ತೇಜಸ್ವಿ ಯಾದವ್ ರಾಜೀನಾಮೆಗೆ ನಿತೀಶ್ ಬಿಗಿಪಟ್ಟು
On Saturday, Bihar Chief Minister Nitish Kumar met with Congress vice president Rahul Gandhi. During the much hyped up meeting Kumar made it clear to Rahul that Tejashwi Yadav had to go.
ಪಾಟ್ನಾ, ಜುಲೈ 23: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆ ನೀಡಲೇಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಗಿಪಟ್ಟು ಹಿಡಿದು ಕುಳಿತಂತೆ ಕಾಣಿಸುತ್ತಿದೆ. ಶನಿವಾರ ನಿತೀಶ್ ಕುಮಾರ್ ಮತ್ತು ರಾಹುಲ್ ಗಾಂಧಿ ಭೇಟಿಯಾಗಿದ್ದು ಈ ವೇಳೆ ತೇಜಸ್ವಿ ಯಾದವ್ ರಾಜೀನಾಮೆ ನೀಡಲೇಬೇಕು ಎಂದು ನಿತೀಶ್ ಹೇಳಿದ್ದಾಗಿ ವರದಿಯಾಗಿದೆ.
ಭೇಟಿ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದರೂ ನಿತೀಶ್ ಮಾತ್ರ ಈ ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಜುಲೈ 28ರಿಂದ ಬಿಹಾರ ವಿಧಾನಸಭೆಯ ಅಧಿವೇಶನ ಆರಂಭವಾಗಲಿದೆ. ಅದಕ್ಕಿಂತ ಮೊದಲು ತೇಜಸ್ವೀ ಯಾದವ್ ತಮ್ಮ ರಾಜೀನಾಮೆ ಸಲ್ಲಿಸಬೇಕು ಎಂದು ನಿತೀಶ್ ಕುಮಾರ್ ರಾಹುಲ್ ಗಾಂಧಿಯವರಿಗೆ ಹೇಳಿದ್ದಾರಂತೆ.
ಲಾಲು ಪ್ರಸಾದ್ ಯಾದವ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದ ನಂತರ ಅವರ ಪುತ್ರ ತೇಜಸ್ವಿ ಯಾದವ್ ಸಿಬಿಐ ತನಿಖೆ ಎದುರಿಸುತ್ತಿದ್ದಾರೆ. ವಿರೋಧ ಪಕ್ಷಗಳು ಕೂಡಾ ತೇಜಸ್ವಿ ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸುತ್ತಿವೆ.
ಆದರೆ ಲಾಲು ಪುತ್ರ ಮಾತ್ರ ತಾನು ರಾಜೀನಾಮೆ ನೀಡುವುದಿಲ್ಲ ಎಂದು ಹಠ ಹಿಡಿದು ಕೂತಿದ್ದಾರೆ. ಬಿಹಾರದ ಮಹಾಮೈತ್ರಿಕೂಟದಲ್ಲಿ ಕಾಂಗ್ರೆಸ್ ಕೂಡ ಪಾಲುದಾರ ಪಕ್ಷವಾಗಿದ್ದು ಜೆಡಿಯು ಮತ್ತು ಆರ್'ಜೆಡಿ ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆಯಲು ಯತ್ನಿಸುತ್ತಿದೆ. ಆದರೆ ನಿತೀಶ್ ಮಾತ್ರ ತೇಜಸ್ವಿ ಇಳಿಯಲೇಬೇಕು ಎಂದು ಪಟ್ಟು ಹಿಡಿದು ಕುಳಿತಿರುವುದರಿಂದ ಮೈತ್ರಿಯ ಅನಿಶ್ಚಿತತೆ ಮುಂದುವರಿದಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications