Telangana opinion poll 2023: ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಬಿಜೆಪಿ, ಕೆಸಿಆರ್ಗೂ ಸಂಕಷ್ಟ- ನಿಖರ ಸಮೀಕ್ಷೆಯ ಅಂಕಿಅಂಶ
ಹೈದರಾಬಾದ್, ನವೆಂಬರ್ 05: ತೆಲಂಗಾಣ ವಿಧಾನಸಭೆ ಚುನಾವಣೆಯು ಭಾರೀ ಚರ್ಚೆಯಲ್ಲಿದೆ. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಸತತ ಎರಡು ಬಾರಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿದ್ದ ಚಂದ್ರಶೇಖರ್ ರಾವ್ ಅವರಿಗೆ ಕಾಂಗ್ರೆಸ್ನಿಂದ ಪೈಪೋಟಿ ಎದುರಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೇಂದ್ರದಲ್ಲಿರುವ ಬಿಜೆಪಿ ಪರಿಸ್ಥಿತಿ ಮಾತ್ರ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.
ತೆಲಂಗಾಣ ಚುನಾವಣೆ 2023
ತೆಲಂಗಾಣದ ಒಟ್ಟು 119 ಸ್ಥಾನಗಳಿಗೆ ನವೆಂಬರ್ 30 ರಂದು ಏಕ-ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಹೊರಬೀಳಲಿದೆ.
ತೆಲಂಗಾಣ ಚುನಾವಣೆ: ದಿನಾಂಕಗಳು
ತೆಲಂಗಾಣ ಚುನಾವಣೆ- 2023 ಮತದಾನದ ದಿನಾಂಕ: ನವೆಂಬರ್ 30
ತೆಲಂಗಾಣ ಚುನಾವಣೆ- 2023 ಫಲಿತಾಂಶದ ದಿನಾಂಕ: ಡಿಸೆಂಬರ್ 3
ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ ದಿನಾಂಕ: ನವೆಂಬರ್ 3, 2023 (ಶುಕ್ರವಾರ)
ನಾಮನಿರ್ದೇಶನಗಳ ಕೊನೆಯ ದಿನಾಂಕ: ನವೆಂಬರ್ 10, 2023 (ಶುಕ್ರವಾರ)
ನಾಮನಿರ್ದೇಶನಗಳ ಪರಿಶೀಲನೆಯ ದಿನಾಂಕ: ನವೆಂಬರ್ 13, 2023 (ಸೋಮವಾರ)
ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ: ನವೆಂಬರ್ 15, 2023 (ಬುಧವಾರ)
ಮತದಾನದ ದಿನಾಂಕ: ನವೆಂಬರ್ 30, 2023 (ಗುರುವಾರ)
ಎಣಿಕೆಯ ದಿನಾಂಕ: ಡಿಸೆಂಬರ್ 3, 2023 (ಭಾನುವಾರ)

ತೆಲಂಗಾಣ ಚುನಾವಣೆಯ ಪ್ರಮುಖ ವಿಚಾರಗಳು
ಕಲ್ಯಾಣ ಯೋಜನೆಗಳು, ರಾಜ್ಯದ ಸಾಲ ಮತ್ತು ಪಕ್ಷದೊಳಗಿನ ಆಂತರಿಕ ಕಚ್ಚಾಟ ಸೇರಿದಂತೆ ಹಲವಾರು ಸಮಸ್ಯೆಗಳು ಈ ಚುನಾವಣೆಯಲ್ಲಿ ಪ್ರಮುಖವಾಗಿವೆ. ಎಲ್ಲಾ ಪಕ್ಷಗಳು ಉತ್ತಮ ಪಿಂಚಣಿ, ನಿರುದ್ಯೋಗ ಸೌಲಭ್ಯಗಳು, ವಿಮೆ, ರಾಜ್ಯ ಸರ್ಕಾರದ ಉದ್ಯೋಗ ಸೇರಿದಂತೆ ಕಲ್ಯಾಣ ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿವೆ.
ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಬಿಆರ್ಎಸ್ ಪಕ್ಷ ಕಾಂಗ್ರೆಸ್ನಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ. ಬಿಆರ್ಎಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಎಲ್ಲರಿಗಿಂತ ಮೊದಲು ಘೋಷಿಸುವ ಮೂಲಕ ಕೊಂಚ ಲಾಭ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಟಿಕೆಟ್ ಸಿಗದ ಪಕ್ಷದ ಬಂಡಾಯ ನಾಯಕರು ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಕೆಲಸ ಮಾಡುವ ನಿರೀಕ್ಷೆ ಇದೆ.
ತೆಲಂಗಾಣ- 2018ರ ಫಲಿತಾಂಶಗಳು
119 ಸದಸ್ಯ ಬಲದ ವಿಧಾನಸಭೆಯಲ್ಲಿ ಕೆಸಿಆರ್ ನೇತೃತ್ವದ ಬಿಆರ್ಎಸ್ 88 ಸ್ಥಾನಗಳನ್ನು ಗಳಿಸಿತ್ತು. ಅಂದರೆ ಶೇ 46.87 ಮತಗಳನ್ನು ಗಳಿಸುವ ಮೂಲಕ ಪ್ರಚಂಡ ಗೆಲುವು ಸಾಧಿಸಿತು. ನಂತರ ಕಾಂಗ್ರೆಸ್ 21, ಎಐಎಂಐಎಂ 7, ಟಿಡಿಪಿ 2 ಮತ್ತು ಬಿಜೆಪಿ 1 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದವು.

ಬಿಆರ್ಎಸ್- 88
ಕಾಂಗ್ರೆಸ್ - 21
ಎಐಎಂಐಎಂ- 7
ಇತರೆ - 2
ಬಿಜೆಪಿ- 1
ಪ್ರಮುಖ ರಾಜಕೀಯ ಪಕ್ಷಗಳು ಮತ್ತು ಮೈತ್ರಿಗಳು
ತೆಲಂಗಾಣ ಪ್ರಸ್ತುತ ಭಾರತ್ ರಾಷ್ಟ್ರ ಸಮಿತಿ ಪ್ರಮುಖ ಪಕ್ಷವಾಗಿದೆ. ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿದ್ದು, ಬಿಜೆಪಿ ರಾಜ್ಯದ ಪ್ರಮುಖ ಪಕ್ಷಗಳಲ್ಲಿ ಒಂದಾಗಲು ಪ್ರಯತ್ನಿಸುತ್ತಿದೆ.
ಆಡಳಿತಾರೂಢ ಬಿಆರ್ಎಸ್ಗೆ ಪ್ರಮುಖ ಎದುರಾಳಿಯಾಗಿ ಹೊರಹೊಮ್ಮಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಆದರೆ, ಈ ವರೆಗೆ ರಾಜ್ಯದ ಜನರ ಮೇಲೆ ಯಾವುದೇ ಪರಿಣಾಮ ಬೀರಲು ಬಿಜೆಪಿ ಸಫಲವಾಗಿಲ್ಲ.

ಹ್ಯಾಟ್ರಿಕ್ ಸಾಧನೆ ಮಾಡಲು ಬಿಆರ್ಎಸ್ ತನ್ನ ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳ ಮೇಲೆ ಮತಗಳನ್ನು ಸೆಳೆಯಲು ಯತ್ನಿಸುತ್ತಿದೆ. ನೆರೆಯ ಕರ್ನಾಟಕದಲ್ಲಿ ಪಕ್ಷದ ಅದ್ಭುತ ಗೆಲುವನ್ನು ಪುನರಾವರ್ತಿಸಲು ಕಾಂಗ್ರೆಸ್ ಮುಂದಾಗಿದೆ. ಕೆಸಿಆರ್ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರಗಳಲ್ಲಿ ಬಿಜೆಪಿ ನಿರತವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಅಸಾದುದ್ದೀನ್ ಓವೈಸಿ ಅವರ ಅದಿಲಾಬಾದ್ ಮತ್ತು ನಿಜಾಮಾಬಾದ್ ಜಿಲ್ಲೆಗಳಲ್ಲಿ ಸ್ಪರ್ಧೆಗೆ ಇಳಿದಿದೆ. ಇದರ ಹೊರತಾಗಿ ಹೈದರಾಬಾದ್ನ ಕನಿಷ್ಠ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿದೆ. ಮುಸ್ಲಿಂ ಮತದಾರರಲ್ಲಿ ಪಕ್ಷವು ಸಾಕಷ್ಟು ಪ್ರಭಾವವನ್ನು ಹೊಂದಿದೆ.
ಸ್ಮಾಲ್ ಬಾಕ್ಸ್ ಇಂಡಿಯಾ ಸಮೀಕ್ಷೆ
ಕರ್ನಾಟಕದ ಚುನಾವಣೆ ಕುರಿತು ನಿಟಕ ಸಮೀಕ್ಷೆ ನೀಡಿದ್ದ ಸ್ಮಾಲ್ ಬಾಕ್ಸ್ ಇಂಡಿಯಾ ತೆಲಂಗಾಣದ ಸಮೀಕ್ಷೆಯನ್ನು ನೀಡಿದೆ.
ಸ್ಮಾಲ್ ಬಾಕ್ಸ್ ಇಂಡಿಯಾ ಸಮೀಕ್ಷೆ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು 50 ರಿಂದ 56 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಬಿಆರ್ಎಸ್ ಪಕ್ಷವು 48 ರಿಂದ 59 ಕ್ಷೇತ್ರಗಳಲ್ಲಿ ಗೆಲುವ ಸಾಧಿಸಲಿದೆ. ಬಿಜೆಪಿ 2 ರಿಂದ 4 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಎಐಎಂಐಎಂ 5 ರಿಂದ 6 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications