Telangana Assembly Election 2023: ನಟ ಪವನ್ ಕಲ್ಯಾಣ್ರನ್ನು ಭೇಟಿ ಮಾಡಿದ ತೆಲಂಗಾಣ ಬಿಜೆಪಿ ಅಧ್ಯಕ್ಷ-ಕಾರಣವೇನು?
ಹೈದರಾಬಾದ್, ಅಕ್ಟೋಬರ್ 18: ನವೆಂಬರ್ನಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಅಬ್ಬರದ ಪ್ರಚಾರ ಆರಂಭಿಸಿವೆ. ಆಡಳಿತಾರೂಢ ಬಿಆರ್ಎಸ್ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಎರಡೂ ಪಕ್ಷಗಳಿಗೆ ಪೈಪೋಟಿ ನೀಡಲು ಬಿಜೆಪಿಯೂ ಸಹ ಕಸರತ್ತಿನಲ್ಲಿ ತೊಡಗಿದೆ. ಇದರ ಭಾಗವಾಗಿ ಬಿಜೆಪಿ ನಾಯಕರು ನಟ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರನ್ನು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಹಾಗೂ ರಾಜ್ಯಸಭಾ ಸದಸ್ಯ ಕೆ ಲಕ್ಷ್ಮಣ್ ಅವರು ಬುಧವಾರ ಭೇಟಿಯಾಗಿದ್ದಾರೆ. ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಮೈತ್ರಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪವನ್ ಕಲ್ಯಾಣ್ ಅವರ ಹೈದರಾಬಾದ್ ಕಚೇರಿಯಲ್ಲಿ ಸಭೆ ನಡೆದಿದೆ. ಇದೇ ವೇಳೆ, ಹೇಳಿಕೆ ನೀಡಿರುವ ಜನಸೇನಾ ಎನ್ಡಿಎ ಮೈತ್ರಿಕೂಟದ ಭಾಗವಾಗಿ ಮುಂದುವರಿಯಲಿದೆ ಎಂದು ತಿಳಿಸಿದೆ.
ತೆಲಂಗಾಣ ವಿಧಾನಸಭೆ ಚುನಾವಣೆ ಕುರಿತು ಮಾತನಾಡಿರುವ ಪವನ್ ಕಲ್ಯಾಣ್, ಜನಸೇನಾ ಪಕ್ಷವು ತೆಲಂಗಾಣದಲ್ಲಿ ಕನಿಷ್ಠ 30 ಸ್ಥಾನಗಳಲ್ಲಿ ಸ್ಪರ್ಧಿಸಬೇಕು. ಇಲ್ಲದಿದ್ದರೆ ಪಕ್ಷದ ಕಾರ್ಯಕರ್ತರ ನೈತಿಕತೆಗೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ.
ಬಿಜೆಪಿಯ ಉನ್ನತ ನಾಯಕರ ಕೋರಿಕೆಯ ಮೇರೆಗೆ ಈ ಹಿಂದೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಚುನಾವಣೆಯಲ್ಲಿ ಜನಸೇನಾ ಸ್ಪರ್ಧಿಸಿರಲಿಲ್ಲ. ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಜನಸೇನಾ ಶ್ರಮಿಸಿತು ಎಂದು ಅವರು ತಿಳಿಸಿದ್ದಾರೆ.
ಒಂದು ಅಥವಾ ಎರಡು ದಿನಗಳಲ್ಲಿ ಮೈತ್ರಿ ಬಗ್ಗೆ ನಿರ್ಧಾರವನ್ನು ಅಂತಿಮಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತೆಲಂಗಾಣದ ಕುಕಟ್ಪಲ್ಲಿ, ಎಲ್ಬಿ ನಗರ, ನಾಗರ್ಕರ್ನೂಲ್, ವೈರಾ, ಖಮ್ಮಂ, ಮುನುಗೋಡು, ಕುತುಬುಲ್ಲಾಪುರ, ಸೆರಿಲಿಂಗಂಪಲ್ಲಿ, ಪಟಂಚೇರು, ಸನತ್ ನಗರ, ಕೊತಗುಡೆಂ, ಉಪ್ಪಲ್, ಅಶ್ವರಾವ್ಪೇಟೆ, ಪಾಲಕುರ್ತಿ, ನರಸಂಪೇಟ್ ಸೇರಿದಂತೆ 32 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಈ ತಿಂಗಳ ಆರಂಭದಲ್ಲಿ ಜನಸೇನೆ ತಿಳಿಸಿದೆ.
ಸ್ಟೇಷನ್ ಘನಪುರ, ಹುಸ್ನಾಬಾದ್, ರಾಮ ಗುಂಡಂ, ಜಗಿತ್ಯಾಲ, ನಕಿರೇಕಲ್, ಹುಜೂರ್ ನಗರ, ಮಂಥನಿ, ಕೊಡದ, ಸತ್ತುಪಲ್ಲಿ, ವಾರಂಗಲ್ ಪಶ್ಚಿಮ, ವಾರಂಗಲ್ ಪೂರ್ವ, ಮಲ್ಕಾಜಿಗಿರಿ, ಖಾನಾಪುರ, ಮೇಡ್ಚಲ್, ಪಾಲೇರು, ಇಲ್ಲಾಂಡು, ಮಧಿರಾ ವಿಧಾನಸಭೆ ಕ್ಷೇತ್ರಗಳಲ್ಲಿ ಜನಸೇನಾ ಸ್ಪರ್ಧಿಸಲಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications