ಏಪ್ರಿಲ್.20ರಿಂದ ಬದಲಾಗುತ್ತಾ ಭಾರತದ ಚಿತ್ರಣ; ಟೀ ಬೆಳೆಗಾರರ ನಿರೀಕ್ಷೆ
ಶಿಮ್ಲಾ, ಏಪ್ರಿಲ್.17: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿರುವುದು ಸಾಕಷ್ಟು ಉದ್ಯಮಗಳಿಗೆ ಹೊಡೆತ ಕೊಟ್ಟಿದೆ. ಕೃಷಿ ವಲಯದಲ್ಲೂ ಲಾಕ್ ಡೌನ್ ನಿಂದ ರೈತರ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಲಿಸ್ಟ್ ಗೆ ಟೀ ಬೆಳೆಗಾರರು ಕೂಡಾ ಸೇರಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಟೀ ಉದ್ಯಮಕ್ಕೆ ಲಾಕ್ ಡೌನ್ ನಿಂದ ತೀವ್ರ ಹಿನ್ನಡೆ ಆಗುತ್ತಿದೆ. ಕೆಲಸದ ವೇಗ ಕುಗ್ಗಿದ್ದು ಸಾಗಾಟ ಮಾಡಲಾಗದೇ ಟೀ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಧರ್ಮಸಾಲಾ ಟೀ ಕಂಪನಿಯ ಮ್ಯಾನೇಜರ್ ಅಮನ್ ಪಾಲ್ ಸಿಂಗ್ ತಿಳಿಸಿದ್ದಾರೆ.
ಭಾರತದಲ್ಲಿ ಲಾಕ್ ಡೌನ್ ಘೋಷಣೆ ಆದಾಗಿನಿಂದ ಟೀ ಕೀಳುವ ಪ್ರಕ್ರಿಯೆ ನಿಂತು ಹೋಗಿತ್ತು. ಮಾರ್ಚ್.30ರಂದು ಅತಿ ಕಡಿಮೆ ಕಾರ್ಮಿಕರನ್ನು ಬಳಸಿಕೊಂಡು ಸ್ವಚ್ಛತೆಯನ್ನು ಕಾಯ್ದುಕೊಂಡು ಕಾರ್ಯ ಚಟುವಟಿಕೆ ಪುನಾರಂಭ ಮಾಡಲು ಅನುಮತಿ ಪಡೆದುಕೊಂಡೆವು. ಅದಾಗಿಯೂ ಕೆಲಸ ವೇಗ ಮತ್ತು ಸಾಗಾಟದ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಸಿಂಗ್ ಹೇಳಿದ್ದಾರೆ.

ಯುರೋಪ್ ಭಾಗದಲ್ಲಿ ಅತಿಹೆಚ್ಚು ಬೇಡಿಕೆ
ಹಿಮಾಚಲ ಪ್ರದೇಶದಲ್ಲಿ ಬೆಳೆಯುವ ಟೀಗೆ ಏಪ್ರಿಲ್ ತಿಂಗಳಿನಲ್ಲಿ ಅತಿಯಾದ ಬೇಡಿಕೆ ಇರುತ್ತದೆ. ಯುರೋಪ್ ಹಾಗೂ ಕೋಲ್ಕತ್ತಾ ಮಾರುಕಟ್ಟೆಗಳಲ್ಲಿ ಹೆಚ್ಚು ಡಿಮ್ಯಾಂಡ್ ಹೊಂದಿರುತ್ತಿತ್ತು. ಸದ್ಯ ಯುರೋಪ್ ಮಾರುಕಟ್ಟೆಗಳೆಲ್ಲ ಬಂದ್ ಆಗಿರುವುದರಿಂದ ಎಲ್ಲ ಟೀಯನ್ನು ಕೋಲ್ಕತ್ತಾ ಮಾರುಕಟ್ಟೆಗೆ ಕಳುಹಿಸಿಕೊಡಲಾಗುತ್ತಿದೆ. ಆದರೆ ಇದಕ್ಕೂ ಕೂಡಾ ಸರಿಯಾದ ರೀತಿಯ ಸಾರಿಗೆ ವ್ಯವಸ್ಥೆ ಸಿಗುತ್ತಿಲ್ಲ ಎಂದು ಸಿಂಗ್ ಆರೋಪಿಸಿದ್ದಾರೆ.

ಟೀ ಬೆಳೆಗಾರರಿಗೆ ಶೇ.30 ರಿಂದ 40ರಷ್ಟು ನಷ್ಟ
ಸಾರಿಗೆ ವ್ಯವಸ್ಥೆ ಅಭಾವದಿಂದಾಗಿ ಟೀ ಬೆಳೆಯನ್ನು ಸಾಗಾಟ ಮಾಡುವುದಕ್ಕೆ ಆಗುತ್ತಿಲ್ಲ. ಬೆಳೆದ ಟೀ ಎಲ್ಲವನ್ನು ಇಲ್ಲಿಯೇ ಸಂಗ್ರಹಿಸಿ ಇಡಲಾಗುತ್ತಿದೆ. ಈ ಪರಿಸ್ಥಿತಿಯು ಹೀಗೆಯೇ ಮುಂದುವರಿದರೆ ಶೇ.30 ರಿಂದ 40ರಷ್ಟು ನಷ್ಟವಾಗುವ ಭೀತಿಯಲ್ಲಿ ಟೀ ಬೆಳೆಗಾರರು ಇದ್ದಾರೆ.

ಏಪ್ರಿಲ್.20ರ ನಂತರ ಬದಲಾಗುತ್ತಾ ದೇಶದ ಚಿತ್ರಣ?
ಭಾರತ ಲಾಕ್ ಡೌನ್ ನಿಂದಾಗಿ ಅಂತರ್ ರಾಜ್ಯ ಸಾರಿಗೆಗೆ ಕಡಿವಾಣ ಹಾಕಲಾಗಿದೆ. ಏಪ್ರಿಲ್.20ರ ನಂತರವಾದರೂ ಕೇಂದ್ರ ಸರ್ಕಾರವು ಬೇರೆ ರಾಜ್ಯಗಳಿಗೆ ಸರಕು ಸಾಗಾಣಿಕೆಗೆ ಅವಕಾಶ ಕಲ್ಪಿಸಿ ಕೊಟ್ಟರೆ ಟೀ ಬೆಳೆಗಾರರಿಗೆ ಆಗುವ ನಷ್ಟವನ್ನು ಸ್ವಲ್ಪ ಪ್ರಮಾಣದಲ್ಲಿ ಆದರೂ ತಗ್ಗಿಸಬಹುದು ಎಂಬ ವಿಶ್ವಾಸವನ್ನು ಸಿಂಗ್ ವ್ಯಕ್ತಪಡಿಸಿದ್ದಾರೆ.

ಟೀ ತೋಟದ ಕಾರ್ಮಿಕರಿಗೂ ಆರ್ಥಿಕ ಸಂಕಷ್ಟ
ಟೀ ಮತ್ತು ಕಾಫಿ ಉದ್ಯಮಕ್ಕೆ ಅಷ್ಟೇ ಅಲ್ಲದೇ ಈ ತೋಟಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ನೂರಾರು ಮಂದಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ದಿನಗೂಲಿ ಲೆಕ್ಕದಲ್ಲಿ ದುಡಿಯುತ್ತಿದ್ದ ಕಾರ್ಮಿಕರಿಗೆ ಕೆಲಸವಿಲ್ಲದಂತೆ ಆಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮುಖಕ್ಕೆ ಮಾಸ್ಕ್ ಧರಿಸಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಕಾಫಿ ತೋಟಗಳಲ್ಲಿ ಕಾರ್ಯಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಬೇಕು ಎಂದು ಕಾರ್ಮಿಕರೊಬ್ಬರು ಮನವಿ ಮಾಡಿಕೊಳ್ಳುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications