Earthquake: ತೆಲಂಗಾಣದ ವಾರಂಗಲ್ನಲ್ಲಿ 3.6 ತೀವ್ರತೆಯ ಭೂಕಂಪ!
ತೆಲಂಗಾಣ, ಆಗಸ್ಟ್ 25: ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭೂಕಂಪದ ಕಂಪನಗಳು ನಿರಂತರವಾಗಿ ಅನುಭವವಾಗುತ್ತಿದ್ದು, ತೆಲಂಗಾಣದ ವಾರಂಗಲ್ ಸಂಭವಿಸಿದೆ.
ಹೌದು, ತೆಲಂಗಾಣದ ವಾರಂಗಲ್ನಲ್ಲಿ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಶುಕ್ರವಾರ ಬೆಳಗ್ಗೆ 4.43 ರ ಸುಮಾರಿಗೆ ಭೂಕಂಪ ಸಂಭವಿಸಿದೆ ಮತ್ತು 30 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ.

ಆಗಸ್ಟ್ 23 ರಂದು ಟಿಬೆಟ್ನ ಕ್ಸಿಜಾಂಗ್ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿತ್ತು. 10 ಕಿ.ಮೀ ಆಳದಲ್ಲಿ ಸಂಭವಿಸಿತ್ತು. ಆಗಸ್ಟ್ 19, ಸಣ್ಣ ಪ್ರಮಾಣದ ಭೂಕಂಪನ ಸಂಭವಿಸಿದ ಕೇವಲ ದಿನಗಳ ನಂತರ ಈ ಭೂಕಂಪ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಆತಂಕದಲ್ಲಿದ್ದಾರೆ.
ಭೂಕಂಪದ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಇಲ್ಲಿವೆ
ಭೂಕಂಪದ ಸಮಯದಲ್ಲಿ ಶಾಂತವಾಗಿರಬೇಕು ಹಾಗೂ ಭೂಕಂಪ ಸಂದರ್ಭದಲ್ಲಿ ಭಯ ಬಿಳುವುದು ಸಹಜ ಆದರೆ, ಈ ಸಂಧರ್ಭದಲ್ಲಿ ನಿಮ್ಮ ಜೊತೆಗಿರುವವರಿಗೆ ಧೈರ್ಯ ತುಂಬುವ ಕೆಲಸವನ್ನ ಮಾಡಬೇಕು
ಭೂಕಂಪ ಸಂಭವಿಸಿದಾಗ ಹಲವು ಹಾನಿಗಳಾಗುತ್ತವೆ. ಹೀಗಾಗಿ ಭೂಕಂಪನ ಸಮಯದಲ್ಲಿ ಕಟ್ಟಡಗಳಿಂದ ದೂರವಿರುವ ತೆರೆದ ಸ್ಥಳದಂತಹ ಸುರಕ್ಷಿತ ಸ್ಥಳವನ್ನು ಹುಡುಕಿ. ಬಯಲು ಪ್ರದೇಶಳತ್ತ ತೆರಳುವುದು ಉತ್ತಮ.
ಭೂಕಂಪ ಸಂಭವಿಸಿದ ಸಮಯದಲ್ಲಿ ನೀವು ಒಳಾಂಗಣದಲ್ಲಿದ್ದರೆ ಗಾಜಿನ ಕಿಟಕಿಗಳ ಬಾಗಿಲುಗಳನ್ನು ಹಾಕಿ.
ಇನ್ನೂ ಭೂಕಂಪ ಸಂಭವಿಸಿದ ಸಮಯದಲ್ಲಿ ಭಯದಿಂಧ ಕಟ್ಟಡದಿಂದ ಎಲ್ಲರೂ ಒಟ್ಟಿಗೆ ಹೊರಗೆ ಓಡುವುದನ್ನು ತಪ್ಪಿಸಿ, ಇದರಿಂದ ಕಾಲ್ತುಳಿತಕ್ಕೆ ಕಾರಣವಾಗಬಹುದು. ಇದರಿಂದ ಇನ್ನಷ್ಟು ಸಮಸ್ಯೆಗೂ ಕಾರಣವಾಗಬಹುದು.
ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಹೊರಾಂಗಣದಲ್ಲಿದ್ದರೆ, ಕಟ್ಟಡಗಳು, ತಂತಿಗಳಿಂದ ದೂರ ಇರಿ ಮತ್ತು ಚಲಿಸುತ್ತಿರುವ ವಾಹನಗಳನ್ನು ತಕ್ಷಣವೇ ನಿಲ್ಲಿಸಿ. ಅಲ್ಲದೇ ಮನೆಯಲ್ಲಿ ಕಟ್ಟಿ ಹಾಕಿರುವ ಸಾಕು ಪ್ರಾಣಿಗಳನ್ನು ತಕ್ಷಣವೇ ಬಿಟ್ಟು ಕಳುಹಿಸಬೇಕು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications