Teacher's Day 2023: ರಾಜಕೀಯ ಗಣ್ಯರಿಂದ ಗುರು ವೃಂದದವರಿಗೆ ನಮನ
ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವ ಜೊತೆಗೆ ದೇಶದ ಭವ್ಯ ಭವಿಷ್ಯವನ್ನು ರೂಪಿಸುವ, ಕತ್ತಲೆಯಿಂದ ವಿದ್ಯಾರ್ಥಿಗಳನ್ನು ಬೆಳಕಿನಡೆಗೆ ಕರೆದುಕೊಂಡು ಹೋಗುವ, ಅರಿಯದ ಕಲ್ಲಿಗೆ ಜ್ಞಾನವನ್ನಿತ್ತು ಮೂರ್ತಿ ಮಾಡಿದ ವಿದ್ಯಾ ಚೇತನರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
ವಿದ್ಯಾರ್ಥಿಗಳ ಜೀವನ ರೂಪುಗೊಳ್ಳಲು ದುಡಿಯುತ್ತಿರುವ, ಮುಗ್ದ ಮನದಲ್ಲಿ ಅಕ್ಷರವೆಂಬ ಬೀಜ ಬಿತ್ತಿ ಮಕ್ಕಳ ಭವಿಷ್ಯಕ್ಕೆ ಜ್ಞಾನದ ಬೆಳಕನ್ನು ಚೆಲ್ಲಿ ಸುಂದರ ನಾಡ ಕಟ್ಟುವ ಎಲ್ಲಾ ಪ್ರೀತಿಯ ಗುರುಗಳಿಗೆ ಗೌರವ ಸೂಚಿಸಲು ಇಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ಇಂದು ದೇಶದೆಲ್ಲೆಡೆ ಶಿಕ್ಷಕರ ದಿನಾಚರಣೆಯನ್ನು ಉತ್ಸಾಹದಿಂದ ಆಚರಿಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಂದ ಎಲ್ಲಾ ಗುರುವರ್ಯರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಬಿಜೆಪಿ ಕೂಡ ಗುರು ವೃಂದದವರಿಗೆ ಶಿಕ್ಷಕ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದೆ. 'ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣೆಗಳು. ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು' ಎಂದು ಬಿಜೆಪಿ x(ಟ್ವೀಟ್) ಮಾಡಿದೆ.
ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣೆಗಳು.
— BJP Karnataka (@BJP4Karnataka) September 5, 2023
ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.#TeachersDay pic.twitter.com/Jt8RKjc7OG
ಕಮಲ್ ಹಾಸನ್
ಎಂಎನ್ಎಂ ಪಕ್ಷ ಸ್ಥಾಪನೆ ಮಾಡಿದ ಕಮಲ್ ಹಾಸನ್ ಗುರು ವೃಂದದವರಿಗೆ ನಮನ ಸಲ್ಲಿಸಿದ್ದಾರೆ. 'ಶಿಕ್ಷಣ ಸಮಾಜದ ದಾರಿದೀಪ. ತಮಿಳು ಸಮುದಾಯದ ಉಗಮ ಮತ್ತು ಏಳಿಗೆಯಲ್ಲಿ ಶಿಕ್ಷಕರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಶಿಕ್ಷಕರ ದಿನದಂದು ನಮ್ಮ ವ್ಯಕ್ತಿತ್ವ ವಿಕಸನದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರಿಗೆ ಗೌರವ ಸಲ್ಲಿಸಲು ನನಗೆ ಸಂತೋಷವಾಗಿದೆ. ಅವರ ಜೀವನ ಸುಖಮಯವಾಗಿರಲಿ ಎಂದು ಹಾರೈಸುತ್ತೇನೆ' ಎಂದು ಅವರು x(ಟ್ವೀಟ್)ನಲ್ಲಿ ಬರೆದಿದ್ದಾರೆ.
கல்விதான் சமூகத்தின் கலங்கரை விளக்கு. தமிழ்ச் சமூகம் எழுந்து நின்றதிலும் எழுச்சி பெற்றதிலும் ஆசிரியர்களின் பங்களிப்பு அதிகம். நம் ஆளுமை உருவாக்கத்தில் பெரும்பங்கு வகிக்கும் ஆசிரியப் பெருமக்களை ஆசிரியர் தினத்தில் வணங்கி மகிழ்கிறேன். அவர்கள் வாழ்வு வளம்பெற வாழ்த்துகிறேன்.…
— Kamal Haasan (@ikamalhaasan) September 5, 2023
ನರೇಂದ್ರ ಮೋದಿ
ನಮ್ಮ ಭವಿಷ್ಯವನ್ನು ನಿರ್ಮಿಸುವಲ್ಲಿ ಮತ್ತು ಕನಸುಗಳನ್ನು ಪ್ರೇರೇಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಶಿಕ್ಷಕರ ದಿನದಂದು ಅವರ ಅಚಲವಾದ ಸಮರ್ಪಣೆ ಮತ್ತು ಉತ್ತಮ ಪ್ರಭಾವಕ್ಕಾಗಿ ನಾವು ಅವರನ್ನು ವಂದಿಸುತ್ತೇವೆ. ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ನಮನಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕರಿಗೆ ಶುಭ ಕೋರಿದ್ದಾರೆ.
Teachers play a key role in building our future and inspiring dreams. On #TeachersDay, we salute them for their unwavering dedication and great impact. Tributes to Dr. S. Radhakrishnan on his birth anniversary.
— Narendra Modi (@narendramodi) September 5, 2023
Here are highlights from the interaction with teachers yesterday… pic.twitter.com/F1Zmk4SSnf
ಮಲ್ಲಿಕಾರ್ಜುನ ಖರ್ಗೆ
ಶಿಕ್ಷಕರಿಗೆ ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಭ ಕೋರಿದ್ದಾರೆ. 'ಶಿಕ್ಷಕರು ನಿಜವಾದ ರಾಷ್ಟ್ರ ನಿರ್ಮಾತೃಗಳು. ಅವರು ನಮ್ಮ ಮಾರ್ಗದ ದೀಪಗಳು ಮಾತ್ರವಲ್ಲ, ಉತ್ತಮ ಮೌಲ್ಯಗಳ ಧ್ವಜಧಾರಿಗಳು ಮತ್ತು ನಮ್ಮ ನೈತಿಕ ದಿಕ್ಸೂಚಿಯಾಗಿದ್ದಾರೆ. ಶಿಕ್ಷಕರ ದಿನದಂದು, ದೇಶಾದ್ಯಂತ ಇರುವ ಎಲ್ಲಾ ಶಿಕ್ಷಕರಿಗೆ ನಾವು ನಮಸ್ಕರಿಸುತ್ತೇವೆ, ಏಕೆಂದರೆ ಅವರೇ ನಮ್ಮ ಭವಿಷ್ಯದ ಭವಿಷ್ಯವನ್ನು ರೂಪಿಸುತ್ತಾರೆ. ಭಾರತದ ಮಾಜಿ ರಾಷ್ಟ್ರಪತಿ, ಡಾ. ಎಸ್. ರಾಧಾಕೃಷ್ಣನ್ ಅವರಿಗೆ ನಮ್ಮ ನಮ್ರ ನಮನಗಳು. ಅವರು ತತ್ವಜ್ಞಾನಿ ಮತ್ತು ರಾಜನೀತಿಜ್ಞರಾಗಿದ್ದರು ಮತ್ತು ಅವರ ಕೊಡುಗೆ, ಸಮರ್ಪಣೆ ಮತ್ತು ಬುದ್ಧಿವಂತಿಕೆಯು ಪೀಳಿಗೆಯಿಂದ ಪೀಳಿಗೆಗೆ ನಮಗೆ ಸ್ಫೂರ್ತಿ ನೀಡುತ್ತಿದೆ' ಎಂದು ಖರ್ಗೆ ಅವರು x(ಟ್ವೀಟ್)ನಲ್ಲಿ ಬರೆದಿದ್ದಾರೆ.
Teachers are true nation builders.
— Mallikarjun Kharge (@kharge) September 5, 2023
They are not only our guiding lights, but the flag bearers of good values and the conscience keepers of our moral compass.
On #TeachersDay, we salute all teachers across the country, for they are the ones who will chart our future destiny.… pic.twitter.com/EwtS8XdtfS
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications