Telangana elections: ತೆಲಂಗಾಣದಲ್ಲಿ ರಾಜ್ಯಾದ್ಯಂತ ಬಸ್ ಯಾತ್ರೆ ಆರಂಭಿಸಲಿದೆ ಯುವ ಕಾಂಗ್ರೆಸ್
ಹೈದರಾಬಾದ್, ಜೂನ್. 08: ಕರ್ನಾಟಕದಲ್ಲಿ ಭರ್ಜರಿ ಗೆಲುವಿನ ಉತ್ಸಾಹದಲ್ಲಿರುವ ಕಾಂಗ್ರೆಸ್ ತೆಲಂಗಾಣದಲ್ಲಿ ಚುನಾವಣಾ ತಯಾರಿ ನಡೆಸುತ್ತಿದೆ. ರಾಜ್ಯಾದ್ಯಂತ ಯುವ ಕಾಂಗ್ರೆಸ್ ಬಸ್ ಯಾತ್ರೆ ಆರಂಭಿಸಲಿದೆ. ಇದಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಪ್ರತಿನಿಧಿಸುವ ಗಜ್ವೇಲ್ ವಿಧಾನಸಭಾ ಕ್ಷೇತ್ರದಿಂದ ಚಾಲನೆ ದೊರೆಯಲಿದೆ.
ರಾಜ್ಯಾದ್ಯಂತ 'ಬಸ್ ಯಾತ್ರೆ' ನಡೆಸಲು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಬುಧವಾರ ನಡೆದ ಮೂರು ದಿನಗಳ ಐವೈಸಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದೆ. ಸಭೆಯಲ್ಲಿ, ವಿವಿಧ ರಾಜ್ಯ ಘಟಕಗಳ ಐವೈಸಿ ನಾಯಕರು ಕರ್ನಾಟಕದಲ್ಲಿ ನಡೆಸಿದ ಯಶಸ್ವಿ ಪ್ರಚಾರಗಳು ಮತ್ತು ಈ ವರ್ಷ ಚುನಾವಣೆಗೆ ಹೋಗುವ ಐದು ರಾಜ್ಯಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ.

ಚುನಾವಣೆಯಲ್ಲಿ ಶೇಕಡಾ 50 ರಷ್ಟು ಸ್ಥಾನಗಳನ್ನು ಯುವಕರಿಗೆ ನೀಡುವ ಪಕ್ಷದ ನಿರ್ಧಾರವನ್ನು ಯುವ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ. ಸಭೆಯಲ್ಲಿ ಸಂಸದ ಎನ್.ಉತ್ತಮ್ ಕುಮಾರ್ ರೆಡ್ಡಿ, ಎಐಸಿಸಿ ಕಾರ್ಯದರ್ಶಿ ವಂಶಿ ಚಂದ್ ರೆಡ್ಡಿ, ಐವೈಸಿ ಅಧ್ಯಕ್ಷ ಶ್ರೀನಿವಾಸ್ ಬಿವಿ, ಎಐಸಿಸಿ ಉಸ್ತುವಾರಿ ಕೃಷ್ಣ ಅಲ್ಲವಾರು, ತೆಲಂಗಾಣ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಸೇನಾ ರೆಡ್ಡಿ, ಟಿಪಿಸಿಸಿ ಕಾರ್ಯಾಧ್ಯಕ್ಷ ಮಹೇಶ್ ಕುಮಾರ್ ಗೌಡ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಉತ್ತಮ್ ಕುಮಾರ್ ರೆಡ್ಡಿ, ಬಿಆರ್ಎಸ್ ನೇತೃತ್ವದ ರಾಜ್ಯ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗಳು ರಾಜ್ಯದಲ್ಲಿ ನಿರುದ್ಯೋಗಿ ಯುವಕರಿಗೆ ದ್ರೋಹ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಕೆ ಚಂದ್ರಶೇಖರ್ ರಾವ್ ಸರ್ಕಾರದ ನಿರ್ಲಕ್ಷ್ಯ ಯುವಕರ ಉದ್ಯೋಗವನ್ನು ಹಾಳು ಮಾಡಿದೆ ಎಂದು ಆರೋಪಿಸಿದ್ದಾರೆ.

ಇನ್ನು, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ನಂತರ, ಪ್ರಿಯಾಂಕಾ ಗಾಂಧಿ ವಾದ್ರಾಗೆ ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲಿ ಭಾರೀ ಬೇಡಿಕೆ ಬಂದಿದ್ದು, ಚುನಾವಣಾ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಈಗಾಗಲೇ ತೆಲಂಗಾಣದಲ್ಲಿ ರ್ಯಾಲಿಯನ್ನು ನಡೆಸಿದ್ದಾರೆ. ಅವರು ಜೂನ್ 12 ರಂದು ಮಧ್ಯಪ್ರದೇಶದಲ್ಲಿ ಭಾಷಣ ಮಾಡುವ ನಿರೀಕ್ಷೆಯಿದೆ.
ತೆಲಂಗಾಣದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಮಹಿಳೆಯರಿಗೆ 1,500 ರೂಪಾಯಿ ಆದಾಯ ಖಾತರಿ ನೀಡುವ ಪಕ್ಷದ ಭರವಸೆಯನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಎನ್ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಮಾಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications