2024ರ ಚುನಾವಣೆಗೆ ತಯಾರಿ: ರಾಷ್ಟ್ರೀಯ ಕಚೇರಿ ಉದ್ಘಾಟಿಸಿದ ತೆಲಂಗಾಣ ಸಿಎಂ ಕೆಸಿಆರ್
ನವದೆಹಲಿ, ಡಿ.14: ದೆಹಲಿಯ ಸರ್ದಾರ್ ಪಟೇಲ್ ಮಾರ್ಗದಲ್ಲಿ ಭಾರತ್ ರಾಷ್ಟ್ರ ಸಮಿತಿ ಪಕ್ಷದ ರಾಷ್ಟ್ರೀಯ ಕಚೇರಿಯನ್ನು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಬುಧವಾರ ಉದ್ಘಾಟಿಸಿದ್ದಾರೆ.
ಮಧ್ಯಾಹ್ನ 12.37 ಕ್ಕೆ ಭಾರತ್ ರಾಷ್ಟ್ರ ಸಮಿತಿ ಪಕ್ಷದ ಧ್ವಜಾರೋಹಣ ಮಾಡಿದ ಅವರು ಪಕ್ಷದ ಕಚೇರಿಯಲ್ಲಿ ತಮ್ಮ ಕುರ್ಚಿಯಲ್ಲಿ ಆಸೀನರಾಗಿ, ಪಕ್ಷದ ದಾಖಲೆಗಳಿಗೆ ಸಹಿ ಹಾಕಿದ್ದಾರೆ.
ಇಷ್ಟು ದಿನ ತೆಲಂಗಾಣ ರಾಷ್ಟ್ರ ಸಮಿತಿ ಎಂದಿದ್ದ ಪಕ್ಷವನ್ನು "ಭಾರತ್ ರಾಷ್ಟ್ರ ಸಮಿತಿ" ಎಂದು ಮರುನಾಮಕರಣ ಮಾಡಿದ್ದರು. ಈಗ ನೂತನ ರಾಷ್ಟ್ರೀಯ ಕಚೇರಿಯನ್ನು ಸ್ಥಾಪಿಸುವ ಮೂಲಕ 2024ರ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ.
ಕಚೇರಿ ಉದ್ಘಾಟನೆಗೆ ಹಲವು ರಾಜಕೀಯ ಪಕ್ಷಗಳ ನಾಯಕರು ಮತ್ತು ರೈತ ಮುಖಂಡರು ಸಾಥ್ ನೀಡಿದ್ದಾರೆ.

ತೆಲಂಗಾಣ ಸಿಎಂಗೆ ಅಖಿಲೇಶ್ ಯಾದವ್, ಕುಮಾರಸ್ವಾಮಿ ಸಾಥ್
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಪ್ರಾದೇಶಿಕ ಪಕ್ಷಗಳ ನಾಯಕರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇವರ ಜೊತೆಗೆ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಒಡಿಶಾ ಮತ್ತು ತಮಿಳುನಾಡಿನ ರೈತ ಮುಖಂಡರು ಉಪಸ್ಥಿತರಿದ್ದು, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ಗೆ ಬೆಂಬಲ ಘೋಷಿಸಿದ್ದಾರೆ.

ಶೃಂಗೇರಿ ಪೀಠದ ಗೋಪಿಕೃಷ್ಣ ಶರ್ಮಾ ನೇತೃತ್ವದಲ್ಲಿ ರಾಜಶ್ಯಾಮಲ ಯಾಗ
ನೂತನ ಕಚೇರಿ ಉದ್ಘಾಟನ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿ ಕೆಸಿಆರ್, ಬಿಆರ್ಎಸ್ ಪಕ್ಷದ ಕಚೇರಿಯಲ್ಲಿ ಎರಡು ದಿನಗಳ ರಾಜಶ್ಯಾಮಲ ಯಾಗದ ಸಮಾರೋಪವನ್ನು ಸೂಚಿಸಿ ಪೂರ್ಣಾಹುತಿ ನೆರವೇರಿಸಿದರು.
ಶೃಂಗೇರಿ ಪೀಠದ ಗೋಪಿಕೃಷ್ಣ ಶರ್ಮಾ ಮತ್ತು ಫಣಿ ಶಶಾಂಕ ಶರ್ಮಾ ನೇತೃತ್ವದಲ್ಲಿ ಒಟ್ಟು 12 ಅರ್ಚಕರು ಯಾಗವನ್ನು ನಡೆಸಿಕೊಟ್ಟರು. ನವ ಚಂಡಿ ಹೋಮ ಮತ್ತು ರಾಜಶ್ಯಾಮಲ ಹೋಮವನ್ನೂ ನಡೆಸಿದ್ದಾರೆ.

ಪಕ್ಷದ ಶಾಸಕರು, ಸಂಸದರಿಂದ ತುಂಬಿದ್ದ ನೂತನ ಕಚೇರಿ
ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಪಕ್ಷದ ಸಚಿವರು, ಸಂಸದರು, ಶಾಸಕರು, ಎಂಎಲ್ಸಿಗಳು ಮತ್ತು ಇತರ ಹಿರಿಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಆಗಮಿಸಿದ್ದರಿಂದ ಬಿಆರ್ಎಸ್ ರಾಷ್ಟ್ರೀಯ ಕಚೇರಿಯಲ್ಲಿ ಹಬ್ಬದ ವಾತಾವರಣ ಕಂಡುಬಂದಿತ್ತು.
ಮುಖ್ಯಮಂತ್ರಿ ಕೆಸಿಆರ್ ಪಕ್ಷದ ಧ್ವಜಾರೋಹಣ ಮಾಡಿದ ಕೂಡಲೇ ಬಿಆರ್ಎಸ್ ಮುಖಂಡರು 'ಜೈ ಭಾರತ್' ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಇದೇ ವೇಳೆ ಬಿಆರ್ಎಸ್ ಕಾರ್ಯಾಧ್ಯಕ್ಷ ಹಾಗೂ ಸಚಿವ ಕೆ.ಟಿ.ರಾಮರಾವ್ ಬಿಆರ್ಎಸ್ ರಾಷ್ಟ್ರೀಯ ಪಕ್ಷದ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿಲಿಲ್ಲ. ಗೈರು ಹಾಜರಿಗಾಗಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರಿಂದ ಅನುಮತಿ ಪಡೆದಿದ್ದರು.
ಇನ್ನು, ತೆಲಂಗಾಣ ರಾಜ್ಯವನ್ನು ಪ್ರಗತಿಪರ ಪಥದಲ್ಲಿ ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಅವರು ದೇಶದಲ್ಲಿ ಗುಣಾತ್ಮಕ ಬದಲಾವಣೆಗಾಗಿ ರಾಷ್ಟ್ರ ರಾಜಕಾರಣಕ್ಕೆ ಕಾಲಿಡುತ್ತಿದ್ದಾರೆ. ಬಿಆರ್ಎಸ್ ಜನರ ಕಲ್ಯಾಣ ಮತ್ತು ಅಭಿವೃದ್ಧಿ ನೀತಿಗಳನ್ನು ರಾಷ್ಟ್ರದ ಉಳಿದ ಭಾಗಗಳಿಗೆ ಪರಿಚಯಿಸುತ್ತದೆ ಎಂದು ಸಚಿವ ಕೆ.ಟಿ.ರಾಮರಾವ್ ಹೇಳಿದ್ದಾರೆ.

ಕರ್ನಾಟಕದಲ್ಲೂ ಕಣ್ಣಕ್ಕಿಳಿಯಲಿದೆಯೇ ಬಿಆರ್ಎಸ್?
ಮುಂಬರುವ 2024ರ ರಾಷ್ಟೀಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 'ಮಿಷನ್ 2024' ಕ್ಕೆ ಸಿದ್ಧರಾಗಿರುವ ಸಿಎಂ ಕೆ ಚಂದ್ರಶೇಖರ್ ರಾವ್ ತಮ್ಮ ಪಕ್ಷ ತೆಲಂಗಾಣ ರಾಷ್ಟ್ರ ಸಮಿತಿಯನ್ನು "ಭಾರತ್ ರಾಷ್ಟ್ರ ಸಮಿತಿ" ಎಂದು ಮರುನಾಮಕರಣ ಮಾಡಿದ್ದಾರೆ.
ಇನ್ನು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಯೂ ಪಕ್ಷ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications