'ವಲಸೆ' ಬಂದವರಿಗೆ ಆದ್ಯತೆ ಆರೋಪ: 13 ತೆಲಂಗಾಣ ಕಾಂಗ್ರೆಸ್ ಸದಸ್ಯರ ರಾಜೀನಾಮೆ
ಹೈದರಾಬಾದ್, ಡಿ. 19: ತೆಲಂಗಾಣ ಕಾಂಗ್ರೆಸ್ಗೆ ದೊಡ್ಡ ಆಘಾತ ಎದುರಾಗಿದೆ. ತೆಲಂಗಾಣ ಕಾಂಗ್ರೆಸ್ನಲ್ಲಿ ಪಕ್ಷದ ಆಂತರಿಕ ಜಗಳ ತೀವ್ರಗೊಂಡಿದ್ದು, 13 ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬೇರೆ ಪಕ್ಷಗಳಿಂದ ಕಾಂಗ್ರೆಸ್ಗೆ ವಲಸೆ ಬಂದವರು ಪ್ರಾಮುಖ್ಯತೆ ಪಡೆದಿದ್ದಾರೆ ಎಂಬ ಕೆಲ ಹಿರಿಯ ನಾಯಕರ ಹೇಳಿಕೆಯನ್ನು ಪ್ರತಿಭಟಿಸಿ, ರಾಜೀನಾಮೆ ನೀಡಿದ್ದಾರೆ. ಈ 13 ಸದಸ್ಯರಲ್ಲಿ ಹಾಲಿ ಕಾಂಗ್ರೆಸ್ ಶಾಸಕಿ ದಾನಸರಿ ಅನಸೂಯ (ಸೀತಕ್ಕ) ಮತ್ತು ಮಾಜಿ ಶಾಸಕ ವೆಂ ನರೇಂದ್ರ ರೆಡ್ಡಿ ಸೇರಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಮಾಜಿ ಉಪಮುಖ್ಯಮಂತ್ರಿ ದಾಮೋದರ್ ರಾಜನರಸಿಂಹ ಅವರು ಶನಿವಾರ ಕಾಂಗ್ರೆಸ್ಗೆ ಸೇರ್ಪಡೆಯಾದ ಕೆಲವು ಮಾಜಿ ತೆಲುಗು ದೇಶಂ ಪಕ್ಷದ ನಾಯಕರನ್ನು ಉಲ್ಲೇಖಿಸಿ, "ವಲಸೆ ಬಂದವರಿಗೆ ಪ್ರಾಮುಕ್ಯತೆ ನೀಡಿದರೇ, ಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾವ ಸಂದೇಶವನ್ನು ನೀಡಿದಂತಾಗುತ್ತದೇ? ಎಂದು ಪ್ರಶ್ನಿಸಿದ್ದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಂಸದ ಎ ರೇವಂತ್ ರೆಡ್ಡಿ ಕುರಿತು ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಉಲ್ಲಂಘಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ ನೇರವಾಗಿ ಪ್ರತಿಕ್ರಿಯಿಸದೆ, ಪಕ್ಷದ ಹೈಕಮಾಂಡ್ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸುತ್ತದೆ ಎಂದು ಹೇಳಿದ್ದಾರೆ.
Telangana | 12 members resign from the recently-formed Pradesh Congress Committee. In the resignation letters, they mentioned that KCR has been running a dictatorial rule in the state. There is a necessity for a strong struggle to dethrone KCR. (1/2)
— ANI (@ANI) December 19, 2022
ಇದರ ಜೊತೆಗೆ ತೆಲಂಗಾಣದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಗ್ರಾಮದಿಂದ ರಾಜ್ಯ ಮಟ್ಟದವರೆಗೆ ಪಕ್ಷದ ಮುಖಂಡರು ಜನವರಿ 26 ರಿಂದ ತೆಲಂಗಾಣದಲ್ಲಿ 'ಪಾದಯಾತ್ರೆ' ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ತೆಲಂಗಾಣದಲ್ಲಿ ಬಿಆರ್ಎಸ್ ಮತ್ತು ಕೇಂದ್ರದಲ್ಲಿ ಬಿಜೆಪಿ ಎರಡು ಸರ್ಕಾರಗಳ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವಂತೆ ಅವರು ಹಿರಿಯ ನಾಯಕರನ್ನು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಕಳಪೆ ಪ್ರದರ್ಶನದ ನಂತರ, ಪಕ್ಷದ ಹಲವಾರು ನಾಯಕರು ಇತ್ತೀಚೆಗೆ ರಚಿಸಲಾಗಿರುವ ಸಮಿತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Telangana | 12 members resign from the recently-formed Pradesh Congress Committee. In the resignation letters, they mentioned that KCR has been running a dictatorial rule in the state. There is a necessity for a strong struggle to dethrone KCR. (1/2)
— ANI (@ANI) December 19, 2022
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications