಗೆ 4, ಜೆಡಿಯುಗೆ 3 ಸಚಿವ ಸ್ಥಾನ ಫಿಕ್ಸ್!
ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ನಡೆಸಲು ಸಜ್ಜಾಗಿದ್ದಾರೆ. ಭಾನುವಾರ ಸಂಜೆ 7.15ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನರೇಂದ್ರ ಮೋದಿ 3.0 ಸರ್ಕಾರದಲ್ಲಿ ಸಚಿವರು ಯಾರಾಗುತ್ತಾರೆ ಎನ್ನುವ ಕುತೂಹಲ ಇದೆ. ಮಿತ್ರ ಪಕ್ಷಗಳು ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟಿವೆ. ಎನ್ಡಿಟಿವಿ ವರದಿ ಮಾಡಿರುವ ಪ್ರಕಾರ ಟಿಡಿಪಿ ನಾಲ್ಕು ಖಾತೆಗಳನ್ನು ಪಡೆಯಲಿದ್ದು, ಜೆಡಿಯು ಎರಡು ಸ್ಥಾನಗಳನ್ನು ಪಡೆಯುವುದು ಖಚಿತವಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಸಂಪುಟದಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ನಾಲ್ಕು ಖಾತೆಗಳನ್ನು ಪಡೆಯಲಿದ್ದು, ಜೆಡಿಯು ಎರಡು ಸ್ಥಾನಗಳನ್ನು ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಟಿಡಿಪಿ ಸಂಸದರಾದ ರಾಮ್ ಮೋಹನ್ ನಾಯ್ಡು, ಹರೀಶ್ ಬಾಲಯೋಗಿ ಮತ್ತು ದಗ್ಗುಮಲ್ಲ ಪ್ರಸಾದ್ ಪ್ರಧಾನಿ ಜೊತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ಇಬ್ಬರು ಹಿರಿಯ ನಾಯಕರಾದ ಲಾಲನ್ ಸಿಂಗ್ ಮತ್ತು ರಾಮ್ ನಾಥ್ ಠಾಕೂರ್ ಅವರ ಹೆಸರನ್ನು ಪ್ರಸ್ತಾಪಿಸಿದೆ ಎಂದು ಹೇಳಲಾಗಿದೆ.
ಭಾನುವಾರ ಸರ್ಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಕ್ಯಾಬಿನೆಟ್ ಸ್ಥಾನಗಳನ್ನು ನಿರ್ಧರಿಸಲು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಆಂಧ್ರಪ್ರದೇಶದಲ್ಲಿ 16 ಲೋಕಸಭಾ ಸ್ಥಾನಗಳನ್ನು ಗೆದ್ದ ನಂತರ ಟಿಡಿಪಿ ನಾಲ್ಕು ಖಾತೆಗಳು ಮತ್ತು ಸಂಸದೀಯ ಸ್ಪೀಕರ್ ಹುದ್ದೆಯನ್ನು ಕೋರಿತ್ತು. ಜೆಡಿಯು 12 ಸ್ಥಾನಗಳನ್ನು ಗೆದ್ದ ನಂತರ ಎರಡು ಕ್ಯಾಬಿನೆಟ್ ಸ್ಥಾನಗಳನ್ನು ಕೇಳಿತ್ತು ಎಂದು ಮೂಲಗಳು ತಿಳಿಸಿವೆ.
ಸತತ ಮೂರನೇ ಅವಧಿಗೆ ಪ್ರಧಾನಿ ಮೋದಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆ ಮುರಿಯಲಿದ್ದಾರೆ. ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಭೂತಾನ್, ಮಾಲ್ಡೀವ್ಸ್ ಮತ್ತು ಮಾರಿಷಸ್ ಸೇರಿದಂತೆ ಹಲವಾರು ನೆರೆಯ ರಾಷ್ಟ್ರಗಳ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications