ಶನಿವಾರ ತನಕ ತರುಣ್ ಗೆ ಮಧ್ಯಂತರ ಜಾಮೀನು
ಪಣಜಿ, ನ.29: ತೆಹಲ್ಕಾ ಸುದ್ದಿಸಂಸ್ಥೆ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ತರುಣ್ ತೇಜಪಾಲ್ ತನ್ನ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದಾರೆ. ಮಧ್ಯಾಹ್ನ 2.30 ಗಂಟೆ ತನಕ ತೇಜಪಾಲ್ ಅವರನ್ನು ಬಂಧಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ತೇಜಪಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ಭಾರಿ ಭದ್ರತೆಯ ನಡುವೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಡಾಡಿ, ಪತ್ನಿ, ಪುತ್ರಿಯನ್ನು ಭೇಟಿ ಮಾಡಿದ ತೇಜಪಾಲ್ ಅವರು ಇಂಡಿಗೋ ವಿಮಾನ ಮೂಲಕ ಗೋವಾ ವಿಮಾನ ನಿಲ್ದಾಣ ಬಂದಿಳಿದ ತಕ್ಷಣ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.

ತೇಜಪಾಲ್ ಅವರನ್ನು ಬಸ್ ಮೂಲಕ ಕೋರ್ಟಿಗೆ ವಿಚಾರಣೆಗಾಗಿ ಕರೆದೊಯ್ಯಲಾಗಿದೆ. ಕೋರ್ಟಿನಲ್ಲಿ ಆಘಾತಕಾರಿ ಪ್ರಸಂಗ ನಡೆದ ವರದಿಯಾಗಿದೆ. ಪಣಜಿ ನ್ಯಾಯಾಲಯದಲ್ಲಿ ನಡೆದಿರುವ ವಿಚಾರಣೆಯಲ್ಲಿ ತೇಜ್ ಪಾಲ್ ಪರ ವಕೀಲರು ತರುಣ್ ತೇಜಪಾಲ್ ಅವರನ್ನು ಬಂಧಿಸುವ ಅವಶ್ಯಕತೆ ಇಲ್ಲ. ಅವರು ತನಿಖೆಗೆ ಪೂರಕವಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಅವರನ್ನು ನ್ಯಾಯಾಂಗ ವಶಕ್ಕೆ ಪಡೆಯುವ ಅವಶ್ಯಕತೆ ಇಲ್ಲ ಎಂದು ವಾದಿಸಿದ್ದಾರೆ.ತೇಜಪಾಲ್ ಬಂಧನ, ಕೋರ್ಟಿನಲ್ಲಿನ ವಾದ ಪ್ರತಿವಾದದ ವಿವರಗಳ ಮುಖ್ಯಾಂಶ ಕೆಳಗಿದೆ:
* ಅತ್ಯಾಚಾರಕ್ಕೊಳಗಾದ ಮಹಿಳೆಯ ಹೆಸರನ್ನು ತೇಜಪಾಲ್ ಪರ ವಕೀಲರು ಕೋರ್ಟಿನಲ್ಲಿ ಬಹಿರಂಗಗೊಳಿಸಿದ್ದಾರೆ. ಈ ಆಘಾತಕಾರಿ ಪ್ರಸಂಗದ ನಂತರ ವಕೀಲರಿಗೆ ನ್ಯಾಯಮೂರ್ತಿಗಳು ಛೀಮಾರಿ ಹಾಕಿದ್ದಾರೆ.
* ಪಣಜಿ ವಿಮಾನ ನಿಲ್ದಾಣ: ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ತರುಣ್ ತೇಜಪಾಲ್ ಅವರ ವಿರುದ್ಧ ಘೋಷಣೆ ಕೂಗಿ ಸ್ವಾಗತಿಸಿದರು.
* ತೆಹೆಲ್ಕಾ ಸಂಸ್ಥೆಯ ಆಂತರಿಕ ಇಮೇಲ್ ಗಳನ್ನು ಎಫ್ ಐಆರ್ ದಾಖಲಿಸಲು ಬಳಸುವುದು ಹೇಗೆ ಸಾಧ್ಯ ಎಂದು ತರುಣ್ ತೇಜಪಾಲ್ ಪ್ರಶ್ನಿಸಿದ್ದಾರೆ.
* ತನಿಖೆಗೆ ತೇಜಪಾಲ್ ಸಹಕರಿಸುತ್ತಿಲ್ಲ ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಅವರನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಗೋವಾ ಪೊಲೀಸರು ಕೋರ್ಟಿಗೆ ಮನವಿ ಮಾಡಿದ್ದಾರೆ.
* ತೇಜಪಾಲ್ ಅವರು ನನ್ನ ಮೇಲೆ ಅತ್ಯಾಚಾರಕ್ಕಿಂತ ಹೆಚ್ಚಿನ ಪ್ರಮಾಣದ ಮಾನಸಿಕ, ದೈಹಿಕ ಹಿಂಸೆ ನೀಡಿದ್ದಾರೆ ಎಂದ ಸಂತ್ರಸ್ತೆ
* ಅತ್ಯಾಚಾರ ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಗೋವಾ ಸರ್ಕಾರ ಗೃಹ ಸಚಿವಾಲಯ ಪೊಲೀಸರಿಗೆ ಸೂಚಿಸಿದೆ.
* ಶುಕ್ರವಾರ ಬೆಳಗ್ಗೆ ಪಣಜಿ ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ತೇಜಪಾಲ್, ಮಧ್ಯಾಹ್ನ 2.30ರ ನಂತರ ವಿಚಾರಣೆ ನಡೆಸಲಾಯಿತು. ಶನಿವಾರ ಮುಂದಿನ ವಿಚಾರಣೆ ನಡೆಯುವವರೆಗೂ ತೇಜಪಾಲ್ ಬಂಧನ ಮಾಡದಂತೆ ಪೊಲೀಸರಿಗೆ ಸೂಚಿಸಿ ಮಧ್ಯಂತರ ಜಾಮೀನು ನೀಡಲಾಗಿದೆ.
* ನಿಗೂಢ ಸ್ಥಳಕ್ಕೆ ತೇಜಪಾಲ್ ಅವರನ್ನು ಸಾಗಿಸಲಾಗಿದ್ದು, ನಾಳೆ ಕೋರ್ಟ್ ವಿಚಾರಣೆಗೆ ಹಾಜರಾಗಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications