ತೆಹೆಲ್ಕಾ ಸೃಷ್ಟಿಕರ್ತ ತರುಣ್ ಬಂಧನ ಗ್ಯಾರಂಟಿ
ಪಣಜಿ, ನ.26: ಗೋವಾದಲ್ಲಿ ತನ್ನ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ತೆಹಲ್ಕಾ ಸುದ್ದಿಸಂಸ್ಥೆ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರು ತನಿಖಾಧಿಕಾರಿಗಳ ಮುಂದೆ ಹಾಜರಾಗದ ಕಾರಣ ಅವರನ್ನು ಬಂಧಿಸಲಾಗುತ್ತದೆ ಎಂದು ಗೋವಾ ಪೊಲೀಸರು ಹೇಳಿದ್ದಾರೆ.
ತೇಜಪಾಲ್ ಪರ ನಿಂತಿರುವ ಎಂಡಿ ಶೋಮಾ ಅವರ ನಿಲುವನ್ನು ಖಂಡಿಸಿ ತೆಹೆಲ್ಕಾ ಸಂಸ್ಥೆ ಹಿರಿಯ ಉದ್ಯೋಗಿಗಳು ಸಂಸ್ಥೆ ತೊರೆದಿದ್ದರು. ಇಂದು ಬೆಳಗ್ಗೆ ಶೋಮಾ ಕೂಡಾ ರಾಜೀನಾಮೆ ನೀಡಿ ಎಲ್ಲರನ್ನು ಅಚ್ಚರಿಗೊಳಿಸಿದ್ದರು. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತರುಣ್ ತೇಜಪಾಲ್ ಗೆ ಗೋವಾ ಪೊಲೀಸರು ಸಮನ್ಸ್ ಜಾರಿ ಮಾಡಿ ಗುರುವಾರ ಮಧ್ಯಾಹ್ನ 3 ಗಂಟೆ ತನಕ ಡೆಡ್ ಲೈನ್ ನೀಡಿದ್ದರು.
ಆದರೆ, ಸಮನ್ಸ್ ಗೆ ಉತ್ತರಿಸಿದ್ದ ತೇಜಪಾಲ್, 'ಶನಿವಾರ ಮಧ್ಯಾಹ್ನದ ವೇಳೆಗೆ ಬರುತ್ತೇನೆ. ದಯವಿಟ್ಟು ಕಾಲಾವಕಾಶ ನೀಡಿ' ಎಂದು ಪೊಲೀಸರಿಗೆ ಪ್ರತಿಕ್ರಿಯಿಸಿದ್ದರು. ತೇಜಪಾಲ್ ಅವರು ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಶನಿವಾರ(ನ.29) ಅರ್ಜಿ ವಿಚಾರಣೆಗೆ ಬರಬೇಕಿತ್ತು.
ದೆಹಲಿಯಲ್ಲಿ ಜಾಮೀನು ಸಿಕ್ಕರೆ ಗೋವಾ ಪೊಲೀಸರ ವಿಚಾರಣೆ ತಪ್ಪಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ತೇಜಪಾಲ್ ಇದ್ದರು. ಆದರೆ, ದೆಹಲಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ಹಿಂಪಡೆದಿದ್ದಾರೆ. ಈ ನಡುವೆ ಗುರುವಾರ ಸಂಜೆ ಗೋವಾ ಪೊಲೀಸರಿಗೆ ಫ್ಯಾಕ್ಸ್ ಪತ್ರ ಕಳಿಸಿ ನಾಳೆ ವಿಚಾರಣೆಗೆ ಬರುತ್ತೇನೆ ಎಂದಿದ್ದಾರೆ.

ಈ ನಡುವೆ ತೇಜಪಾಲ್ ಅವರನ್ನು ಶತಾಯಗತಾಯ ಪಣಜಿಗೆ ಕರೆಸಿಕೊಳ್ಳುವ ಪಣ ತೊಟ್ಟಿರುವ ಪಣಜಿ ಪೊಲೀಸರು, ತರುಣ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲು ಮುಂದಾಗಿದ್ದಾರೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ ಎಂಬ ಸುದ್ದಿ ಬಂದಿದೆ.
ತೇಜಪಾಲ್ ಅವರಿಂದ ಲೈಂಗಿಕ ಕಿರುಕುಳ ಅನುಭವಿಸಿದ ಯುವತಿ ತೆಹೆಲ್ಕಾ ಸಂಸ್ಥೆ ತೊರೆದ ನಂತರ ಸಾಲು ಸಾಲು ಹಿರಿಯ ಪತ್ರಕರ್ತರು ತೆಹೆಲ್ಕಾ ಬಿಟ್ಟಿದ್ದಾರೆ. ಶೋಮಾ ಚೌಧುರಿಗೂ ಮುನ್ನ ಹಿರಿಯ ಸಂಪಾದಕಿ ರಾಣಾ ಅಯೂಬ್ ಅವರು ಮಂಗಳವಾರ(ನ.26) ರಾಜೀನಾಮೆ ನೀಡಿದ್ದಾರೆ. ಇವರಿಗಿಂತ ಮುಂಚೆ ಸೌಗಾತ್ ದಾಸ್ ಗುಪ್ತಾ,ಅಯೇಷಾ ಸಿದ್ದಿಕಾ, ಜಾಯ್ ಮಜೂಂದಾರ್ ಹಾಗೂ ರೇವತಿ ಲಾಲ್ ಅವರು ಸಂಸ್ಥೆ ತೊರೆದಿದ್ದಾರೆ.
ಈಗಾಗಲೇ ಕ್ಷಮೆಯಾಚಿಸಿ, ಸಂಸ್ಥೆ ನಿಯಮದಂತೆ ನಡೆದುಕೊಂಡಿದ್ದೇನೆ. ಯಾವುದೇ ರೀತಿಯ ತನಿಖೆಗೆ ಸಿದ್ಧ ಎಂದಿದ್ದ ಆರೋಪಿ ತರುಣ್ ತೇಜಪಾಲ್ ಮೇಲೆ ಗೋವಾ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಹಾಗೂ 344 ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications