Telangana Assembly Election 2023: ತೆಲಂಗಾಣ ಚುನಾವಣೆಯ ವೇಳಾಪಟ್ಟಿ, ದಿನಾಂಕ, ಸಮಯ, ವಿವರ ತಿಳಿಯಿರಿ
ನವದೆಹಲಿ, ಅಕ್ಟೋಬರ್ 09: ದೇಶದ ಐದು ರಾಜ್ಯಗಳ ವಿಧಾನಸಭೆ ಚುಣಾವಣೆಗೆ ದಿನಾಂಕಗಳು ನಿಗದಿಯಾಗಿವೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಭಾರತೀಯ ಚುನಾವಣೆ ಆಯೋಗ ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದೆ. ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ಗಢ ಹಾಗೂ ಮಿಜೋರಾಂ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ.
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ತೆಲಂಗಾಣ ಚುನಾವಣೆಯು ನವೆಂಬರ್ 30 ರಂದು ನಡೆಯಲಿದೆ. ನವೆಂಬರ್ 3 ರಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಡಿಸೆಂಬರ್ 3 ರಂದು ಮತಗಳ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಅಭ್ಯರ್ಥಿಗಳ ಅರ್ಜಿಗಳನ್ನು ಹಿಂಪಡೆಯಲು ನವೆಂಬರ್ 15 ಕೊನೆಯ ದಿನವಾಗಿದೆ. ನವೆಂಬರ್ 13 ರಂದು ಅರ್ಜಿಗಳ ಪರಿಶೀಲನೆ ನಡೆಯಲಿದೆ.
ಚುನಾವಣಾ ಆಯೋಗದ ಪ್ರಕಾರ, ತೆಲಂಗಾಣದಲ್ಲಿ ಮತದಾರರ ಪಟ್ಟಿಗೆ 17.1 ಲಕ್ಷ ಹೊಸಬರು ಸೇರ್ಪಡೆಗೊಂಡಿದ್ದಾರೆ. 18 ರಿಂದ 19 ವರ್ಷದೊಳಗಿನ ಯುವಕರ ಸಂಖ್ಯೆ 3.35 ಲಕ್ಷ ಆಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ನಾಗರಿಕರಿಗೆ ಮನವಿ ಮಾಡಿದರು.
'ಐದು ರಾಜ್ಯಗಳಲ್ಲಿ 60.20 ಲಕ್ಷ ಹೊಸ ಮತದಾರರು ನೋಂದಣಿಯಾಗಿದ್ದಾರೆ. ಕ್ರಿಮಿನಲ್ ಇತಿಹಾಸ ಹೊಂದಿರುವ ಅಭ್ಯರ್ಥಿಗಳು ತಮ್ಮ ಇತಿಹಾಸವನ್ನು ಪತ್ರಿಕೆಗಳು, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಮೂರು ಬಾರಿ ಪ್ರಕಟಿಸಬೇಕು' ಎಂದು ಹೇಳಿದ್ದಾರೆ.
ಕ್ರಿಮಿನಲ್ ಇತಿಹಾಸ ಹೊಂದಿರುವವರಿಗೆ ಏಕೆ ಟಿಕೆಟ್ ನೀಡಲಾಗಿದೆ ಎಂಬುದನ್ನು ಪಕ್ಷಗಳು ಸಹ ವಿವರಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಚುನಾವಣೆಗಳ ಮೇಲ್ವಿಚಾರಣೆಯನ್ನು ಮಾಡಲು ಐದು ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ಸೀಜರ್ ಮ್ಯಾನೇಜ್ಮೆಂಟ್ ಸಿಸ್ಟಮ್ ಅನ್ನು ಪರಿಚಯಿಸಲಾಗುತ್ತಿದೆ. ಇದು ಐದು ರಾಜ್ಯಗಳಲ್ಲಿ ಶಾಂತಿಯುತ ವಾತಾವರಣವನ್ನು ಕಾಪಾಡುವಲ್ಲಿ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ತೆಲಂಗಾಣದ 119 ಕ್ಷೇತ್ರಗಳಲ್ಲಿ 3 ಕೋಟಿ ಮತದಾರರಿದ್ದಾರೆ. ಇದರಲ್ಲಿ 1.58 ಕೋಟಿ ಮಹಿಳೆಯರು ಮತ್ತು 1.58 ಕೋಟಿ ಮತದಾರರು ಪುರುಷ ಮತದಾರರಿದ್ದಾರೆ. 2,557 ಮತದಾರರು ತೃತೀಯಲಿಂಗಿಗಳಾಗಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಈ ಐದು ರಾಜ್ಯಗಳ ಚುನಾವಣೆ ನಡೆಯಲಿದ್ದು, ಭಾರೀ ಕುತೂಹಲ ಕೆರಳಿಸಿವೆ. ಇದು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸೆಮಿಪೈನಲ್ ಎಂದು ಅಭಿಪ್ರಾಯಗಳು ವ್ಯಕ್ತವಾಗಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications