Tea: ಟೀ ವಿಚಾರಕ್ಕೆ ಅತ್ತೆ - ಸೊಸೆ ಜಗಳ: ಸಣ್ಣ ಮಕ್ಕಳ ಮುಂದೆಯೇ ಸೊಸೆ ಕೊಂದ ಅತ್ತೆ
Tea: ಅತ್ತೆ - ಸೊಸೆಯಂದಿರುವ ನಡುವೆ ಸಣ್ಣ ಮುನಿಸು, ಜಗಳ ಎನ್ನುವುದು ಸಹಜವೇ. ಆದರೆ ಅದು ವಿಪರೀತವಾಗುವುದು ಕೊಲೆಯಲ್ಲಿ ಅಂತ್ಯವಾಗುವುದು ವಿರಳ. ಸೊಸೆ ಚಹಾ ಕೊಡುವುದು ತಡ ಮಾಡಿದ್ದಾಳೆ ಎಂದು ಅತ್ತೆಯೊಬ್ಬರು ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ನೆರೆಯ ಕೇರಳಂನ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಕ್ಷಣಿಕ ಕೋಪಕ್ಕೆ ಅತ್ತೆ ಮಾಡಿದ ಎಡವಟ್ಟಿನಿಂದ ಸೊಸೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
ಕೇರಳಂನ ಮಲಪ್ಪುರಂ ಜಿಲ್ಲೆಯಲ್ಲಿ ಚಹಾ ತಯಾರಿಸುವ ವಿಷಯದಲ್ಲಿ ನಡೆದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ಅತ್ತೆಯಿಂದ ಹಲ್ಲೆಗೆ ಒಳಗಾದ ಸೊಸೆ (28) ಸಾವನ್ನಪ್ಪಿದ್ದು, ಆಕೆಗೆ ಇಬ್ಬರು ಚಿಕ್ಕ ಹೆಣ್ಣುಮಕ್ಕಳಿದ್ದಾರೆ. ಇಲ್ಲಿನ ನೀಲಂಬೂರು ಬಳಿಯ ಕೂಟ್ಟಂಪಾರದಲ್ಲಿ ಘಟನೆ ಸಂಭವಿಸಿದೆ. ರಜಿಲಾ ಎನ್ನುವವರು ಮೃತ ದುರ್ದೈವಿ. ಸುನಿಲ್ ಬಾಬು ಎನ್ನುವವರ ಪತ್ನಿ ರಜಿಲಾ ಹಾಗೂ ಅವರ ಅತ್ತೆ ಶಾಂತಾ ಎನ್ನುವವರು ನಡುವೆ ಜಗಳ ನಡೆದಿತ್ತು. ಈ ಜಗಳವು ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.

ಶಾಂತಾ ಅವರು ಮಾಡಿದ್ದ ಚಹಾವನ್ನು ರಜಿಲಾ ಎನ್ನುವವರು ಎಸೆದಿದ್ದರಿಂದ ಜಗಳ ಶುರುವಾಗಿದೆ. ವಾಗ್ವಾದ ಜೋರಾಗಿದ್ದು, ಸೊಸೆಯ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಶಾಂತಾ ಅವರು ತಮ್ಮ ಸೊಸೆಯನ್ನು ಕೊಲ್ಲಲು ಮಚ್ಚನ್ನು ಬಳಸಿದ್ದಾಳೆ ಎಂದು ಆರೋಪಿಸಲಾಗಿದೆ. ರಜಿಲಾ ಅವರಿಗೆ ಗಂಭೀರ ಗಾಯಗಳಾಗಿದ್ದರಿಂದ ಅವರನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ. ರಜಿಲಾ ಎನ್ನುವವರಿಗೆ 10 ಮತ್ತು ನಾಲ್ಕು ವರ್ಷ ವಯಸ್ಸಿನ ಇಬ್ಬರು ಸಣ್ಣ ಹೆಣ್ಣುಮಕ್ಕಳಿದ್ದಾರೆ. ಮಕ್ಕಳು ಸಹ ಗಲಾಟೆಯನ್ನು ಬಿಡಿಸುವುದಕ್ಕೆ ಪ್ರಯತ್ನಿಸಿದ್ದಾರೆ. ಆದರೆ, ಹಲ್ಲೆ ತಡೆಯಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಘಟನೆ ನಡೆದಾಗ ಆಟೋರಿಕ್ಷಾ ಚಾಲಕ ಸುನಿಲ್ ಬಾಬು ಅವರು ಕೆಲಸಕ್ಕೆ ಹೋಗಿದ್ದರು ಎಂದು ಹೇಳಲಾಗಿದೆ.
Tea: ಮಕ್ಕಳ ಕಿರುಚಾಟದಿಂದ ಓಡಿ ಬಂದ ಜನ
ಮನೆಯಲ್ಲಿ ಅಮ್ಮ ಮತ್ತು ಅಜ್ಜಿ ಜೋರು ಜೋರಾಗಿ ಜಗಳವಾಡಿದ್ದು, ಇದನ್ನು ನೋಡಿದ ಮಕ್ಕಳು ಜೋರಾಗಿ ಅತ್ತಿದ್ದಾರೆ. ಅಲ್ಲದೆ ಕಿರುಚಾಡಿದ್ದು, ಇದರಿಂದ ನೆರೆ ಹೊರೆಯ ಮನೆಯಲ್ಲಿ ಇರುವವರು ಓಡಿ ಬಂದಿದ್ದಾರೆ. ಮಲಗುವ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಜಿಲಾಳನ್ನು ಮತ್ತು ಮಕ್ಕಳು ಹತ್ತಿರದಲ್ಲಿ ಅಳುತ್ತಿರುವುದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಸಮಯದಲ್ಲಿ ಶಾಂತಾ ತನ್ನ ಕೈಗಳಿಂದ ರಕ್ತ ತೊಳೆಯುತ್ತಿದ್ದರು. ಏನಾಯಿತು ಎಂದು ಪ್ರಶ್ನಿಸಿದಾಗ ಪ್ರತಿಕ್ರಿಯಿಸಲಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಸ್ಥಳೀಯರು ಕೂಡಲೇ ರಜಿಲಾಳನ್ನು ನಿಲಂಬೂರ್ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರು ಗಂಭೀರವಾಗಿ ಗಾಯಗೊಂಡಿದ್ದು, ಭಾರೀ ರಕ್ತಸ್ರಾವ ಸಂಭವಿಸಿದ್ದರಿಂದ ಆಸ್ಪತ್ರೆ ತಲುಪುವ ಮೊದಲೇ ಅವರು ಸಾವನ್ನಪ್ಪಿದ್ದಾರೆ. ನಂತರ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಜೇರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಸಂಜೆಯ ವೇಳೆಗೆ ಕೊಯಿಲಮುಂಡದಲ್ಲಿರುವ ಸಂಬಂಧಿಕರ ಮನೆಗೆ ತರಲಾಗಿದೆ.
-
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?












Click it and Unblock the Notifications