Telangana Election 2023: ತೆಲಂಗಾಣ ಬಿಆರ್ಎಸ್ ಅಭ್ಯರ್ಥಿ, ಸಂಸದ ಪ್ರಭಾಕರ್ ರೆಡ್ಡಿಗೆ ಚಾಕುವಿನಿಂದ ಇರಿದ ಬಿಜೆಪಿ ಕಾರ್ಯಕರ್ತ
ಹೈದರಾಬಾದ್, ಅಕ್ಟೋಬರ್ 30: ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಭಾರತ್ ರಾಷ್ಟ್ರ ಸಮಿತಿ ( ಬಿಆರ್ಎಸ್ ) ಅಭ್ಯರ್ಥಿಗೆ ಚಾಕು ಇರಿಯಲಾಗಿದೆ. ಈ ಘಟಣೆಯು ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ದೌಲತಾಬಾದ್ ತಾಲ್ಲೂಕಿನ ಸೂರಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ಬಿಆರ್ಎಸ್ ಅಭ್ಯರ್ಥಿ ಹಾಗೂ ಮೇದಕ್ನ ಲೋಕಸಭಾ ಸಂಸದ ಕೋತ ಪ್ರಭಾಕರ್ ರೆಡ್ಡಿ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ದಾಳಿಕೋರನನ್ನು ಚೆಪ್ಪಳ ಗ್ರಾಮದ ಘಟಾನಿ ರಾಜು ಎಂದು ಗುರುತಿಸಲಾಗಿದೆ. ಸಂಸದರ ಮೇಲೆ ಹಲ್ಲೆ ನಡೆಸಿದಾಗ ಆತ ಕುಡಿದ ಮತ್ತಿನಲ್ಲಿದ್ದ ಸ್ಥಿತಿಯಲ್ಲಿದ್ದನೆಂದು ತಿಳಿದುಬಂದಿದೆ.
ದಾಳಿಯ ನಂತರ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಯೂಟ್ಯೂಬ್ ಚಾನೆಲ್ವೊಂದರಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದನು. ಆತ ಇತ್ತೀಚೆಗೆ ಬಿಜೆಪಿ ಸೇರಿದ್ದನೆಂಬ ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ತಕ್ಷಣ ಪ್ರಭಾಕರ ರೆಡ್ಡಿ ಅವರನ್ನು ಗಜ್ವೇಲ್ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತು. ಹೆಚ್ಚಿನ ಚಿಕಿತ್ಸೆಗಾಗಿ ಸಿಕಂದರಾಬಾದ್ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ.
BRS MP Kotha Prabhakar Reddy was attacked with a knife by unidentified person during election campaign in Surampalli village of Daultabad mandal of Siddipet district.
— Naveena (@TheNaveena) October 30, 2023
MP was taken to hospital with stomach injuries pic.twitter.com/pXcjPgOb9O
ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದಿಪೇಟೆ ಪೊಲೀಸ್ ಕಮಿಷನರ್ ಶ್ವೇತಾ ರೆಡ್ಡಿ, ನಾವು ರಾಜುವನ್ನು ನಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಕುಡಿದ ಮತ್ತಿನಲ್ಲಿದ್ದ ಆತನಿಗೆ ಕೌಟುಂಬಿಕ ಸಮಸ್ಯೆಗಳೂ ಇದ್ದವು. ನಾವು ಆತನನ್ನು ಬಿಜೆಪಿ ಬೆಂಬಲಿಗನೆಂದು ಗುರುತಿಸಿದ್ದೇವೆ.
'ಸಂಸದ ಕೋಠಾ ಪ್ರಭಾಕರ್ ರೆಡ್ಡಿ ಸುರಕ್ಷಿತವಾಗಿದ್ದಾರೆ. ದೌಲತಾಬಾದ್ ಮಂಡಲದ ಸೂರಂಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅವರನ್ನು ಗಜ್ವೇಲ್ಗೆ ಸ್ಥಳಾಂತರಿಸಲಾಗಿದೆ. ಆರೋಪಿ ಬಂಧಿತನಾಗಿದ್ದು, ಈ ಕುರಿತು ತನಿಖೆ ನಡೆಸುತ್ತಿದ್ದೇವೆ' ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications